ಪ್ರವೀಣ್ ಕುಮಾರ್ ನೆಟ್ಟಾರು 
ರಾಜ್ಯ

ಬಿಜೆಪಿ ಕಾರ್ಯಕರ್ತ ಪ್ರವೀಣ್ ಕುಮಾರ್ ನೆಟ್ಟಾರು ಹತ್ಯೆ ಪ್ರಕರಣ: ಆರೋಪಿಗಳ ಆಸ್ತಿ ಜಪ್ತಿಗೆ ಎನ್ ಐಎ ಸಜ್ಜು

ಬಿಜೆಪಿ ಕಾರ್ಯಕರ್ತ ಪ್ರವೀಣ್ ಕುಮಾರ್ ನೆಟ್ಟಾರು ಹತ್ಯೆ ಪ್ರಕರಣದ ಪ್ರಮುಖ ಆರೋಪಿಗಳು ಶರಣಾಗದ ಹಿನ್ನೆಲೆಯಲ್ಲಿ ಅವರ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳಲು ಪ್ರಕರಣದ ತನಿಖೆ ನಡೆಸುತ್ತಿರುವ ಎನ್ ಐಎ ಸಿದ್ಧವಾಗಿದೆ ಎಂದು ಮೂಲಗಳು ಸೋಮವಾರ ತಿಳಿಸಿವೆ. 

ಬೆಂಗಳೂರು: ಬಿಜೆಪಿ ಕಾರ್ಯಕರ್ತ ಪ್ರವೀಣ್ ಕುಮಾರ್ ನೆಟ್ಟಾರು ಹತ್ಯೆ ಪ್ರಕರಣದ ಪ್ರಮುಖ ಆರೋಪಿಗಳು ಶರಣಾಗದ ಹಿನ್ನೆಲೆಯಲ್ಲಿ ಅವರ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳಲು ಪ್ರಕರಣದ ತನಿಖೆ ನಡೆಸುತ್ತಿರುವ ಎನ್ ಐಎ ಸಿದ್ಧವಾಗಿದೆ ಎಂದು ಮೂಲಗಳು ಸೋಮವಾರ ತಿಳಿಸಿವೆ. 

ಆರೋಪಿಗಳ ಶರಣಾಗತಿಗೆ ಜೂನ್ 30ರವರೆಗೆ ಗಡುವು ನೀಡಲಾಗಿತ್ತು. ಈ ಬಗ್ಗೆ ಸುಳ್ಯ ಮತ್ತು ಬೆಳ್ಳಾರೆ ಪಟ್ಟಣಗಳಲ್ಲಿ ಏಜೆನ್ಸಿ ಅಧಿಕಾರಿಗಳು ಮೈಕ್ ಮೂಲಕ ಘೋಷಣೆ ಮಾಡಿದ್ದರು. ಆರೋಪಿಗಳ ನಿವಾಸಗಳಿಗೆ ನೋಟಿಸ್ ಅಂಟಿಸಿ, ಕುಟುಂಬ ಸದಸ್ಯರಿಗೆ ಮಾಹಿತಿ ನೀಡಲಾಗಿತ್ತು. ಆರೋಪಿಗಳ ಬಗ್ಗೆ ಪೊಲೀಸರಿಗೆ ಸುಳಿವು ನೀಡಿದವರಿಗೆ ನಗದು ಬಹುಮಾನದ ಘೋಷಣೆಯನ್ನೂ ಅಧಿಕಾರಿಗಳು ಮಾಡಿದ್ದಾರೆ

ನೆಟ್ಟಾರು ಕೊಲೆ ಪ್ರಕರಣದ ಪ್ರಮುಖ ಆರೋಪಿಗಳಾದ ಕಲ್ಲು ಮುಟ್ಲು ನಿವಾಸಿಗಳಾದ ಉಮರ್ ಫಾರೂಕ್ ಮತ್ತು ಮುಸ್ತಫಾ ಪೈಚಾರ್ ಅವರಿಗಾಗಿ ಕರ್ನಾಟಕ ಮತ್ತು ಕೇರಳ ರಾಜ್ಯಗಳಲ್ಲಿ ಎನ್‌ಐಎ ಸಂಪೂರ್ಣ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದರೂ ಇಲ್ಲಿಯವರೆಗೆ ಬಂಧಿಸಲು ಸಾಧ್ಯವಾಗಿಲ್ಲ. ಹೀಗಾಗಿ  ಎನ್‌ಐಎ ಆರೋಪಿಗಳ ಚರ ಮತ್ತು ಸ್ಥಿರ ಆಸ್ತಿಗಳ ವಿವರಗಳನ್ನು ಕಂದಾಯ ಇಲಾಖೆ ಮತ್ತು ಇತರ ಮೂಲಗಳಿಂದ ಸಂಗ್ರಹಿಸುತ್ತಿದೆ. ಅಧಿಕೃತ ಬ್ಯಾಂಕ್ ಖಾತೆಗಳ ವಿವರಗಳನ್ನು ಸಹ ಕಲೆಹಾಕಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.

ಎನ್‌ಐಎ ಆಸ್ತಿಗಳ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲಿದ್ದು, ನಂತರ ಅವುಗಳನ್ನು ಮುಟ್ಟುಗೋಲು ಹಾಕಿಕೊಂಡು ಸರ್ಕಾರಕ್ಕೆ ಹಸ್ತಾಂತರಿಸಲಾಗುತ್ತದೆ. ಘಟನೆ ನಡೆದು 11 ತಿಂಗಳಾದರೂ ಇಬ್ಬರು ಪ್ರಮುಖ ಆರೋಪಿಗಳನ್ನು ಬಂಧಿಸಲು ಎನ್‌ಐಎಗೆ ಸಾಧ್ಯವಾಗಿಲ್ಲ.  

ಪ್ರವೀಣ್ ಕುಮಾರ್ ನೆಟ್ಟಾರೆ ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ಎನ್ಐಎ 20 ಆರೋಪಿಗಳ ವಿರುದ್ಧ ಬೆಂಗಳೂರಿನ ಎನ್ಐಎ ವಿಶೇಷ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದೆ. 14 ಮಂದಿಯನ್ನು ಬಂಧಿಸಿದ್ದು, ತಲೆಮರೆಸಿಕೊಂಡಿರುವ ಆರು ಮಂದಿಗಾಗಿ ಶೋಧ ನಡೆಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಬ್ರೇಕ್ ಫಾಸ್ಟ್ ಮೀಟಿಂಗ್: ಯಾವುದೇ ನೋವಿಲ್ಲ, ಮನಃಪೂರ್ವಕವಾಗಿ ರಾಜೀನಾಮೆ ನೀಡುತ್ತಿದ್ದೇನೆ; ಸಿದ್ದರಾಮಯ್ಯ ಘೋಷಣೆ

ಮೋದಿಯವರ ಇತ್ತೀಚಿನ ಫಾರಿನ್ ಟ್ರಿಪ್ಪಿನಿಂದ ಭಾರತಕ್ಕೇನು ಲಾಭ? (ಹಣಕ್ಲಾಸು)

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

ಸಿದ್ದು ನಿರ್ಗಮನದ ಬಳಿಕ ಅಸಮಾಧಾನ ತಣಿಸಲು ಕಾಂಗ್ರೆಸ್ ಮಾಸ್ಟರ್‌ಪ್ಲ್ಯಾನ್: 4 DCM ಹುದ್ದೆ ಸೃಷ್ಟಿಗೆ ಚಿಂತನೆ, ಜಮೀರ್, ಪ್ರಿಯಾಂಕ್ ಖರ್ಗೆ, ಎಂಬಿ ಪಾಟೀಲ್ ಹೆಸರು ಫೈನಲ್?

SCROLL FOR NEXT