ಸಾಂದರ್ಭಿಕ ಚಿತ್ರ 
ರಾಜ್ಯ

ಕುಡಿದು ಬಂದು ಕಿರುಕುಳ; ಪೆಟ್ರೋಲ್ ಸುರಿದು ಪುತ್ರನನ್ನೇ ಸಜೀವ ದಹನ ಮಾಡಿದ ತಂದೆ!

ಚಿಕ್ಕಬಳ್ಳಾಪುರ ಜಿಲ್ಲೆಯ ವಾಣಿಗರಹಳ್ಳಿಯಲ್ಲಿ ಕುಡಿದು ಬಂದು ತನ್ನ ತಾಯಿಯ ಮೇಲೆ ಹಲ್ಲೆ ಮಾಡುತ್ತಿದ್ದ ಪುತ್ರನ ಕೃತ್ಯಕ್ಕೆ ಬೇಸತ್ತ ತಂದೆಯೊಬ್ಬರು, ಆತನ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವ ಘಟನೆ ಶನಿವಾರ ನಡೆದಿದೆ. 

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲೆಯ ವಾಣಿಗರಹಳ್ಳಿಯಲ್ಲಿ ಕುಡಿದು ಬಂದು ತನ್ನ ತಾಯಿಯ ಮೇಲೆ ಹಲ್ಲೆ ಮಾಡುತ್ತಿದ್ದ ಪುತ್ರನ ಕೃತ್ಯಕ್ಕೆ ಬೇಸತ್ತ ತಂದೆಯೊಬ್ಬರು, ಆತನ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವ ಘಟನೆ ಶನಿವಾರ ನಡೆದಿದೆ. 

ಪೊಲೀಸರ ಪ್ರಕಾರ, ನಿತ್ಯವೂ ಕುಡಿದು ಬರುತ್ತಿದ್ದ 28 ವರ್ಷದ ಆದರ್ಶ ಮನೆಯಲ್ಲಿ ಯಾವಾಗಲೂ ಗಲಾಟೆ ಮಾಡುತ್ತಿದ್ದನು. ಅಲ್ಲದೆ, ಇತರರೊಂದಿಗೂ ಜಗಳವಾಡುತ್ತಿದ್ದನು. ಆದರ್ಶನ ತಂದೆ ಜಯರಾಮಯ್ಯ (58) ಅವರು ಆತನಿಗೆ ಹಲವು ಬಾರಿ ಬುದ್ಧಿ ಹೇಳಿದರೂ ಪ್ರಯೋಜನವಾಗಿರಲಿಲ್ಲ. 

ಆದರ್ಶ ತನ್ನ ತಾಯಿಯ ಬಳಿ ಹಣ ಕೇಳಿದ್ದಾನೆ. ಆಕೆ, ಹಣ ನೀಡಲು ನಿರಾಕರಿಸಿದಾಗ ಆತ ಅವರ ಮೇಲೆ ಅಮಾನುಷವಾಗಿ ಹಲ್ಲೆ ಮಾಡಿದ್ದಾನೆ. ಇದರಿಂದ ಕೋಪಗೊಂಡ ಆದರ್ಶನ ತಂದೆ ಆತನಿಗೆ ಥಳಿಸಿದ್ದಾರೆ. ಹಲ್ಲೆ ತಾಳಲಾರದೆ ಆದರ್ಶ ಕುಸಿದು ಬಿದ್ದಿದ್ದಾನೆ. ಸಿಟ್ಟಿಗೆದ್ದ ಜಯರಾಮಯ್ಯ ಆದರ್ಶನ ಮೇಲೆ ಪೆಟ್ರೋಲ್ ಸುರಿದು ಸಜೀವ ದಹನ ಮಾಡಿದ್ದಾನೆ.

ದೊಡ್ಡಬೆಳವಂಗಲ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ವಿವರ ನಿರೀಕ್ಷಿಸಲಾಗುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

ಪಕ್ಷದ ಮೇಲೆ ನನಗೆ ನಂಬಿಕೆ ಇದೆ: ದುಡ್ಡು- ಬ್ಲಡ್ ನಿರಂತರ ಚಲನೆಯಲ್ಲಿ ಇರಬೇಕು; ಅಕ್ಕಪಕ್ಕದಲ್ಲಿ ಇರುವವರೇ ಮೋಸ ಮಾಡುತ್ತಾರೆ, ಎಚ್ಚರ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT