ಮಾಸ್ತಿಗೌಡ ಹತ್ಯೆ 
ರಾಜ್ಯ

ಹಾಸನ: ರೌಡಿಶೀಟರ್​ ಮಾಸ್ತಿಗೌಡನ ಅಟ್ಟಾಡಿಸಿ ಬರ್ಬರ ಹತ್ಯೆ!

ಚನ್ನರಾಯಪಟ್ಟಣ ತಾಲೂಕಿನ ಹೊನ್ನಮಾರನಹಳ್ಳಿಯ ನಟೋರಿಯಸ್ ರೌಡಿಶೀಟರ್ ಮಾಸ್ತಿಗೌಡ ಅಲಿಯಾಸ್ ಕೃಷ್ಣ ಎಂಬಾತನನ್ನು ಹಾಡುಹಗಲೇ ಅಟ್ಟಾಡಿಸಿ ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. 

ಹಾಸನ: ಚನ್ನರಾಯಪಟ್ಟಣ ತಾಲೂಕಿನ ಹೊನ್ನಮಾರನಹಳ್ಳಿಯ ನಟೋರಿಯಸ್ ರೌಡಿಶೀಟರ್ ಮಾಸ್ತಿಗೌಡ ಅಲಿಯಾಸ್ ಕೃಷ್ಣ ಎಂಬಾತನನ್ನು ಹಾಡುಹಗಲೇ ಅಟ್ಟಾಡಿಸಿ ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. 

ಪಟ್ಟಣದ ಬಿಎಂ ರಸ್ತೆಯಲಿರುವ ಧನಲಕ್ಷ್ಮೀ ಚಿತ್ರಮಂದಿರದ ಮುಂಭಾಗದಲ್ಲಿ ಇನ್ನೋವಾ ಕಾರಿನಲ್ಲಿ ಬಂದ ನಾಲ್ಕೈದು ದುಷ್ಕರ್ಮಿಗಳ ತಂಡ ಮಾಸ್ತಿಗೌಡನನ್ನು ಹತ್ಯೆ ಮಾಡಿ ಪರಾರಿಯಾಗಿದೆ. 

ಮಾಸ್ತಿಗೌಡ ಕಾನೂನು ಬಾಹಿರ ಚಟುವಟಿಕೆ ಆರೋಪದಡಿ ಗಡಿಪಾರಾಗಿ ಸದ್ಯ ಕಲಬುರಗಿ ಜೈಲಿನಲ್ಲಿರುವ ಮತ್ತೊಬ್ಬ ರೌಡಿ ಶೀಟರ್ ಯಾಚೇನಹಳ್ಳಿ ಚೇತುವಿನ ಮಾಜಿ ಶಿಷ್ಯನಾಗಿದ್ದು ಈತ ಹಲವಾರು ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿದ್ದನು.

ಇನ್ನು ಮಾಸ್ತಿಗೌಡನ ಬರ್ಬರ ಕೊಲೆಯಿಂದ ಇದೀಗ ಚನ್ನರಾಯಪಟ್ಟಣ ಜನತೆ ಬೆಚ್ಚಿ ಬಿದ್ದಿದ್ದಾರೆ. ಸುದ್ದಿ ತಿಳಿಯುತ್ತಿದ್ದಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಂ ಶಂಕರ್, ಚನ್ನರಾಯಪಟ್ಟಣ ಡಿವೈಎಸ್​ಪಿ ರವಿಪ್ರಸಾದ್, ನಗರ ಠಾಣೆ ಇನ್ಸ್‌ಪೆಕ್ಟರ್ ಕೆ.ಎಂ. ವಸಂತ್, ಶ್ವಾನದಳ ಹಾಗೂ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಕೋರ್ಟ್ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

T20 World Cup 2026: ಶ್ರೀಲಂಕಾ ವಿರುದ್ಧ ನ್ಯೂಜಿಲ್ಯಾಂಡ್ ​ಗೆ 61 ರನ್ ಭರ್ಜರಿ ಗೆಲುವು

India to Israel: ಪ್ರಧಾನಿ ಮೋದಿ ಪಯಣಿಸಿದ Air India ವಿಮಾನ ವಿಶ್ವದಲ್ಲೇ ಅತಿ ಹೆಚ್ಚು ಟ್ರ್ಯಾಕ್: Flightradar24

Ranji Trophy final: ಕರ್ನಾಟಕ ವಿರುದ್ಧ ಜಮ್ಮು ಮತ್ತು ಕಾಶ್ಮೀರ ಬೃಹತ್ ಮೊತ್ತ; 527/6

SCROLL FOR NEXT