ಪ್ರಾತಿನಿಧಿಕ ಚಿತ್ರ 
ರಾಜ್ಯ

ಜುಲೈ 9 ರಿಂದ 16ರವರೆಗೆ ಜಿ20 ಶೃಂಗಸಭೆಯ ಮೂರನೇ ಶೆರ್ಪಾ ಸಭೆ: ಹಂಪಿಯಲ್ಲಿ 43 ರಾಷ್ಟ್ರಗಳು ಭಾಗಿ

ಜುಲೈ 9 ರಿಂದ 16ರವರೆಗೆ ವಿಶ್ವಪ್ರಸಿದ್ದ ಹಂಪಿಯಲ್ಲಿ ನಡೆಯುವ ಜಿ20 ಶೃಂಗಸಭೆಯ ಮೂರನೇ ಪ್ರಮುಖ ಸಭೆಯಲ್ಲಿ ಜಾಗತಿಕ ಮಟ್ಟದ ಒಟ್ಟು ಜಿ20 ಶೃಂಗಸಭೆಯ 20 ಸದಸ್ಯ ರಾಷ್ಟ್ರಗಳು, 9 ಆಹ್ವಾನಿತ ರಾಷ್ಟ್ರಗಳು ಸೇರಿ 43 ರಾಷ್ಟ್ರಗಳು ಭಾಗವಹಿಸಲಿವೆ. 

ಹೊಸಪೇಟೆ: ಜುಲೈ 9 ರಿಂದ 16ರವರೆಗೆ ಹಂಪಿಯಲ್ಲಿ ನಡೆಯುವ ಜಿ20 ಶೃಂಗಸಭೆಯ ಮೂರನೇ ಪ್ರಮುಖ ಸಭೆಯಲ್ಲಿ ಜಾಗತಿಕ ಮಟ್ಟದ ಒಟ್ಟು ಜಿ20 ಶೃಂಗಸಭೆಯ 20 ಸದಸ್ಯ ರಾಷ್ಟ್ರಗಳು, 9 ಆಹ್ವಾನಿತ ರಾಷ್ಟ್ರಗಳು ಸೇರಿ 43 ರಾಷ್ಟ್ರಗಳು ಭಾಗವಹಿಸಲಿವೆ. 

ಭಾನುವಾರ ನೀತಿ ಆಯೋಗದ ಸಿಇಒ ಮತ್ತು ಜಿ20 ಶೃಂಗಸಭೆ ಆಯೋಜನೆಯ ಮುಖ್ಯಸ್ಥ (ಶೆರ್ಪಾ) ಅಮಿತಾಭ್ ಕಾಂತ್ ಅವರು ಹಂಪಿಗೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು. ಸಿದ್ಧತೆ ಕುರಿತು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಸಭೆಯನ್ನೂ ನಡೆಸಿದರು.

'ಈಗಾಗಲೇ ಹಂಪಿ ಪಾರಂಪರಿಕ ಪ್ರದೇಶದಲ್ಲಿ ಶೆರ್ಪಾ ಸಭೆಗಾಗಿ ಅಂತಿಮ ಹಂತದ ಸಿದ್ಧತೆ ಕೈಗೊಳ್ಳಲಾಗುತ್ತಿದ್ದು, ಈ ಶೆರ್ಪಾ ಸಭೆಯು 'ವಸುದೈವ ಕುಟುಂಬಕಂ' ಎಂಬ ಧ್ಯೇಯದಡಿ, 'ಒಂದು ಭೂಮಿ, ಒಂದು ಕುಟುಂಬ, ಒಂದೇ ಭವಿಷ್ಯ' ಎಂಬ ಘೋಷವಾಕ್ಯದಡಿ ಶೃಂಗಸಭೆಯನ್ನು ಆಯೋಜನೆ ಮಾಡಲಾಗುತ್ತಿದೆ. ಜಿ20 ಶೃಂಗಸಭೆಯ ಮೂರನೆೇ ಶೆರ್ಪಾ ಸಭೆಗಳು ಜುಲೈ 9 ರಿಂದ 16 ರವರೆಗೆ ಹಂಪಿಯಲ್ಲಿ ನಡೆಯಲಿದೆ. ನಾನು ಅಧಿಕಾರಿಗಳೊಂದಿಗೆ ಸಿದ್ಧತೆಗಳ ಬಗ್ಗೆ ಚರ್ಚಿಸಿದ್ದೇನೆ' ಎಂದು ಕಾಂತ್ ಹೇಳಿದರು. 

ಈ ಬಾರಿ ಭಾರತ ಜಿ20 ಶೃಂಗಸಭೆಯ ಅಧ್ಯಕ್ಷತೆ ವಹಿಸಿದ್ದು, ಜಿ20 ಶೃಂಗಸಭೆಯ ಮೂರನೇ ಪ್ರಮುಖ ಸಭೆ ವಿಶ್ವ ಪಾರಂಪರಿಕ ತಾಣ ಹಂಪಿಯಲ್ಲಿ ಜು. 9 ರಿಂದ 16ರ ವರೆಗೆ ನಡೆಯಲಿದೆ. ಇದರಲ್ಲಿ 43 ದೇಶಗಳ ಉನ್ನತಮಟ್ಟದ ಅಧಿಕಾರವುಳ್ಳ ಪ್ರತಿನಿಧಿಗಳು ಭಾಗವಹಿಸಲಿದ್ದು, ಅಂತರರಾಷ್ಟ್ರೀಯ ಮಟ್ಟದ ಹಲವಾರು ಉನ್ನತ ಸಭೆಗಳು ನಡೆಯಲಿವೆ ಎಂದು ತಿಳಿಸಿದರು.

ಈಗಾಗಲೇ ರಾಜಸ್ಥಾನದ ಉದಯಪುರ, ಅಸ್ಸಾಮಿನ ಕುಮಾರ್ಗಮ್‌ನಲ್ಲಿ ಶೆರ್ಪಾ ಸಭೆಗಳು ನಡೆದಿವೆ. ಜಾಗತಿಕ ಮಟ್ಟದಲ್ಲಿ ಕರ್ನಾಟಕ ರಾಜ್ಯದ ಪ್ರವಾಸೋದ್ಯಮ ಹಾಗೂ ಸಾಂಸ್ಕೃತಿಕ ಹಿರಿಮೆ ಮತ್ತು ಉತ್ಪನ್ನಗಳನ್ನು ಉನ್ನತೀಕರಿಸಲು 3ನೇ ಶೆರ್ಪಾ ಸಭೆ ವಿಶ್ವವಿಖ್ಯಾತ ಪಾರಂಪರಿಕ ತಾಣ ಹಂಪಿಯಲ್ಲಿ ನಡೆಯಲಿದೆ.

ವಿಜಯನಗರ ಜಿಲ್ಲಾಧಿಕಾರಿ ವೆಂಕಟೇಶ್ ಟಿ ಮಾತನಾಡಿ, ಸಭೆಗಳನ್ನು ಯಶಸ್ವಿಗೊಳಿಸಲು ನಾವು ಶ್ರಮಿಸುತ್ತಿದ್ದೇವೆ. ಇದು ನಮಗೆ ಹೆಮ್ಮೆಯ ಕ್ಷಣವಾಗಿದೆ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT