ಶಕ್ತಿ ಯೋಜನೆಯ ಫಲಾನುಭವಿಗಳು (ಸಂಗ್ರಹ ಚಿತ್ರ) 
ರಾಜ್ಯ

'ಶಕ್ತಿ ಯೋಜನೆ': ಮಹಿಳೆಯರಿಗೆ ಎಷ್ಟು ಅನುಕೂಲ? ರಾಜ್ಯ ಸರ್ಕಾರಕ್ಕೆ ಆಗುತ್ತಿರುವ ವೆಚ್ಚವೇನು?

ಕರ್ನಾಟಕ ವಿಧಾನಸಭೆ ಚುನಾವಣೆಗೆ ಮುನ್ನ ಕಾಂಗ್ರೆಸ್ ಪಕ್ಷವು ನೀಡಿದ್ದ 5 ಗ್ಯಾರಂಟಿಗಳಲ್ಲಿ ಒಂದಾದ ಶಕ್ತಿ ಯೋಜನೆಯಡಿ ಸರ್ಕಾರಿ ಬಸ್‌ಗಳಲ್ಲಿ ರಾಜ್ಯಾದ್ಯಂತ ಮಹಿಳೆಯರಿಗೆ ಉಚಿತ ಪ್ರಯಾಣವನ್ನು ನೀಡುತ್ತದೆ. ಶಕ್ತಿ ಯೋಜನೆಯನ್ನು ಜೂನ್ 11 ರಂದು ಜಾರಿಗೆ ತರಲಾಯಿತು.  

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಗೆ ಮುನ್ನ ಕಾಂಗ್ರೆಸ್ ಪಕ್ಷವು ನೀಡಿದ್ದ 5 ಗ್ಯಾರಂಟಿಗಳಲ್ಲಿ ಒಂದಾದ ಶಕ್ತಿ ಯೋಜನೆಯಡಿ(Shakti scheme) ಸರ್ಕಾರಿ ಬಸ್‌ಗಳಲ್ಲಿ ರಾಜ್ಯಾದ್ಯಂತ ಮಹಿಳೆಯರಿಗೆ ಉಚಿತ ಪ್ರಯಾಣವನ್ನು ನೀಡುತ್ತದೆ. ಶಕ್ತಿ ಯೋಜನೆಯನ್ನು ಜೂನ್ 11 ರಂದು ಜಾರಿಗೆ ತರಲಾಯಿತು.  ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC), ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ (KKRTC), ಉತ್ತರ ಪಶ್ಚಿಮ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (NWKRTC) ಮತ್ತು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC)ಯಲ್ಲಿ ಪ್ರಯಾಣಿಕರ ಸಂಖ್ಯೆ ಗಗನಕ್ಕೇರಿದೆ.

ಮಹಿಳೆಯರಿಗೆ ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಉಚಿತ ಪ್ರಯಾಣ ಕಲ್ಪಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಶ್ಲಾಘಿಸಿದ ಬಾಗಲಕೋಟೆಯ ದಾನಮ್ಮ, ಹತ್ತು ವರ್ಷಗಳ ನಂತರ ಮೊದಲ ಬಾರಿಗೆ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದೇನೆ. ಸರ್ಕಾರ ಉಚಿತ ಪ್ರಯಾಣವನ್ನು ನೀಡದಿದ್ದರೆ, ನಾನು ಯಾವುದೇ ಪ್ರವಾಸಿ ಮತ್ತು ಧಾರ್ಮಿಕ ಸ್ಥಳಗಳಿಗೆ ಭೇಟಿ ನೀಡುತ್ತಿರಲಿಲ್ಲ ಎಂದರು. 2024 ರ ಸಂಸತ್ತಿನ ಚುನಾವಣೆಯ ನಂತರ ಉಚಿತ ಪ್ರಯಾಣದ ಸೌಲಭ್ಯವು ನಿಲ್ಲಬಹುದು ಎಂದು ಭಾವಿಸಿರುವ ಅವರು ಹೀಗಾಗಿ ತಮ್ಮ ಕುಟುಂಬಸ್ಥರೊಂದಿಗೆ ಶೀಘ್ರದಲ್ಲಿ ಪ್ರವಾಸ ಹೋಗುತ್ತಿದ್ದಾರೆ. 

ಮಡಿಕೇರಿ ಮತ್ತು ಕೊಡಗು ಮಾರುಕಟ್ಟೆಗಳಿಗೆ ಭೇಟಿ ನೀಡುವ ಹಾಸನ ಮತ್ತು ಸುತ್ತಮುತ್ತಲಿನ ಹಲವು ಮಹಿಳಾ ರೈತರು ಸ್ಥಳೀಯವಾಗಿ ಬೆಳೆದ ತರಕಾರಿಗಳನ್ನು ಮಾರಾಟ ಮಾಡಲು ಮನೆ ಮನೆಗೆ ತೆರಳಿ, ಶಕ್ತಿ ಯೋಜನೆಯಿಂದ ಪ್ರತಿದಿನ ಸುಮಾರು 200 ರೂಪಾಯಿ ಉಳಿಸುತ್ತಿದ್ದಾರೆ. 

ತುಂಬಿತುಳುಕುತ್ತಿರುವ ಬಸ್ಸುಗಳು: ಸರ್ಕಾರಿ-ಚಾಲಿತ ಬಸ್‌ಗಳಲ್ಲಿ ಪ್ರಯಾಣಿಕರ ಸಂಖ್ಯೆಯಲ್ಲಿನ ಏರಿಕೆ ಬಸ್ಸುಗಳಲ್ಲಿ ಪ್ರಯಾಣಿಕರ ಅದರಲ್ಲೂ ಮಹಿಳಾ ಪ್ರಯಾಣಿಕರ ದಟ್ಟಣೆಯನ್ನು ಹೆಚ್ಚಿಸಿದೆ.  ಮಹಿಳೆಯರು ಉಚಿತ ಸರ್ಕಾರಿ ಬಸ್‌ಗಳಿಗೆ ಸ್ಥಳಾಂತರಗೊಳ್ಳುವುದರಿಂದ ಖಾಸಗಿ ಬಸ್‌ಗಳು ಮತ್ತು ಹಂಚಿಕೆ ದರದಲ್ಲಿ ಪ್ರಯಾಣಿಕರನ್ನು ಕರೆದೊಯ್ಯುವ ಪ್ರಯಾಣಿಕರ ಸಂಖ್ಯೆಯಲ್ಲಿ ತೀವ್ರ ಕುಸಿತವನ್ನು ಕಾಣುತ್ತಿವೆ ಎಂದು ನಗರ ತಜ್ಞ ಶ್ರೇಯಾ ಗಡೇಪಲ್ಲಿ ಹೇಳುತ್ತಾರೆ. 

ಅನೇಕ ಮಹಿಳೆಯರು ಕುಗ್ರಾಮಗಳಲ್ಲಿ, ದೂರದ ಊರುಗಳಲ್ಲಿ ಇದರ ಪ್ರಯೋಜನವನ್ನು ಪಡೆಯಲು ಸಾಧ್ಯವಾಗುತ್ತಿಲ್ಲ. ಅನೇಕ ಸ್ಥಳಗಳಲ್ಲಿ ಬಸ್ಸುಗಳ ಸೇವೆ ಸರಿಯಾಗಿಲ್ಲ. ಹಾಗಿರುವ ಸ್ಥಳಗಳಲ್ಲಿ ಮಹಿಳೆಯರು ಖಾಸಗಿ ಬಸ್ಸುಗಳು ಅಥವಾ ಆಟೋಗಳ ಮೊರೆ ಹೋಗಬೇಕಾಗುತ್ತದೆ. ಇವುಗಳಿಗೆ ಸರ್ಕಾರ ಕ್ರಮ ಕೈಗೊಳ್ಳಬೇಕು. ಬಸ್ ನಿಲ್ದಾಣಗಳಿಗೆ ಮಹಿಳೆಯರ ಸುರಕ್ಷತೆಗೆ ಕ್ರಮ ಕೈಗೊಳ್ಳಬೇಕು ಎನ್ನುತ್ತಾರೆ. 

ಶಕ್ತಿ ಯೋಜನೆಯನ್ನು ಹೆಚ್ಚು ಮಹಿಳಾಪರವಾಗಿಸಲು ಸಾರ್ವಜನಿಕ ಅಥವಾ ಖಾಸಗಿ ಯಾವುದೇ ಬಸ್‌ನಲ್ಲಿ ಮಹಿಳೆಯರಿಗೆ ಉಚಿತವಾಗಿ ಪ್ರಯಾಣಿಸಲು ಅನುಮತಿಸಬಹುದು. ಬಸ್ ನಿರ್ವಾಹಕರು ತಮ್ಮ ಬಸ್‌ಗಳಲ್ಲಿ ಟ್ಯಾಪ್ ಮಾಡಿದ ಕಾರ್ಡ್‌ಗಳ ಸಂಖ್ಯೆಯನ್ನು ಆಧರಿಸಿ ಮರುಪಾವತಿ ಮಾಡಬಹುದು ಎನ್ನುತ್ತಾರೆ ಗಡೇಪಲ್ಲಿ. 

ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್ (IISc) ಯ ತಜ್ಞ ಆಶಿಶ್ ವರ್ಮಾ, ಶಕ್ತಿ ಯೋಜನೆಯು ಮಹಿಳೆಯರಿಗೆ ಪ್ರವೇಶವನ್ನು ಸುಧಾರಿಸುವಲ್ಲಿ ಉತ್ತಮ ಹೆಜ್ಜೆಯಾಗಿದೆ, ವಿಶೇಷವಾಗಿ ಮಧ್ಯಮ ಮತ್ತು ಕಡಿಮೆ ಆದಾಯದ ಕುಟುಂಬಗಳಲ್ಲಿ, ಅದರ ಪ್ರಯೋಜನಗಳು ಉತ್ತಮವಾಗಿವೆ. 

ದೆಹಲಿ, ಪಂಜಾಬ್ ಮತ್ತು ತಮಿಳುನಾಡು ಸರ್ಕಾರದ ಯೋಜನೆಗಳಂತೆ 2013 ರಿಂದ ಬಸ್ ಪ್ರಯಾಣ ದರವನ್ನು ಇಳಿಸಿ ಮಹಿಳೆಯರು, ತೃತೀಯಲಿಂಗಿಗಳು ಮತ್ತು ಹಿರಿಯ ನಾಗರಿಕರಿಗೆ ಉಚಿತ ಪ್ರಯಾಣವನ್ನು ನೀಡುವಂತೆ ರಾಜ್ಯ ಸರ್ಕಾರವನ್ನು ಒತ್ತಾಯಿಸುತ್ತಿದ್ದೇವೆ ಎಂದು ಬೆಂಗಳೂರು ಬಸ್ ಪ್ರಯಾಣಿಕ ವೇದಿಕೆಯ ಶಾಹೀನ್ ಶಾಸ ನೆನಪಿಸಿಕೊಂಡರು.

ಸರ್ಕಾರಿ ಬಸ್ಸುಗಳ ಕೊರತೆ: ಶಕ್ತಿ ಯೋಜನೆ ಜಾರಿಯಾಗಿರಬಹುದು, ಆದರೂ ಕರ್ನಾಟಕದಾದ್ಯಂತ 2,500 ಕ್ಕೂ ಹೆಚ್ಚು ಹಳ್ಳಿಗಳಲ್ಲಿ ಸರ್ಕಾರಿ ಬಸ್ ಇಲ್ಲ ಎಂದು ಕೆಎಸ್‌ಆರ್‌ಟಿಸಿ ಸಿಬ್ಬಂದಿ ಮತ್ತು ಕಾರ್ಮಿಕರ ಫೆಡರೇಶನ್ ಹೇಳುತ್ತದೆ. ಉಡುಪಿಯಂತಹ ಖಾಸಗಿ ಬಸ್‌ಗಳ ಪ್ರಾಬಲ್ಯವಿರುವ ಸ್ಥಳಗಳಿವೆ, ಅಲ್ಲಿ ಮಹಿಳೆಯರಿಗೆ ಶಕ್ತಿ ಯೋಜನೆಯಿಂದ ಇನ್ನೂ ಪೂರ್ಣ ಪ್ರಯೋಜನವಿಲ್ಲ. ಉಡುಪಿಯಲ್ಲಿ 2019-20 ರಲ್ಲಿ ಸರ್ಕಾರವು 20 ಜೆಎನ್‌ಎನ್‌ಯುಆರ್‌ಎಂ ಬಸ್‌ಗಳನ್ನು ಪರಿಚಯಿಸಿದೆ.

  

ಆದರೆ ಕೋವಿಡ್ -19 ಸಾಂಕ್ರಾಮಿಕ ಸಮಯದಲ್ಲಿ ಕೇವಲ 12 ಬಸ್‌ಗಳು ಕಾರ್ಯನಿರ್ವಹಿಸಿದವು. ಇದೀಗ ಅದರ ಸಂಖ್ಯೆ 7ಕ್ಕೆ ಇಳಿದಿದೆ. ಕೊಲ್ಲೂರು ಮೂಕಾಂಬಿಕಾ ದೇವಸ್ಥಾನ, ಆನೆಗುಡ್ಡೆ ವಿನಾಯಕ ದೇವಸ್ಥಾನ, ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ, ಮತ್ತು ಮಂದಾರ್ತಿಗೆ ಭೇಟಿ ನೀಡಲು ಬಯಸುವ ಮಹಿಳೆಯರಿಗೆ ಯಾವುದೇ ಸೌಲಭ್ಯವಿಲ್ಲ. ಬೈಂದೂರು ಶಾಸಕ ಗುರುರಾಜ ಗಂಟಿಹೊಳೆ, ಕೊಲ್ಲೂರಿನಲ್ಲಿ ಸರ್ಕಾರಿ ಬಸ್ಸುಗಳನ್ನು ಪಡೆಯಲು ಸಂಬಂಧಪಟ್ಟವರೊಂದಿಗೆ ಮಾತನಾಡುತ್ತೇನೆ ಎಂದಿದ್ದಾರೆ.

ಖಾಸಗಿ ಟ್ರಾವೆಲ್ ಆಪರೇಟರ್‌ಗಳು ಮತ್ತು ಆಟೋ ಚಾಲಕರು ಶಕ್ತಿ ಯೋಜನೆಯ ನಂತರ ತಮ್ಮ ವ್ಯಾಪಾರ ಕುಗ್ಗಿದೆ ಎನ್ನುತ್ತಾರೆ. ಅವರ ಗ್ರಾಹಕರು ಈಗ ಸರ್ಕಾರಿ ಬಸ್‌ಗಳನ್ನು ಬಳಸುತ್ತಾರೆ. ಯೋಜನೆ ಆರಂಭವಾದ ನಂತರ ಪ್ರಯಾಣಿಕರ ಸಂಖ್ಯೆಯಲ್ಲಿ ಶೇ.10-20ರಷ್ಟು ಕುಸಿತ ಕಂಡಿದೆ ಎಂದು ದಕ್ಷಿಣ ಕನ್ನಡ ಖಾಸಗಿ ಬಸ್ ಮಾಲೀಕರ ಸಂಘ ಹೇಳುತ್ತದೆ. ಮಹಿಳೆಯರು ಮತ್ತು ಪುರುಷರು ಸರ್ಕಾರಿ ಬಸ್‌ಗಳಲ್ಲಿ ಪ್ರಯಾಣಿಸುವುದರಿಂದ ತಮ್ಮ ದೈನಂದಿನ ಸರಾಸರಿ ಆದಾಯವು ಶೇಕಡಾ 30 ರಷ್ಟು ಕಡಿಮೆಯಾಗಿದೆ ಎಂದು ಆಟೋ ಚಾಲಕರು ದೂರುತ್ತಿದ್ದಾರೆ.

ಖಾಸಗಿ ಬಸ್ ಮಾಲೀಕರು ಮತ್ತು ಅವರ ನೌಕರರ ಸಂಕಷ್ಟವನ್ನು ಗಮನಿಸಿದ ಕೆಎಸ್‌ಆರ್‌ಟಿಸಿ ಸ್ಟಾಫ್ ಅಂಡ್ ವರ್ಕರ್ಸ್ ಫೆಡರೇಶನ್ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು, 1976 ರಲ್ಲಿ ದೇವರಾಜ ಅರಸು ಸರ್ಕಾರ ಮಾಡಿದಂತೆ ಖಾಸಗಿ ಬಸ್‌ಗಳು ಮತ್ತು ಅವರ ಸಿಬ್ಬಂದಿಯನ್ನು ಬಸ್ ನಿಗಮಕ್ಕೆ ಸೇರಿಸಬೇಕೆಂದು ಒತ್ತಾಯಿಸಿದರು. ಕಾಂಟ್ರಾಕ್ಟ್ ಕ್ಯಾರೇಜ್ ರದ್ದುಗೊಳಿಸಿದ ನಂತರ ಫೆಡರೇಶನ್ ಕಾರ್ಯದರ್ಶಿ ವಿಜಯ್ ಭಾಸ್ಕರ್, ಹೆಚ್ಚಿನ ಮಹಿಳೆಯರು ಖಾಸಗಿ ಬಸ್‌ಗಳಿಂದ ಕೆಎಸ್‌ಆರ್‌ಟಿಸಿ ಕಡೆಗೆ ಹೋಗುತ್ತಿರುವುದರಿಂದ ಚಾಲಕರು, ನಿರ್ವಾಹಕರು, ತಾಂತ್ರಿಕ ಸಿಬ್ಬಂದಿ ಮತ್ತು ಇತರರು ಕೆಲಸ ಕಳೆದುಕೊಳ್ಳುವ ಅಪಾಯವಿದೆ. ಹಣ ಹೂಡಿಕೆ ಮಾಡಿದ ಮಾಲೀಕರೂ ಸಂಕಷ್ಟದಲ್ಲಿದ್ದಾರೆ ಎನ್ನುತ್ತಾರೆ. 

1976 ರಲ್ಲಿ ಅಂದಿನ ಸಿಎಂ ದೇವರಾಜ್ ಅರಸ್ ಅವರು ಗುತ್ತಿಗೆ ಕ್ಯಾರೇಜ್ ನಿರ್ಮೂಲನೆ ಕಾಯ್ದೆ 1976 ಕ್ರಮ ಕೈಗೊಂಡಿದ್ದರಿಂದ ತೊಂದರೆಗೊಳಗಾದ ಸಿಬ್ಬಂದಿ ಸೇರಿದಂತೆ ಖಾಸಗಿ ಬಸ್‌ಗಳನ್ನು ಕೆಎಸ್‌ಆರ್‌ಟಿಸಿಗೆ ವಿಲೀನಗೊಳಿಸಲಾಯಿತು. ಅದೇ ರೀತಿಯಲ್ಲಿ, ಖಾಸಗಿ ಬಸ್‌ಗಳು ಮತ್ತು ಅವರ ಸಿಬ್ಬಂದಿಯನ್ನು ಕೆಎಸ್‌ಆರ್‌ಟಿಸಿ ಸ್ವಾಧೀನಪಡಿಸಿಕೊಳ್ಳಲು ವಿನಂತಿಸಿದ್ದೇವೆ ಎಂದರು.

ಸರ್ಕಾರ ಬೊಕ್ಕಸಕ್ಕೆ ನಷ್ಟ: ಶಕ್ತಿ ಯೋಜನೆಗೆ ಪ್ರತಿ ವರ್ಷ 4,000 ಕೋಟಿ ರೂಪಾಯಿಗೂ ಹೆಚ್ಚು ಹಣ ಬೇಕಾಗುತ್ತದೆ ಎಂದು ಸರ್ಕಾರ ಅಂದಾಜಿಸಿರುವ ಹಿನ್ನೆಲೆಯಲ್ಲಿ, ಶಕ್ತಿ ಯೋಜನೆಯಿಂದ ರಾಜ್ಯದ ಬೊಕ್ಕಸಕ್ಕೆ ಬರಿದಾಗಲಿದೆ ಎಂದು ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ ಸಂಸ್ಥೆಯ ನಿರ್ದೇಶಕ ಪ್ರೊ.ಡಿ.ರಾಜಶೇಖರ್ ಅಭಿಪ್ರಾಯಪಟ್ಟಿದ್ದು, ಅಧ್ಯಯನ ನಡೆಸುವಂತೆ ಒತ್ತಾಯಿಸಿದ್ದಾರೆ. 

ಸರ್ಕಾರವು ಉಚಿತ ಪ್ರಯಾಣವನ್ನು ನೀಡುತ್ತಿದ್ದರೂ, ಐಷಾರಾಮಿ ಮತ್ತು ಸೌಕರ್ಯಗಳಿಗೆ ಒಗ್ಗಿಕೊಂಡಿರುವವರು ಪ್ರೀಮಿಯಂ ಬಸ್‌ಗಳಿಗೆ ಆದ್ಯತೆ ನೀಡುತ್ತಾರೆ. ಶಕ್ತಿ ಯೋಜನೆಯಿಂದ ಅಸಂಘಟಿತ ವಲಯದ ಮಹಿಳೆಯರಿಗೆ ಅನುಕೂಲವಾಗಲಿದೆ. ಕೆಲವೇ ಪ್ರಯಾಣಿಕರೊಂದಿಗೆ ಸಂಚರಿಸುತ್ತಿದ್ದ ಬಸ್‌ಗಳು ಭರ್ತಿಯಾಗಿ ಓಡುತ್ತಿವೆ. ಬಳ್ಳಾರಿಯಲ್ಲಿ ಮಹಿಳೆಯೊಬ್ಬರು ಕೆಲಸವಿದ್ದರೆ ಕೊಡಗಿನ ಕಾಫಿ ಎಸ್ಟೇಟ್‌ಗೆ ಹೋಗಿ ಪೂರ್ಣ ಕೂಲಿಯೊಂದಿಗೆ ಹಿಂತಿರುಗಬಹುದು. ಕೃಷಿ ಕಾರ್ಮಿಕರು, ಗಾರ್ಮೆಂಟ್ಸ್ ಕೆಲಸಗಾರರು, ದಿನಗೂಲಿ ಕಾರ್ಮಿಕರು ಮತ್ತು ಇತರರು ಹಣವನ್ನು ಉಳಿಸಲು ಮತ್ತು ಬೇರೆ ಯಾವುದೋ ಕೆಲಸಕ್ಕೆ ಬಳಸಿಕೊಳ್ಳಲು ಶಕ್ತಿ ಯೋಜನೆಯಿಂದ ಸಾಧ್ಯವಾಗುತ್ತದೆ. 

ಸಾರ್ವಜನಿಕ ಸಾರಿಗೆಯನ್ನು ಎಲ್ಲರಿಗೂ ಮುಕ್ತಗೊಳಿಸಬೇಕೆಂದು ಅನೇಕ ಪುರುಷರು, ವಿದ್ಯಾರ್ಥಿಗಳು ಮತ್ತು ಹಿರಿಯ ನಾಗರಿಕರು ಸರ್ಕಾರವನ್ನು ಒತ್ತಾಯಿಸುತ್ತಿದ್ದಾರೆ. ಗಡಿನಾಡ ಕನ್ನಡಿಗರು (ಕರ್ನಾಟಕದ ಗಡಿಗೆ ಹೊಂದಿಕೊಂಡಿರುವ ರಾಜ್ಯದ ಹೊರಗೆ ವಾಸಿಸುವ ಕನ್ನಡಿಗರು) ಈ ಯೋಜನೆಯನ್ನು ಕೇರಳದ ಗಡಿ ಜಿಲ್ಲೆ ಕಾಸರಗೋಡಿನ ಮಹಿಳೆಯರಿಗೆ ವಿಸ್ತರಿಸಬೇಕು ಎಂದು ಹೇಳುತ್ತಾರೆ, ಕಾಸರಗೋಡಿನಿಂದ ಮಂಗಳೂರಿಗೆ ಶಿಕ್ಷಣ, ಆರೋಗ್ಯ ಇತ್ಯಾದಿಗಳಿಗಾಗಿ ಸಾವಿರಾರು ಜನರು ಪ್ರಯಾಣಿಸುತ್ತಾರೆ.

ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ, ಶಕ್ತಿ ಯೋಜನೆಗೆ ಅಭೂತಪೂರ್ವ ಪ್ರತಿಕ್ರಿಯೆ ವ್ಯಕ್ತವಾಗಿದೆ. ಎಲ್ಲಾ ನಾಲ್ಕು ಬಸ್ ನಿಗಮಗಳ ಒಟ್ಟು ಸವಾರರು ಮತ್ತು ಆದಾಯದಲ್ಲಿ ಜಿಗಿತ ಕಂಡಿದೆ, ಪ್ರತಿದಿನ 1 ಕೋಟಿ ದಾಟಿದೆ. ಗಾರ್ಮೆಂಟ್ಸ್ ಕೆಲಸಗಾರರು, ಮನೆಗೆಲಸ, ದಿನಗೂಲಿ ಕಾರ್ಮಿಕರು ಮತ್ತು ಅಸಂಘಟಿತ ವಲಯದ ಸಂಬಳ 12,000 ರೂಪಾಯಿಗಿಂತ ಹೆಚ್ಚಿಲ್ಲ. ಶಕ್ತಿ ಯೋಜನೆಯ ನಂತರ, ಅನೇಕರು ನಮಗೆ 1,000 ರೂಪಾಯಿಗಳಿಗಿಂತ ಹೆಚ್ಚು ಉಳಿಸಲು ಸಮರ್ಥರಾಗಿದ್ದಾರೆ. ಅವರು ಈಗ ಅದನ್ನು ಇತರ ಅಗತ್ಯಗಳಿಗೆ ಬಳಸಬಹುದು ಎಂದು ಹೇಳುತ್ತಾರೆ. ನಾವು ಯೋಜನೆಯ ಬಗ್ಗೆ ಎಲ್ಲಾ ಪ್ರತಿಕ್ರಿಯೆಗಳನ್ನು ತೆಗೆದುಕೊಳ್ಳುತ್ತಿದ್ದೇವೆ. ಜನರ ಸಮಸ್ಯೆಗಳನ್ನು ಪರಿಹರಿಸಲು ಪ್ರಯತ್ನಿಸುತ್ತಿದ್ದೇವೆ ಎಂದು ಹೇಳಿದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

SCROLL FOR NEXT