ಎನ್ ಶಶಿಕುಮಾರ್ 
ರಾಜ್ಯ

ಭ್ರಷ್ಟಾಚಾರ ಆರೋಪ: ಮಂಗಳೂರು ನಗರ ಪೊಲೀಸ್ ಕಮಿಷನರ್ ಗೆ ಲೋಕಾಯುಕ್ತ ನೋಟಿಸ್ ಜಾರಿ

ಉಳ್ಳಾಲ ನಿವಾಸಿ ಮೊಹಮ್ಮದ್ ಕಬೀರ್ ಎಂಬಾತ ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಹಾಗೂ ಇನ್ನಿಬ್ಬರು ಪೊಲೀಸ್ ಅಧಿಕಾರಿಗಳ ವಿರುದ್ಧ ಮಾಡಿರುವ ಭ್ರಷ್ಟಾಚಾರ ಆರೋಪದ ಕುರಿತು ವರದಿ ನೀಡುವಂತೆ ಲೋಕಾಯುಕ್ತರು ಎನ್.ಶಶಿಕುಮಾರ್ ಅವರನ್ನು ಕೇಳಿದ್ದಾರೆ.

ಮಂಗಳೂರು: ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಹಾಗೂ ಇನ್ನಿಬ್ಬರು ಪೊಲೀಸ್ ಅಧಿಕಾರಿಗಳ ವಿರುದ್ಧ ಕೇಳಿಬಂದಿರುವ ಭ್ರಷ್ಟಾಚಾರ ಆರೋಪದ ಕುರಿತು ವರದಿ ನೀಡುವಂತೆ ಎನ್.ಶಶಿಕುಮಾರ್ ಅವರನ್ನು ಲೋಕಾಯುಕ್ತರು ಕೇಳಿದ್ದಾರೆ.

2022ರ ಡಿಸೆಂಬರ್‌ನಲ್ಲಿ ಲೋಕಾಯುಕ್ತಕ್ಕೆ ಉಳ್ಳಾಲ ನಿವಾಸಿ ಮೊಹಮ್ಮದ್ ಕಬೀರ್ ದೂರು ನೀಡಿದ್ದರು. ಕಬೀರ್ ತಮ್ಮ ದೂರಿನಲ್ಲಿ ಉಳ್ಳಾಲ ಪೊಲೀಸ್ ಇನ್ಸ್‌ಪೆಕ್ಟರ್ ಸಂದೀಪ್ ಜಿಎಸ್ ಮತ್ತು ಪಿಎಸ್‌ಐ ಪ್ರದೀಪ್ ಅವರು ಗಾಂಜಾ ಮತ್ತು ಮರಳು ಮಾಫಿಯಾ ಮತ್ತು ಹೋಟೆಲ್ ಮಾಲೀಕರಿಂದ ಲಂಚ ವಸೂಲಿ ಮಾಡುವ ಮೂಲಕ ಅಕ್ರಮ ಆಸ್ತಿ ಗಳಿಸಿದ್ದಾರೆ ಎಂದು ಆರೋಪಿಸಿದ್ದರು. 

ಅಲ್ಲದೆ, ಶಶಿಕುಮಾರ್ ಅವರು ಪೊಲೀಸ್ ಕಮಿಷನರ್ ಆಗಿ ಅಧಿಕಾರ ವಹಿಸಿಕೊಂಡ ನಂತರ ಮಂಗಳೂರು ನಗರ ಪೊಲೀಸ್ ಕಮಿಷನರೇಟ್‌ನಲ್ಲಿ ಭ್ರಷ್ಟಾಚಾರ ಹೆಚ್ಚಾಗಿದೆ ಎಂದು ದೂರಿದ್ದರು.

ಅಲ್ಲದೆ, ಈ ಕುರಿತು ಮುಖ್ಯ ಕಾರ್ಯದರ್ಶಿ, ಡಿಜಿಪಿ, ಲೋಕಾಯುಕ್ತ, ಎಸಿಬಿ, ಎಡಿಜಿಪಿ ಮತ್ತು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳಿಗೆ ಇಮೇಲ್ ಮೂಲಕ ದೂರು ಸಲ್ಲಿಸಿದ್ದರೂ ಯಾವುದೇ ಕ್ರಮವಾಗಿಲ್ಲ ಎಂದು ಕಬೀರ್ ಹೇಳಿದ್ದಾರೆ. ಕ್ರಮದ ಬದಲಾಗಿ ತನಗೆ ಬೆದರಿಕೆ ಕರೆಗಳು ಬರಲಾರಂಭಿಸಿತ್ತು. ಅಲ್ಲದೆ ಪೊಲೀಸರು ಪದೇ ಪದೇ ವಿಚಾರಣೆಗೆ ಒಳಪಡಿಸಿದರು ಎಂದು ದೂರಿದ್ದಾರೆ.

ಲೋಕಾಯುಕ್ತರು ಲೋಕಾಯುಕ್ತ ಕಾಯ್ದೆಯ ಸೆಕ್ಷನ್ 9ರ ಅಡಿಯಲ್ಲಿ ಆರೋಪಿತ ಪೊಲೀಸ್ ಅಧಿಕಾರಿಗಳ ವಿರುದ್ಧ ಅಧಿಕಾರ ದುರುಪಯೋಗ ಮತ್ತು ಭ್ರಷ್ಟಾಚಾರದ ಪ್ರಕರಣದ ಬಗ್ಗೆ ತನಿಖೆ ನಡೆಸುವುದು ಸೂಕ್ತ ಎಂದು ಹೇಳಿದರು.

ಇದಲ್ಲದೆ, 'ಈ ವಿಷಯದಲ್ಲಿ ಯಾವುದೇ ತನಿಖೆಯನ್ನು ಕೈಗೆತ್ತಿಕೊಳ್ಳುವ ಮೊದಲು ದೂರಿಗೆ ಸಂಬಂಧಿಸಿದಂತೆ ಪ್ರತಿವಾದಿ ಪೊಲೀಸ್ ಆಯುಕ್ತರಿಂದ 2023ರ ಫೆಬ್ರವರಿ 15ರೊಳಗೆ ವರದಿಯನ್ನು ಕೇಳಲಾಗಿದೆ ಎಂದು ಲೋಕಾಯುಕ್ತ ಹೇಳುತ್ತದೆ.

ಇನ್ನುಳಿದಂತೆ ದೂರನ್ನು ಪರಿಶೀಲಿಸಿ ವರದಿ ಸಲ್ಲಿಸುವುದಾಗಿ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನಾನು ದಕ್ಷಿಣ ಎಸಿಪಿಯಿಂದ ತನಿಖೆಯ ವರದಿಯನ್ನು ಕೇಳಿದ್ದು ಅದನ್ನು ಸಲ್ಲಿಸಲಾಗುವುದು ಎಂದಿದ್ದಾರೆ.

ತಮ್ಮ ವಿರುದ್ಧ ಲೋಕಾಯುಕ್ತದಲ್ಲಿ ದೂರು ದಾಖಲಾಗಿರುವ ಬಗ್ಗೆ ಎನ್ ಶಶಿಕುಮಾರ್ ಅವರನ್ನು ಪ್ರಶ್ನಿಸಿದ್ದಕ್ಕೆ ನನಗೆ ಯಾವುದೇ ನೋಟಿಸ್ ಬಂದಿಲ್ಲ. ಘಟಕ ಅಧಿಕಾರಿಯಾಗಿ ಪರೀಕ್ಷಿಸಲು ನನ್ನನ್ನು ಕೇಳಲಾಗಿದೆ. ಇತರ ವಿಷಯಗಳು ನನ್ನ ವ್ಯಾಪ್ತಿಯಲ್ಲಿಲ್ಲ. ನನ್ನ ಮೇಲೆ ಆರೋಪವಿದ್ದರೆ ಸಮರ್ಥರು ವಿಚಾರಿಸುತ್ತಾರೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT