ವಿಂಗ್ ಕಮಾಂಡರ್ ಹನುಮಂತ್ ರಾವ್ ಸಾರಥಿ 
ರಾಜ್ಯ

ಯುದ್ಧ ವಿಮಾನ ದುರಂತ: ಅಂತಿಮ ಸಂಸ್ಕಾರಕ್ಕಾಗಿ ಬೆಳಗಾವಿಗೆ ಬಂದ ವಿಂಗ್ ಕಮಾಂಡರ್ ಪಾರ್ಥಿವ ಶರೀರ

ಮಧ್ಯಪ್ರದೇಶದಲ್ಲಿ ಸುಖೋಯ್-30ಎಂಕೆಐ ಮತ್ತು ಮಿರಾಜ್-2000 ಯುದ್ಧ ವಿಮಾನಗಳ ನಡುವೆ ಸಂಭವಿಸಿದ ವಿಮಾನ ಅಪಘಾತದಲ್ಲಿ ಮೃತಪಟ್ಟಿದ್ದ ವಿಂಗ್ ಕಮಾಂಡರ್ ಹನುಮಂತ್ ರಾವ್ ಸಾರಥಿ ಅವರ ಮೃತದೇಹವನ್ನು ಭಾನುವಾರ ಮಧ್ಯಾಹ್ನ ಬೆಳಗಾವಿಗೆ ತರಲಾಗಿದೆ. 

ಬೆಳಗಾವಿ: ಮಧ್ಯಪ್ರದೇಶದಲ್ಲಿ ಸುಖೋಯ್-30ಎಂಕೆಐ ಮತ್ತು ಮಿರಾಜ್-2000 ಯುದ್ಧ ವಿಮಾನಗಳ ನಡುವೆ ಸಂಭವಿಸಿದ ವಿಮಾನ ಅಪಘಾತದಲ್ಲಿ ಮೃತಪಟ್ಟಿದ್ದ ವಿಂಗ್ ಕಮಾಂಡರ್ ಹನುಮಂತ್ ರಾವ್ ಸಾರಥಿ ಅವರ ಮೃತದೇಹವನ್ನು ಭಾನುವಾರ ಮಧ್ಯಾಹ್ನ ಬೆಳಗಾವಿಗೆ ತರಲಾಗಿದೆ. 

ಭಾರತೀಯ ವಾಯುಪಡೆಯ (ಐಎಎಫ್) ಎರಡು ಮುಂಚೂಣಿ ಯುದ್ಧ ವಿಮಾನಗಳು ಶನಿವಾರ ಮಧ್ಯಪ್ರದೇಶದ ಮೊರೆನಾ ಜಿಲ್ಲೆಯಲ್ಲಿ ತರಬೇತಿ ಕಾರ್ಯಾಚರಣೆಯ ಸಂದರ್ಭದಲ್ಲಿ ಪತನಗೊಂಡಿದ್ದವು. ಇದರ ಪರಿಣಾಮವಾಗಿ ವಿಂಗ್ ಕಮಾಂಡರ್ ಸಾರಥಿ ಸಾವಿಗೀಡಾಗಿದ್ದರು ಮತ್ತು ಇತರ ಇಬ್ಬರು ಪೈಲಟ್‌ಗಳು ಸುರಕ್ಷಿತವಾಗಿ ಬಂದರು.

ವಿಶೇಷ ಐಎಎಫ್ ವಿಮಾನದ ಮೂಲಕ ಸಾರಥಿ ಅವರ ಪಾರ್ಥಿವ ಶರೀರವನ್ನು ತರಲಾಗಿದ್ದು, ನಂತರ ಅದನ್ನು ಗಣೇಶಪುರದಲ್ಲಿರುವ ಅವರ ಮನೆಗೆ ಕೊಂಡೊಯ್ಯಲಾಗುತ್ತದೆ. 

ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿರುವ ಟ್ಯಾಕ್ಟಿಕ್ಸ್ ಮತ್ತು ಏರ್ ಕಾಂಬಾಟ್ ಡೆವಲಪ್‌ಮೆಂಟ್ ಎಸ್ಟಾಬ್ಲಿಷ್‌ಮೆಂಟ್ (ಟಿಎಸಿ-ಡಿಇ) ಬೋಧಕ ವಿಂಗ್ ಕಮಾಂಡರ್ ಆಗಿದ್ದ ಸಾರಥಿ ಅವರ ನಿವಾಸದಲ್ಲಿ ಕತ್ತಲೆ ಕವಿದಿದೆ. ಅವರ ಅಕಾಲಿಕ ನಿಧನದಿಂದ ಕುಟುಂಬಸ್ಥರು ಮತ್ತು ಬಂಧುಗಳ ಆಕ್ರಂದನ ಮುಗಿಲು ಮುಟ್ಟಿದೆ.

35 ವರ್ಷದ ಸಾರಥಿ ಅವರಿಗೆ ಪತ್ನಿ, ಮೂರು ವರ್ಷದ ಮಗಳು ಮತ್ತು ಒಂದು ವರ್ಷದ ಮಗ ಇದ್ದಾರೆ.

ಸಾರಥಿ ಅವರ ತಂದೆ ರೇವಣಸಿದ್ದಪ್ಪ ಸಾರಥಿ ನಿವೃತ್ತ ಗೌರವ ಕ್ಯಾಪ್ಟನ್ ಮತ್ತು ಸಹೋದರ ಪ್ರವೀಣ್ ಸಾರಥಿ ಗ್ರೂಪ್ ಕ್ಯಾಪ್ಟನ್ ಆಗಿ ಸೇವೆ ಸಲ್ಲಿಸುತ್ತಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಯುಕ್ರೇನ್-ರಷ್ಯಾ ಶಾಂತಿ ಒಪ್ಪಂದ ಸನಿಹ: ಸುಳಿವು ನೀಡಿದ ಯುಕ್ರೇನ್

2026 T20 ವಿಶ್ವಕಪ್: ಕೊಲಂಬೋದಲ್ಲಿ ಫೆ.15 ರಂದು ಭಾರತ- ಪಾಕ್ ಪಂದ್ಯ

ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು: ಸಿಎಂ, ಡಿಸಿಎಂ ಸಂತಾಪ

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ರಾಸಾಯನಿಕಗಳು, ಎಲೆಕ್ಟ್ರಾನಿಕ್ ಘಟಕಗಳ ಸುಲಭ ಲಭ್ಯತೆಯಿಂದ ಐಇಡಿ ಅಪಾಯ ಹೆಚ್ಚು: NSG

SCROLL FOR NEXT