ಮಾಸ್ತಿಗೌಡ ಹತ್ಯೆ 
ರಾಜ್ಯ

ಹಾಸನ: ರೌಡಿಶೀಟರ್​ ಮಾಸ್ತಿಗೌಡನ ಅಟ್ಟಾಡಿಸಿ ಬರ್ಬರ ಹತ್ಯೆ!

ಚನ್ನರಾಯಪಟ್ಟಣ ತಾಲೂಕಿನ ಹೊನ್ನಮಾರನಹಳ್ಳಿಯ ನಟೋರಿಯಸ್ ರೌಡಿಶೀಟರ್ ಮಾಸ್ತಿಗೌಡ ಅಲಿಯಾಸ್ ಕೃಷ್ಣ ಎಂಬಾತನನ್ನು ಹಾಡುಹಗಲೇ ಅಟ್ಟಾಡಿಸಿ ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. 

ಹಾಸನ: ಚನ್ನರಾಯಪಟ್ಟಣ ತಾಲೂಕಿನ ಹೊನ್ನಮಾರನಹಳ್ಳಿಯ ನಟೋರಿಯಸ್ ರೌಡಿಶೀಟರ್ ಮಾಸ್ತಿಗೌಡ ಅಲಿಯಾಸ್ ಕೃಷ್ಣ ಎಂಬಾತನನ್ನು ಹಾಡುಹಗಲೇ ಅಟ್ಟಾಡಿಸಿ ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. 

ಪಟ್ಟಣದ ಬಿಎಂ ರಸ್ತೆಯಲಿರುವ ಧನಲಕ್ಷ್ಮೀ ಚಿತ್ರಮಂದಿರದ ಮುಂಭಾಗದಲ್ಲಿ ಇನ್ನೋವಾ ಕಾರಿನಲ್ಲಿ ಬಂದ ನಾಲ್ಕೈದು ದುಷ್ಕರ್ಮಿಗಳ ತಂಡ ಮಾಸ್ತಿಗೌಡನನ್ನು ಹತ್ಯೆ ಮಾಡಿ ಪರಾರಿಯಾಗಿದೆ. 

ಮಾಸ್ತಿಗೌಡ ಕಾನೂನು ಬಾಹಿರ ಚಟುವಟಿಕೆ ಆರೋಪದಡಿ ಗಡಿಪಾರಾಗಿ ಸದ್ಯ ಕಲಬುರಗಿ ಜೈಲಿನಲ್ಲಿರುವ ಮತ್ತೊಬ್ಬ ರೌಡಿ ಶೀಟರ್ ಯಾಚೇನಹಳ್ಳಿ ಚೇತುವಿನ ಮಾಜಿ ಶಿಷ್ಯನಾಗಿದ್ದು ಈತ ಹಲವಾರು ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿದ್ದನು.

ಇನ್ನು ಮಾಸ್ತಿಗೌಡನ ಬರ್ಬರ ಕೊಲೆಯಿಂದ ಇದೀಗ ಚನ್ನರಾಯಪಟ್ಟಣ ಜನತೆ ಬೆಚ್ಚಿ ಬಿದ್ದಿದ್ದಾರೆ. ಸುದ್ದಿ ತಿಳಿಯುತ್ತಿದ್ದಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಂ ಶಂಕರ್, ಚನ್ನರಾಯಪಟ್ಟಣ ಡಿವೈಎಸ್​ಪಿ ರವಿಪ್ರಸಾದ್, ನಗರ ಠಾಣೆ ಇನ್ಸ್‌ಪೆಕ್ಟರ್ ಕೆ.ಎಂ. ವಸಂತ್, ಶ್ವಾನದಳ ಹಾಗೂ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಜನರ ಭಾವನೆ ಮೇಲೆ ರಾಜಕಾರಣ ಮಾಡಲ್ಲ: ಸುಮ್ಮನೆ ಘೋಷಣೆ ಮಾಡಿ ಮರೆಯುವ ಜಾಯಮಾನ ನಮ್ಮದಲ್ಲ- ಸಿಎಂ ಡಿಕೆ ಶಿವಕುಮಾರ್!

ಟಿ. ನರಸೀಪುರ ಶೋಭಾಯಾತ್ರೆ: ಮಸೀದಿ ಮುಂದೆ ಪಟಾಕಿ ಸಿಡಿಸಿ ಸಂಭ್ರಮ, ಒಂದುವರೆ ವರ್ಷದಲ್ಲಿ ನಾವು ಬರ್ತೀವಿ, ಅವಾಗ ಲೆಕ್ಕ ಚುಪ್ತ ಮಾಡ್ತೀವಿ- ಪ್ರತಾಪ್ ಸಿಂಹ

ಪಂಚಾಯ್ತಿ ಚುನಾವಣೆ ನಡೆಸಲು ಸಚಿವ ಸಂಪುಟದ ನಿರ್ಧಾರ: EVM ಬದಲು ಮತಪೆಟ್ಟಿಗೆ ಬಳಕೆ

ಅಭಿಮಾನಿಯ ಕಾಲಿನ ಮೇಲೆ ಹತ್ತಿದ ಕಾರು: ತಾಳ್ಮೆ ಕಳೆದುಕೊಂಡು ಚಾಲಕನಿಗೆ ಹಿಗ್ಗಾಮುಗ್ಗಾ ಬೈದ ಸಲ್ಮಾನ್ ಖಾನ್! video

ಸಾಕ್ಷ್ಯ ವಿಚಾರಣೆ ವೇಳೆ ದರ್ಶನ್ ಖುದ್ದು ಹಾಜರಾಗಲು ಹೈಕೋರ್ಟ್ ಒಪ್ಪಿಗೆ, ಷರತ್ತು ಅನ್ವಯ!