ಕಡಿಮೆ ಮಳೆ 
ರಾಜ್ಯ

ಕಳಪೆ ದಾಖಲೆ: ಬೆಂಗಳೂರಿನಲ್ಲಿ 6 ವರ್ಷದಲ್ಲೇ ಜೂನ್‌ನಲ್ಲಿ ಕಡಿಮೆ ಮಳೆ!

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮಳೆರಾಯ ಹೀನಾಯ ದಾಖಲೆ ಬರೆದಿದ್ದು, 6 ವರ್ಷಗಳಲ್ಲೇ ಜೂನ್ ತಿಂಗಳಲ್ಲಿ ಕಡಿಮೆ ಮಳೆಯಾಗಿದೆ.

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮಳೆರಾಯ ಹೀನಾಯ ದಾಖಲೆ ಬರೆದಿದ್ದು, 6 ವರ್ಷಗಳಲ್ಲೇ ಜೂನ್ ತಿಂಗಳಲ್ಲಿ ಕಡಿಮೆ ಮಳೆಯಾಗಿದೆ.

ಈ ಬಗ್ಗೆ ಹವಾಮಾನ ಇಲಾಖೆ ಮಾಹಿತಿ ನೀಡಿದ್ದು, ಕಳೆದ ಆರು ವರ್ಷಗಳಲ್ಲಿ ಜೂನ್ ತಿಂಗಳಲ್ಲಿ ಅತ್ಯಂತ ಕಡಿಮೆ ಮಳೆ ದಾಖಲಾಗಿದೆ. ಹವಾಮಾನದ ಟ್ವೀಟ್ ಪ್ರಕಾರ, IMD ವೀಕ್ಷಣಾಲಯವು ಜೂನ್‌ನಲ್ಲಿ ಬೆಂಗಳೂರಿನಲ್ಲಿ ಕೇವಲ 72.3 ಮಿಮೀ ಮಳೆಯಾಗಿದೆ ಎಂದು ಹೇಳಿದೆ. ಇದು ಸರಾಸರಿ 110.3 ಮಿಮೀಗಿಂತ ಕಡಿಮೆಯಾಗಿದೆ.

ಎಚ್ ಎಎಲ್ ಮತ್ತು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕ್ರಮವಾಗಿ 151.1 ಮಿ.ಮೀ ಮತ್ತು 64.9 ಮಿ.ಮೀ ಮಳೆಯಾಗಿದ್ದು, ಇದು ಬೆಂಗಳೂರಿನಲ್ಲಿ ಶೇ.34.45ರಷ್ಟು ಮಳೆ ಕೊರತೆಯನ್ನು ಸೂಚಿಸುತ್ತದೆ. ಇದಲ್ಲದೆ, ದಕ್ಷಿಣ ಆಂತರಿಕ ಕರ್ನಾಟಕವು 56% ನಷ್ಟು ಮಳೆಯ ಕೊರತೆಯನ್ನು ಹೊಂದಿದ್ದರೆ, ಉತ್ತರ ಒಳನಾಡಿನಲ್ಲಿ ಮಳೆಗಾಲದ ಮೊದಲ ತಿಂಗಳಿನಲ್ಲಿ ಶೇ.54% ರಷ್ಟು ಮಳೆ ಕೊರತೆಯಿದೆ.

ಬೆಂಗಳೂರು ಮಾತ್ರವಲ್ಲದೇ ರಾಜ್ಯಾದ್ಯಂತ ಇದೇ ಪ್ರವೃತ್ತಿ ಮುಂದುವರೆದಿದ್ದು, ಅಸಮರ್ಪಕ ಮಳೆಯಿಂದಾಗಿ, ಅನೇಕ ಜಲಾಶಯಗಳಲ್ಲಿ ನೀರಿನ ಮಟ್ಟವು ಶೀಘ್ರವಾಗಿ ಕ್ಷೀಣಿಸುತ್ತಿದೆ ಎಂದು ಹೇಳಲಾಗಿದೆ. ಪ್ರಸ್ತುತ, ರಾಜ್ಯದ ಜಲಾಶಯಗಳಲ್ಲಿ ಕೇವಲ ಶೇ.17 ರಷ್ಟು ಮಾತ್ರ ನೀರು ಉಳಿದಿದ್ದು, ಕರ್ನಾಟಕವು ವಿದ್ಯುತ್ ಉತ್ಪಾದನೆಗೆ ಹೈಡಲ್ ಜಲಾಶಯಗಳ ಮೇಲೆ ಹೆಚ್ಚು ಅವಲಂಬಿತವಾಗಬೇಕಾದ ಅನಿವಾರ್ಯತೆ ಸೃಷ್ಟಿಯಾಗಿದೆ.

ಅಧಿಕಾರಿಗಳು ನೀಡಿರುವ ಮಾಹಿತಿ ಮೇರೆಗೆ ಲಿಂಗನಮಕ್ಕಿಯಲ್ಲಿ ಪ್ರಸ್ತುತ ಕೇವಲ 7% ರಷ್ಟು, ಸೂಪಾದಲ್ಲಿ 21% ಮತ್ತು ವಾರಾಹಿಯಲ್ಲಿ 8% ರಷ್ಟು ನೀರು ಇದೆ. ಕರ್ನಾಟಕಕ್ಕೆ ಕುಡಿಯುವ ನೀರು ಪೂರೈಕೆಗೆ ನಿರ್ಣಾಯಕವಾಗಿರುವ ಕಾವೇರಿ ಜಲಾನಯನ ಪ್ರದೇಶದಲ್ಲಿ ಶೇ.27ರಷ್ಟು ನೀರು ಮಾತ್ರ ಉಳಿದಿದೆ ಎಂದು ತಿಳಿದುಬಂದಿದೆ.

ಉಳಿದಂತೆ ಹಾರಂಗಿ 32%, ಹೇಮಾವತಿ, 38%, KRS, 20%, ಮತ್ತು ಕಬಿನಿ, 23%. ಉತ್ತರ ಕರ್ನಾಟಕದಲ್ಲಿ, ಕೃಷ್ಣಾ ಮತ್ತು ಅದರ ಉಪನದಿಗಳು ಜೀವನಾಡಿಯಾಗಿ ಕಾರ್ಯನಿರ್ವಹಿಸುತ್ತಿವೆ, ಆದರೆ ಸಂಗ್ರಹಣೆಯು ಕೇವಲ 17% ರಷ್ಟಿದೆ. ಭದ್ರಾ ಜಲಾಶಯವು 35%, ತುಂಗಾಭದ್ರಾ, 3%, ಘಟಪ್ರಭಾ, 8%, ಮಲಪ್ರಭಾ, 19%, ಆಲಮಟ್ಟಿ, 16%, ಮತ್ತು ನಾರಾಯಣಪುರವು ಕೃಷ್ಣಾ ನದಿಯ ಕೆಳಭಾಗದ ಜಲಾಶಯಗಳಲ್ಲಿ 43% ನಷ್ಟು ಹೆಚ್ಚಿನ ಸಂಗ್ರಹವನ್ನು ಹೊಂದಿದೆ ಎಂದು ತಿಳಿದುಬಂದಿದೆ.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

ಬೆಂಗಳೂರಿಗೂ ಎಂಟ್ರಿ ಕೊಟ್ಟಿತೇ ಮಹಾಮಾರಿ ಎಬೋಲಾ? ಆಫ್ರಿಕಾದಿಂದ ಬಂದ ಮಹಿಳೆಯಲ್ಲಿ ಸೋಂಕಿನ ಲಕ್ಷಣ ಪತ್ತೆ, ಆರೋಗ್ಯ ಇಲಾಖೆ ಹೈ ಅಲರ್ಟ್

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

SCROLL FOR NEXT