ವಿಎಚ್‌ಪಿ ನಾಯಕ ಶರಣ್ ಪಂಪ್‌ವೆಲ್ ವಿರುದ್ಧ ಮಂಗಳೂರು ನಗರ ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್ ಅವರಿಗೆ ದೂರು ಸಲ್ಲಿಸಿದ ಫಾರೂಕ್ 
ರಾಜ್ಯ

ಪ್ರವೀಣ್ ನೆಟ್ಟಾರು ಸಾವಿನ ಸೇಡಿಗಾಗಿ ಫಾಜಿಲ್‌ ಹತ್ಯೆ; ಶರಣ್ ಪಂಪ್‌ವೆಲ್ ವಿರುದ್ಧ ಫಾಜಿಲ್ ತಂದೆ ದೂರು ದಾಖಲು

ಮಂಗಳೂರು ಸಮೀಪದ ಸುರತ್ಕಲ್‌ನಲ್ಲಿ ಬರ್ಬರವಾಗಿ ಹತ್ಯೆಗೀಡಾದ ಫಾಜಿಲ್‌ನ ತಂದೆ ಫಾರೂಕ್ ಅವರು ಸೋಮವಾರ ಮಂಗಳೂರು ನಗರ ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್ ಅವರಿಗೆ ದೂರು ಸಲ್ಲಿಸಿದ್ದು, ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್‌ವೆಲ್ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದ್ದಾರೆ.

ಮಂಗಳೂರು: ಮಂಗಳೂರು ಸಮೀಪದ ಸುರತ್ಕಲ್‌ನಲ್ಲಿ ಬರ್ಬರವಾಗಿ ಹತ್ಯೆಗೀಡಾದ ಫಾಜಿಲ್‌ನ ತಂದೆ ಫಾರೂಕ್ ಅವರು ಸೋಮವಾರ ಮಂಗಳೂರು ನಗರ ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್ ಅವರಿಗೆ ದೂರು ಸಲ್ಲಿಸಿದ್ದು, ಸಾರ್ವಜನಿಕ ಯಾತ್ರೆಯಲ್ಲಿ 'ಪ್ರವೀಣ್ ನೆಟ್ಟಾರು ಹತ್ಯೆಗೆ ಸೇಡು ತೀರಿಸಿಕೊಳ್ಳಲು ಹಿಂದೂ ಕಾರ್ಯಕರ್ತರು ಫಾಜಿಲ್‌ನನ್ನು ಹತ್ಯೆ ಮಾಡಿದ್ದಾರೆ' ಎಂದು ಹೇಳಿಕೆ ನೀಡಿರುವ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್‌ವೆಲ್ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದ್ದಾರೆ.

ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಫಾರೂಕ್, ತನ್ನ ಮಗನ ಹತ್ಯೆಯ ಹಿಂದಿರುವವರನ್ನು ಪತ್ತೆ ಮಾಡುವಂತೆ ಪೊಲೀಸರಿಗೆ ಒತ್ತಾಯಿಸಿದ್ದೇನೆ ಎಂದು ತಿಳಿಸಿದ್ದಾರೆ.

'ನಮಗೆ ಈ ಮೊದಲು ಅನುಮಾನವಿತ್ತು. ಆದರೆ, ಈಗ ಅವರೇ ನನ್ನ ಮಗನನ್ನು ಕೊಂದಿದ್ದಾರೆ ಎಂಬುದು ಶರಣ್ ಪಂಪ್‌ವೆಲ್ ಹೇಳಿಕೆ ನೀಡಿದ ಮೇಲೆ ಸ್ಪಷ್ಟವಾಗಿದೆ. ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ನನಗೆ ನ್ಯಾಯ ಬೇಕು ಮತ್ತು ಶರಣ್ ವಿರುದ್ಧ ಯುಎಪಿಎ ಮೊಕದ್ದಮೆ ಹೂಡುವಂತೆ ಪೊಲೀಸರನ್ನು ಒತ್ತಾಯಿಸುತ್ತೇನೆ ಎಂದು ಹೇಳಿದರು.

ಈ ಹಿಂದೆ ವಿಎಚ್‌ಪಿಯ ಶೌರ್ಯ ಯಾತ್ರೆ ವೇಳೆ ಮಾತನಾಡಿದ್ದ ಶರಣ್ ಪಂಪ್‌ವೆಲ್, ಅಗತ್ಯ ಬಿದ್ದರೆ ಭಜರಂಗದಳ ಹೋರಾಟ ಮಾಡುತ್ತದೆ, ಕೆಲವೊಮ್ಮೆ ‌ನಾವು ನುಗ್ಗಿ ಹೊಡೆಯುತ್ತೇವೆ. ಪ್ರವೀಣ್ ನೆಟ್ಟಾರು ‌ಹತ್ಯೆಯಾದಾಗ ಹಿಂದೂ ಸಮಾಜ ಕಣ್ಣೀರಲ್ಲಿ ಮುಳುಗಿತ್ತು. ಇಡೀ ಜಿಲ್ಲೆ ಒಬ್ಬ ಉತ್ತಮ ಕಾರ್ಯಕರ್ತನ ಬಲಿದಾನಕ್ಕೆ ಬೇಸರ ಪಟ್ಟಿತ್ತು. ಆಗ ನಮ್ಮ ಕಾರ್ಯಕರ್ತರು ಅವನ ಬಲಿದಾನ ನೋಡಿ ಸುಮ್ಮನೆ ಕೂರಲಿಲ್ಲ. ನಮ್ಮ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆಗೆ ಸೇಡು ತೀರಿಸಿಕೊಳ್ಳಲು ಸುರತ್ಕಲ್​ಗೆ‌ ಹೋಗಿ ನುಗ್ಗಿ ನುಗ್ಗಿ ಹೊಡೆದರು. ಅದು ನಮ್ಮ ಶೌರ್ಯ. ಸುರತ್ಕಲ್​ನಲ್ಲಿ ಹೊಡೆದ ವಿಡಿಯೋವನ್ನು ನೀವು ಎಲ್ಲರು ನೋಡಲೇಬೇಕು ಎಂದು ಬಹಿರಂಗ ಹೇಳಿಕೆ ನೀಡಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel