ಸುದ್ದಿಗೋಷ್ಠಿಯಲ್ಲಿ ಸ್ವಾಮೀಜಿಗಳು 
ರಾಜ್ಯ

ಗೋಹತ್ಯೆ ನಿಷೇಧ, ಮತಾಂತರ ನಿಷೇಧ ಕಾಯ್ದೆ ವಾಪಸ್ ಪಡೆದರೆ ಹೋರಾಟ: ಸ್ವಾಮೀಜಿಗಳಿಂದ ಸರ್ಕಾರಕ್ಕೆ ಎಚ್ಚರಿಕೆ

ಗೋಹತ್ಯೆ ನಿಷೇಧ ಮತ್ತು ಮತಾಂತರ ತಡೆ ಕಾಯ್ದೆಯನ್ನು ರಾಜ್ಯ ಸರ್ಕಾರ ಯಾವುದೇ ಕಾರಣಕ್ಕೂ ರದ್ದುಗೊಳಿಸಬಾರದು. ಈ ಕಾನೂನುಗಳನ್ನು ಹಿಂಪಡೆದರೆ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲಾಗುವುದು ಎಂದು ಸ್ವಾಮೀಜಿಗಳ ಸಮಾವೇಶದಲ್ಲಿ ಒತ್ತಾಯಿಸಲಾಯಿತು.

ಮಂಗಳೂರು: ಗೋಹತ್ಯೆ ನಿಷೇಧ ಮತ್ತು ಮತಾಂತರ ತಡೆ ಕಾಯ್ದೆಯನ್ನು ರಾಜ್ಯ ಸರ್ಕಾರ ಯಾವುದೇ ಕಾರಣಕ್ಕೂ ರದ್ದುಗೊಳಿಸಬಾರದು. ಈ ಕಾನೂನುಗಳನ್ನು ಹಿಂಪಡೆದರೆ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲಾಗುವುದು ಎಂದು ಸ್ವಾಮೀಜಿಗಳ ಸಮಾವೇಶದಲ್ಲಿ ಒತ್ತಾಯಿಸಲಾಯಿತು.

ಶುಕ್ರವಾರ ನಗರದಲ್ಲಿ ನಡೆದ ಸಮಾವೇಶದಲ್ಲಿ ಪಾಲ್ಗೊಂಡಿದ್ದ ಹಿಂದೂ ಧರ್ಮದರ್ಶಿಗಳು ಮತ್ತು ಮುಖಂಡರು, ಸರ್ಕಾರ ಇವೆರಡು ಕಾಯ್ದೆಗಳನ್ನು ರದ್ದುಗೊಳಿಸಿದರೆ, ಸಾಮಾಜಿಕ ಸಾಮರಸ್ಯಕ್ಕೆ ಧಕ್ಕೆಯಾಗುತ್ತದೆ. ನಾವೆಲ್ಲರೂ ರಾಜ್ಯಾದ್ಯಂತ ಪ್ರತಿಭಟನೆಗೆ ಇಳಿಯಬೇಕಾಗುತ್ತದೆ ಎಂದು ಎಚ್ಚರಿಸಿದರು. ಇ ವೇಳೆ ವಿಶ್ವ ಹಿಂದೂ ಪರಿಷತ್ತಿನ ಪ್ರತಿನಿಧಿಗಳೂ ಸಮಾವೇಶದಲ್ಲಿ ಪಾಲ್ಗೊಂಡಿದ್ದರು.

ಮತಾಂತರ ನಿಷೇಧ ಮತ್ತು ಗೋಹತ್ಯೆ ನಿಷೇಧ ಕಾಯ್ದೆಯನ್ನು ಹಿಂಪಡೆಯುವ ನಿರ್ಧಾರವನ್ನು ಸರ್ಕಾರ ತೆಗೆದುಕೊಂಡರೆ, ಆ ನಿರ್ಧಾರವನ್ನು ಹಿಂದೂ ವಿರೋಧಿ ಎಂದು ಪರಿಗಣಿಸಲಾಗುವುದು. ಇದು ಹಿಂದೂ ಭಾವನೆಗಳಿಗೆ ನೋವುಂಟು ಮಾಡಿದೆ ಎಂದು ಹೇಳಿದ್ದಾರೆ.

ಹಿಂದೂಗಳ ಭಾವನೆಗಳ ಮೇಲೆ ಯಾವುದೇ ರೀತಿಯ ರಾಜಿ ಮಾಡಿಕೊಳ್ಳದಂತೆ ಸರ್ಕಾರಕ್ಕೆ ಎಚ್ಚರಿಕೆ ನೀಡಿದ ಅವರು, ಇಂತಹ ಕ್ರಮಗಳು ಮುಂದುವರಿದರೆ ರಾಜ್ಯದಾದ್ಯಂತ ಸಾಧು-ಸಂತರು ವ್ಯಾಪಕ ಪ್ರತಿಭಟನೆಗಳನ್ನು ನಡೆಸಬೇಕಾಗುತ್ತದೆ ಎಂದು ಹೇಳಿದರು.

ಈ ಸಂಬಂಧ ಸಾಧು-ಸಂತರು ರಾಜ್ಯಪಾಲರು ಮತ್ತು ಮುಖ್ಯಮಂತ್ರಿಗಳಿಗೆ ಜ್ಞಾಪಕ ಪತ್ರವನ್ನು ಸಲ್ಲಿಸಲು ಯೋಜಿಸಿದೆ.

ಪತ್ರಿಕಾ ಪ್ರಕಟಣೆಯಲ್ಲಿ, 'ಮತಾಂತರ ನಿಷೇಧ ಕಾನೂನು ಮತ್ತು ಗೋಹತ್ಯೆ ತಡೆ ಮತ್ತು ಜಾನುವಾರು ಸಂರಕ್ಷಣೆ ಕಾಯ್ದೆ, 2020 ಗೆ ಸಂಬಂಧಿಸಿದಂತೆ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ತೆಗೆದುಕೊಂಡ ನಿರ್ಧಾರವನ್ನು ನಾವು ಬಲವಾಗಿ ವಿರೋಧಿಸುತ್ತೇವೆ. ಗೋಹತ್ಯೆಗೆ ಯಾವುದೇ ಅವಕಾಶ ನೀಡಬಾರದು. ಕಾನೂನುಗಳನ್ನು ಯಾವುದೇ ಕಾರಣಕ್ಕೂ ರದ್ದುಗೊಳಿಸಬಾರದು ಮತ್ತು ಅವುಗಳನ್ನು ಎತ್ತಿಹಿಡಿಯಲು ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಬೇಕು' ಎಂದಿದ್ದಾರೆ.

ಗೋಶಾಲೆಗಳನ್ನು ಮುಂದುವರಿಸಲು ಮತ್ತು ಸರ್ಕಾರಿ ಮತ್ತು ಖಾಸಗಿ ಗೋಶಾಲೆಗಳಿಗೆ ಹಣ ಹಂಚಿಕೆಗೆ ಅವರು ಒತ್ತಾಯಿಸಿದರು.

2023ರ ರಾಜ್ಯ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ಮತ್ತು ಚುನಾವಣಾ ಪ್ರಚಾರದ ಸಮಯದಲ್ಲಿ, 2020ರ ಕಾನೂನಿನಿಂದ ಅನಾರೋಗ್ಯ ಮತ್ತು ಅನುತ್ಪಾದಕ ಜಾನುವಾರುಗಳ ವ್ಯಾಪಾರದ ಮೇಲಿನ ನಿರ್ಬಂಧಗಳಿಂದ ರೈತರು ಎದುರಿಸುತ್ತಿರುವ ತೊಂದರೆಗಳನ್ನು ಉಲ್ಲೇಖಿಸಿ, ಗೋಹತ್ಯೆ ನಿಷೇಧ ಕಾನೂನನ್ನು ಹಿಂತೆಗೆದುಕೊಳ್ಳುವ ಉದ್ದೇಶವನ್ನು ಕಾಂಗ್ರೆಸ್ ಸೂಚಿಸಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!