ಸಂಗ್ರಹ ಚಿತ್ರ 
ರಾಜ್ಯ

ಕಳಪೆ ಸ್ಥಿತಿಯಲ್ಲಿರುವ 340 ಆ್ಯಂಬುಲೆನ್ಸ್ ವಾಹನಗಳ ಸೇವೆ ಸ್ಥಗಿತಗೊಳಿಸಲು ಆರೋಗ್ಯ ಇಲಾಖೆ ಮುಂದು!

ಕಳಪೆ ಸ್ಥಿತಿಗೆ ತಲುಪಿರುವ ರಾಜ್ಯದಲ್ಲಿ '108' ಆಂಬ್ಯುಲೆನ್ಸ್ ಸೇವೆಯಡಿ ಚಾಲನೆಯಲ್ಲಿರುವ 340 ಆಂಬ್ಯುಲೆನ್ಸ್‌ಗಳನ್ನು ಸ್ಥಗಿತಗೊಳಿಸಲು ರಾಜ್ಯ ಆರೋಗ್ಯ ಇಲಾಖೆ ನಿರ್ಧರಿಸಿದೆ,

ಬೆಂಗಳೂರು: ಕಳಪೆ ಸ್ಥಿತಿಗೆ ತಲುಪಿರುವ ರಾಜ್ಯದಲ್ಲಿ '108' ಆಂಬ್ಯುಲೆನ್ಸ್ ಸೇವೆಯಡಿ ಚಾಲನೆಯಲ್ಲಿರುವ 340 ಆಂಬ್ಯುಲೆನ್ಸ್‌ಗಳನ್ನು ಸ್ಥಗಿತಗೊಳಿಸಲು ರಾಜ್ಯ ಆರೋಗ್ಯ ಇಲಾಖೆ ನಿರ್ಧರಿಸಿದೆ,

ನಿಯಮಿತ ಕಾರ್ಯವಿಧಾನದಂತೆ ಆಂಬ್ಯುಲೆನ್ಸ್‌ಗಳನ್ನು ಬದಲಾಯಿಸಲು ಅಧಿಕಾರಿಗಳು ನಿರ್ಧರಿಸಿದ್ದಾರೆಂದು ತಿಳಿದುಬಂದಿದೆ.

4 ಲಕ್ಷ ಕಿಲೋಮೀಟರ್ ದೂರವನ್ನು ಕ್ರಮಿಸುವ ಎಲ್ಲಾ ಆಂಬ್ಯುಲೆನ್ಸ್‌ಗಳನ್ನು ನಾಲ್ಕು ವರ್ಷಗಳಲ್ಲಿ ಬದಲಾಯಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಉಪನಿರ್ದೇಶಕ (ಇಎಂಆರ್ಐ-108) ಡಾ ಆರ್ ನಾರಾಯಣ್ ಅವರು ಮಾತನಾಡಿ, 2015-16ರಲ್ಲಿ ಕಳಪೆ ಸ್ಥಿತಿಗೆ ತಲುಪಿದ್ದ ಆ್ಯಂಬುಲೆನ್ಸ್ ಗಳನ್ನು ಬದಲಾಯಿಸಲಾಗಿತ್ತು. ಪ್ರಸ್ತುತ ಬದಲಿಸಲು ಮುಂದಾಗಿರುವ 340 ಆ್ಯಂಬುಲೆನ್ಸ್ ಗಳು ಸುಮಾರಿ 7 ವರ್ಷಗಳಷ್ಟು ಹಳೆಯದ್ದಾಗಿವೆ. ಹೀಗಾಗಿ ಅವುಗಳನ್ನು ಬದಲಿಸಲು ನಿರ್ಧರಿಸಲಾಗಿದೆ ಎಂದು ಹೇಳಿದ್ದಾರೆ.

ಆ್ಯಂಬುಲೆನ್ಸ್ ಗಳ ಬದಲಾವಣೆ ಮಾಡುವ ಸಮಯದಲ್ಲಿ ಸೇವೆಗಳಲ್ಲಿ ಯಾವುದೇ ವ್ಯತ್ಯಯಗಳು ಕಂಡು ಬರುವುದಿಲ್ಲ ಎಂದು ತಿಳಿಸಿದ್ದಾರೆ.

ಜಿವಿಕೆ-ಇಎಂಆರ್'ಐ ಕಳೆದ 14 ವರ್ಷಗಳಿಂದ ರಾಜ್ಯದಲ್ಲಿ '108' ಆಂಬ್ಯುಲೆನ್ಸ್ ಸೇವೆಯನ್ನು ಸೇವೆಯನ್ನು ಒದಗಿಸುತ್ತಿದೆ. ಹೊಸ ಆಂಬುಲೆನ್ಸ್ ಖರೀದಿ ಕುರಿತ ಪ್ರಕ್ರಿಯೆ ಈಗಾಗಲೇ ಆರಂಭವಾಗಿದೆ. 3-4 ತಿಂಗಳುಗಳಲ್ಲಿ ಹೊಸ ಆ್ಯಂಬುಲೆನ್ಸ್ ಗಳು ರಸ್ತೆಗಿಳಿಯಲಿವೆ ಎಂದು ಹೇಳಿದ್ದಾರೆ.

ಈ ಹಿಂದೆ, ಆಂಬ್ಯುಲೆನ್ಸ್‌ಗಳ ನಿಯಮಗಳು ಮತ್ತು ಗುಣಮಟ್ಟ ಪರಿಶೀಲನೆಗಳು ಹೆಚ್ಚು ಕಟ್ಟುನಿಟ್ಟಾಗಿರಲಿಲ್ಲ. ಇದೀಗ, ಗುಣಮಟ್ಟದ ಸೇವೆಯನ್ನು ಒದಗಿಸುವಲ್ಲಿ ಯಾವುದೇ ರಾಜಿ ಮಾಡಿಕೊಳ್ಳದಂತೆ ಖಚಿತಪಡಿಸಿಕೊಳ್ಳಲು ಕಂಪನಿಗಳು ಕಟ್ಟುನಿಟ್ಟಾಗಿ ಅನುಸರಿಸಬೇಕಾದ ಮಾರ್ಗಸೂಚಿಗಳನ್ನು ರೂಪಿಸಲು ಆರೋಗ್ಯ ಇಲಾಖೆ ಚಿಂತನೆ ನಡೆಸಿದ್ದು, ಈ ನಿಟ್ಟಿನಲ್ಲಿ ಹೊಸ ಸೇವಾ ಪೂರೈಕೆದಾರರೊಂದಿಗೆ ರಾಜ್ಯಕ್ಕೆ ಉತ್ತಮ ಗುಣಮಟ್ಟದ ಆಂಬ್ಯುಲೆನ್ಸ್‌ಗಳನ್ನು ಒದಗಿಸುವ ಗುರಿಯನ್ನು ಆರೋಗ್ಯ ಇಲಾಖೆ ಹೊಂದಿದೆ ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್‌ ಸರ್ಕಾರ ವಿರುದ್ಧ ಪ್ರತಿಭಟನೆ: ಹಿಂಸಾಚಾರದಲ್ಲಿ ಮೃತಪಟ್ಟವರ ಸಂಖ್ಯೆ 116 ಕ್ಕೆ ಏರಿಕೆ

ಕೇಂದ್ರ ಬಜೆಟ್ 2026-27: ರಾಜ್ಯದ ಹಣಕಾಸು ಸಮತೋಲನ ಪುನಃಸ್ಥಾಪಿಸಲು ಹೆಚ್ಚಿನ ಅನುದಾನ ಒದಗಿಸಿ; ಕೇಂದ್ರಕ್ಕೆ ರಾಜ್ಯ ಸರ್ಕಾರ ಆಗ್ರಹ

ನೋಂದಣಿ ಇಲ್ಲದೆ 'stock tips': ‘Finfluencers’ಗಳ ಸುಮಾರು 1 ಲಕ್ಷ ವಿಡಿಯೋ ಡಿಲೀಟ್​ ಮಾಡಿದ SEBI

ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಯಿಂದ ರಿಷಭ್ ಪಂತ್ ಔಟ್; ಭಾರತ ತಂಡ ಸೇರಿದ 24 ವರ್ಷದ ಆಟಗಾರ!

ಕೇರಳದ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಹೋರಾಟ ನಡೆಸುತ್ತೇವೆಂದ ಸಿಎಂ ಸಿದ್ದರಾಮಯ್ಯ

SCROLL FOR NEXT