ಸಚಿವ ಪರಮೇಶ್ವರ್ 
ರಾಜ್ಯ

ಔರಾದ್ಕರ್ ಸಮಿತಿ ವರದಿ ಯಥಾವತ್ ಜಾರಿ ಸಾಧ್ಯವಿಲ್ಲ: ಸಚಿವ ಡಾ. ಜಿ ಪರಮೇಶ್ವರ್

ರಾಘವೇಂದ್ರ ಔರಾದ್ಕರ್ ಸಮಿತಿಯ ವರದಿಯ ಶಿಫಾರಸುಗಳನ್ನು ಯಥಾವತ್ ಜಾರಿಗೊಳಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರು ಶನಿವಾರ ಹೇಳಿದರು.

ಮೈಸೂರು: ರಾಘವೇಂದ್ರ ಔರಾದ್ಕರ್ ಸಮಿತಿಯ ವರದಿಯ ಶಿಫಾರಸುಗಳನ್ನು ಯಥಾವತ್ ಜಾರಿಗೊಳಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರು ಶನಿವಾರ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಔರಾದ್ಕರ್ ವರದಿಯ ಶಿಫಾರಸಿನಂತೆ ಪೊಲೀಸ್ ಸಿಬ್ಬಂದಿಗೆ ಕಡ್ಡಾಯ ವಾರದ ರಜೆ ಜಾರಿಗೊಳಿಸುತ್ತೇವೆ. ರಾತ್ರಿ ಪಾಳಿ ಮಾಡಿದವರಿಗೆ ವಿಶೇಷ ಭತ್ಯೆ ಕೊಡುವ ವಿಚಾರದಲ್ಲೂ ಶೀಘ್ರ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದರು.

‘ರಾಜ್ಯದ ವಿವಿಧ ಇಲಾಖೆಗಳಲ್ಲಿ 2.50 ಲಕ್ಷ ಹುದ್ದೆ ಖಾಲಿ ಇವೆ. ಅವುಗಳ ಭರ್ತಿ ಕಾರ್ಯ ಶುರುವಾಗಿದೆ. ಪೊಲೀಸ್ ಇಲಾಖೆಯಲ್ಲಿ 15 ಸಾವಿರ ಹುದ್ದೆಗಳು ಖಾಲಿ ಇವೆ. ಮೊದಲ ಹಂತದಲ್ಲಿ 4 ಸಾವಿರ ಪೊಲೀಸ್ ಕಾನ್‌ಸ್ಟೆಬಲ್‌, 400 ಸಬ್‌ ಇನ್‌ಸ್ಪೆಕ್ಟರ್‌ ಹುದ್ದೆಗಳ ಭರ್ತಿಗೆ ಮುಂದಾಗಿದ್ದೇವೆ’ ಎಂದು ತಿಳಿಸಿದರು.

‘ಸಬ್ ಇನ್‌ಸ್ಪೆಕ್ಟರ್‌ ಹುದ್ದೆಗಳ ನೇಮಕಾತಿ ಅಕ್ರಮ ಕುರಿತು ವಿಚಾರಣೆ ನಡೆಸುತ್ತಿರುವ ನ್ಯಾಯಾಲಯ, ಸರ್ಕಾರದ ಅಭಿಪ್ರಾಯ ಕೇಳಿದೆ. ಜುಲೈ 5ರಂದು ನ್ಯಾಯಾಲಯಕ್ಕೆ ವರದಿ ನೀಡಲಿದ್ದೇವೆ’ ಎಂದು ಮಾಹಿತಿ ನೀಡಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT