ಆರೋಪಿಗಳಿಂದ ವಶಕ್ಕೆ ಪಡೆದಿರುವ ವಸ್ತುಗಳು. 
ರಾಜ್ಯ

ಬೆಂಗಳೂರು: ರೈಲಿನಲ್ಲಿ ಕೊಳಾಯಿ ಇತರ ಪರಿಕರಗಳ ಕದಿಯುತ್ತಿದ್ದ ದುಷ್ಕರ್ಮಿಗಳ ಬಂಧನ

ಬೆಂಗಳೂರು ರೈಲುಗಳಲ್ಲಿ ಕೊಳಾಯಿ ಸೇರಿದಂತೆ ಇತರೆ ಪರಿಕರಗಳ ಕಳ್ಳತನ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬೆಂಗಳೂರು ವಿಭಾಗದ ರೈಲ್ವೆ ರಕ್ಷಣಾ ಪಡೆ (ಆರ್‌ಪಿಎಫ್) ಶುಕ್ರವಾರ ಬಂಧನಕ್ಕೊಳಪಡಿಸಿದೆ.

ಬೆಂಗಳೂರು: ಬೆಂಗಳೂರು ರೈಲುಗಳಲ್ಲಿ ಕೊಳಾಯಿ ಸೇರಿದಂತೆ ಇತರೆ ಪರಿಕರಗಳ ಕಳ್ಳತನ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬೆಂಗಳೂರು ವಿಭಾಗದ ರೈಲ್ವೆ ರಕ್ಷಣಾ ಪಡೆ (ಆರ್‌ಪಿಎಫ್) ಶುಕ್ರವಾರ ಬಂಧನಕ್ಕೊಳಪಡಿಸಿದೆ.

ಬಂಧಿತರನ್ನು ರಂಗಸ್ವಾಮಿ (47) ಹಾಗೂ ಗಾಂಧಿ (29) ಎಂದು ಗುರ್ತಿಸಲಾಗಿದೆ. ಆರೋಪಿಗಳು ನಗರದ  ಶ್ರೀರಾಮಪುರದ ನಿವಾಸಿಗಳಾಗಿದ್ದು, ಇಬ್ಬರೂ ಬೆಂಗಳೂರು-ಚೆನ್ನೈ ಮತ್ತು ಬೆಂಗಳೂರು-ಧರ್ಮಾವರಂ ರೈಲುಗಳಲ್ಲಿ ನಲ್ಲಿ ಸೇರಿದಂತೆ ಇತರ ಪರಿಕರಗಳನ್ನು ಕದಿಯುತ್ತಿದ್ದರು. ರೈಲುಗಳಲ್ಲಿನ ವಸ್ತುಗಳು ನಾಪತ್ತೆಯಾಗುತ್ತಿರುವುದು ಆಗಾಗ್ಗೆ ವರದಿಯಾಗುತ್ತಿದ್ದವು.

ಈ ಹಿನ್ನೆಲೆಯಲ್ಲಿ ಕಳ್ಳರ ಪತ್ತೆಗೆ ಭದ್ರತಾ ಆಯುಕ್ತರಾದ ಶ್ರೀ ದೇವಾಂಶ್ ಶುಕ್ಲಾ ಅವರು ವಿಶೇಷ ತಂಡವನ್ನು ರಚಿಸಿದ್ದರು.

ಇದರಂತೆ ಮಂಡ್ಯದ ಆರ್‌ಪಿಎಫ್ ನಿರೀಕ್ಷಕ ಶ್ರೀ ಎ.ಕೆ. ತಿವಾರಿ, ನೇತೃತ್ವದ ತಂಡವು ಕೆಎಸ್ಆರ್ ನಿಲ್ದಾಣದಲ್ಲಿ ಆರೋಪಿ ರಂಗಸ್ವಾಮಿಯನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸಿದೆ. ಬಳಿಕ ಈತ ನೀಡಿದ ಮಾಹಿತಿ ಮೇರೆಗೆ ಮತ್ತೋರ್ವ ಆರೋಪಿ ಗಾಂಧಿ ಎಂಬಾತನನ್ನೂ ಬಂಧನಕ್ಕೊಳಪಡಿಸಿದ್ದಾರೆ.

ಇಬ್ಬರ ಬಂಧನದ ಬಳಿಕ ಅಧಿಕಾರಿಗಳುಳು,  ರೂ.12960 ಮೌಲ್ಯದ ನಲ್ಲಿಗಳು ಮತ್ತು ಇತರೆ ವಸ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಈ ನಡುವೆ ಆರೋಪಿಗಳ ಬಂಧಿಸುವಲ್ಲಿ ಯಶಸ್ವಿಯಾದ ಆರ್‌ಪಿಎಫ್ ತಂಡವನ್ನು ಬೆಂಗಳೂರು ವಿಭಾಗದ ವಿಭಾಗೀಯ ರೈಲ್ವೆ ವ್ಯವಸ್ಥಾಪಕ ಶ್ರೀ ಶ್ಯಾಮ್ ಸಿಂಗ್ ಅವರು ಶ್ಲಾಘಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

2nd test, Day 2: 2ನೇ ದಿನದಾಟದ ಆರಂಭದಲ್ಲೇ ಭಾರತಕ್ಕೆ ಆಘಾತ, ಭೋಜನ ವಿರಾಮದ ವೇಳೆಗೆ 427/4

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

SCROLL FOR NEXT