ಸಾಂದರ್ಭಿಕ ಚಿತ್ರ 
ರಾಜ್ಯ

ವಿಜಿಲೆನ್ಸ್ ಅಧಿಕಾರಿಗಳನ್ನು ನೇಮಿಸಿ: ಸಿಎಂ ಸಿದ್ದರಾಮಯ್ಯಗೆ ಎಎಪಿ ಒತ್ತಾಯ

ಕಾನೂನಿನ ಪ್ರಕಾರ ಪ್ರತಿ ಇಲಾಖೆಗೆ ಮುಖ್ಯ ವಿಜಿಲೆನ್ಸ್ ಅಧಿಕಾರಿ (ಸಿವಿಒ) ನೇಮಕ ಮಾಡದಿದ್ದಕ್ಕಾಗಿ ಆಮ್ ಆದ್ಮಿ ಪಕ್ಷವು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. 

ಬೆಂಗಳೂರು: ಕಾನೂನಿನ ಪ್ರಕಾರ ಪ್ರತಿ ಇಲಾಖೆಗೆ ಮುಖ್ಯ ವಿಜಿಲೆನ್ಸ್ ಅಧಿಕಾರಿ (ಸಿವಿಒ) ನೇಮಕ ಮಾಡದಿದ್ದಕ್ಕಾಗಿ ಆಮ್ ಆದ್ಮಿ ಪಕ್ಷವು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. 

2016-17ರಲ್ಲಿ ಪ್ರತಿ ಇಲಾಖೆಗೆ ಸಿವಿಒ ಇರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದರು ಎಂದು ಎಎಪಿ ಮಾಧ್ಯಮ ಉಸ್ತುವಾರಿ ಬ್ರಿಜೇಶ್ ಕಾಳಪ್ಪ ನೆನಪಿಸಿದರು.

'ನೀವು ಎರಡನೇ ಅವಧಿಗೆ ಸಿಎಂ ಆಗಿ ಅಧಿಕಾರ ವಹಿಸಿಕೊಂಡು 50 ದಿನಗಳಿಗಿಂತ ಹೆಚ್ಚು ದಿನ ಕಳೆದಿದೆ. ಹಾಗಿದ್ದರೂ ಇದನ್ನು ಏಕೆ ಮಾಡಲಾಗಿಲ್ಲ? ಲೋಕಾಯುಕ್ತದಲ್ಲಿ ಈಗಾಗಲೇ ಪ್ರಕರಣಗಳ ಹೊರೆ ತುಂಬಾ ಹೆಚ್ಚಾಗಿದೆ. ನೀವು ಸರ್ಕಾರದ ಪ್ರತಿಯೊಂದು ಇಲಾಖೆಯಲ್ಲಿ ಮತ್ತು ಜಿಲ್ಲೆಗೆ ಒಂದರಂತೆ ಜಾಗೃತ ಕೋಶವನ್ನು ಪ್ರಾರಂಭಿಸಬೇಕು' ಎಂದರು.

'ನಿಮ್ಮದೇ ಮುಖ್ಯಮಂತ್ರಿಗಳ ಕಚೇರಿಯಲ್ಲಿ ಸಿವಿಒಗಳನ್ನು ನೇಮಿಸಬೇಕು ಮತ್ತು ಕಳಂಕವಿಲ್ಲದ ಪ್ರಾಮಾಣಿಕ ಅಧಿಕಾರಿಗಳನ್ನು ಈ ಹುದ್ದೆಗಳಿಗೆ ನೇಮಿಸಬೇಕು. ರಾಜ್ಯದಿಂದ ಭ್ರಷ್ಟಾಚಾರ ತೊಲಗದಿದ್ದರೆ ನಿಮ್ಮ ಯಾವುದೇ ಭರವಸೆಯನ್ನು ಜನರಿಗೆ ತಲುಪಿಸುವಲ್ಲಿ ವಿಫಲರಾಗುತ್ತೀರಿ'  ಎಂದು ಎಚ್ಚರಿಸಿದರು.

ಮುಂದಿನ ದಿನಗಳಲ್ಲಿ ಈ ಸಲಹೆಗಳನ್ನು ಈಡೇರಿಸದಿದ್ದಲ್ಲಿ ಎಎಪಿ ಪ್ರತಿಭಟನೆಯ ಹಾದಿ ಹಿಡಿಯಬೇಕಾಗುತ್ತದೆ ಎಂದರು. 
ಭ್ರಷ್ಟಾಚಾರದ ವಿರುದ್ಧದ ಹೋರಾಟದಲ್ಲಿ, ದೆಹಲಿ ಮತ್ತು ಪಂಜಾಬ್‌ನಂತೆ ಭ್ರಷ್ಟಾಚಾರಕ್ಕೆ ಸಂಬಂಧಿಸಿದ ದೂರುಗಳನ್ನು ವ್ಯವಹರಿಸಲು ಸಾಮಾನ್ಯ ಫೋನ್ ಸಂಖ್ಯೆಯನ್ನು ಏಕೆ ಅಳವಡಿಸಲಾಗಿಲ್ಲ ಎಂದು ಕೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಜೂನ್ 30ರೊಳಗೆ ಮುಗಿಸಿ: ರಾಜ್ಯ ಸರ್ಕಾರಕ್ಕೆ 'ಸುಪ್ರೀಂ' ಗಡುವು

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

ಕ್ರಿಕೆಟ್ ಇತಿಹಾಸದಲ್ಲೇ ಮೊದಲು: ಅಂತಾರಾಷ್ಟ್ರೀಯ ಕ್ರಿಕೆಟ್ ಲೀಗ್ ನಲ್ಲಿ ಜೊತೆಯಾಗಿ ಕಣಕ್ಕಿಳಿದ ಅಪ್ಪ-ಮಗ.. ಯಾರಿವರು?

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

SCROLL FOR NEXT