ಸಂಗ್ರಹ ಚಿತ್ರ 
ರಾಜ್ಯ

ಬೆಂಗಳೂರು-ಮೈಸೂರು ಎಕ್ಸ್​ಪ್ರೆಸ್ ವೇನಲ್ಲಿ ಇಲ್ಲಿಯವರೆಗೂ 512 ಅಪಘಾತ!

ಬೆಂಗಳೂರು-ಮೈಸೂರು ಎಕ್ಸ್'ಪ್ರೆಸ್ ವೇಯಲ್ಲಿ ಅಪಘಾತ ಸಂಖ್ಯೆ ಹೆಚ್ಚಳ ಸೇರಿದಂತೆ ಇರುವ ನ್ಯೂನತೆ ಕುರಿತು ಕೇಂದ್ರ ಸರ್ಕಾರದ ಗಮನಕ್ಕೆ ತರಲಾಗಿದ್ದು, ಸುರಕ್ಷಿತ ಪ್ರಯಾಣ ಮತ್ತು ನ್ಯೂನತೆ ಸರಿಪಡಿಸಲು ಎಲ್ಲ ರೀತಿಯ ಕ್ರಮಗಳ ಕೈಗೊಳ್ಳಲಾಗುತ್ತಿದೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಭರವಸೆ ನೀಡಿದರು.

ಬೆಂಗಳೂರು: ಬೆಂಗಳೂರು-ಮೈಸೂರು ಎಕ್ಸ್'ಪ್ರೆಸ್ ವೇಯಲ್ಲಿ ಅಪಘಾತ ಸಂಖ್ಯೆ ಹೆಚ್ಚಳ ಸೇರಿದಂತೆ ಇರುವ ನ್ಯೂನತೆ ಕುರಿತು ಕೇಂದ್ರ ಸರ್ಕಾರದ ಗಮನಕ್ಕೆ ತರಲಾಗಿದ್ದು, ಸುರಕ್ಷಿತ ಪ್ರಯಾಣ ಮತ್ತು ನ್ಯೂನತೆ ಸರಿಪಡಿಸಲು ಎಲ್ಲ ರೀತಿಯ ಕ್ರಮಗಳ ಕೈಗೊಳ್ಳಲಾಗುತ್ತಿದೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಭರವಸೆ ನೀಡಿದರು.

ವಿಧಾನಪರಿಷತ್ತಿನಲ್ಲಿ ಜೆಡಿಎಸ್ ಎಂಎಲ್ ಸಿ ಮರಿತಿಬ್ಬೇಗೌಡ ಅವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಎಕ್ಸ್‌ಪ್ರೆಸ್‌ ವೇ ನಲ್ಲಿನ ಅಪಘಾತಗಳು ಹೆಚ್ಚಾಗುತ್ತಿವೆ, ಟೋಲ್​​ಗೆ ಜನರ ಗಲಾಟೆಯಾಗುತ್ತಿದೆ, ಅಂಡರ್ ಪಾಸ್ ನಲ್ಲಿ ಮಳೆ ನೀರು ನಿಲ್ಲುತ್ತಿದೆ ಎಂದಿದ್ದಾರೆ ಈ ಸಂಬಂಧ ಈಗಾಗಲೇ ನಿನ್ನೆ ಸಭೆ ಕರೆದು ಚರ್ಚೆ ಮಾಡಿದ್ದೇವೆ.

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸಂಪೂರ್ಣವಾಗಿ ನಮ್ಮ ನಿಯಂತ್ರಣದಲ್ಲಿಲ್ಲ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ನಿಯಂತ್ರಣದಲ್ಲಿದೆ. ಲೋಪಗಳಿದ್ದಲ್ಲಿ ಅದನ್ನು ಪ್ರಾಧಿಕಾರದ ಜೊತೆ ಸಂಪರ್ಕ ಮಾಡಿ ಚರ್ಚಿಸಲಾಗುತ್ತದೆ. ಅಪಘಾತಕ್ಕೆ ಅತಿವೇಗ ಕಾರಣ, ಕೆಲವೆಡೆ ಅವೈಜ್ಞಾನಿಕ ಸಮಸ್ಯೆ ಇದೆ, ಎಲ್ಲ ನಿಯಂತ್ರಣ ಮಾಡಲು ಕ್ರಮ ವಹಿಸಲಾಗುತ್ತದೆ. ಎಲ್ಲ ಸಮಸ್ಯೆ ಕುರಿತು ಗಡ್ಕರಿ ಗಮನಕ್ಕೂ ತಂದಿದ್ದೇವೆ. ಪರಿಶೀಲಿಸಿ ಕ್ರಮ ವಹಿಸಲಿದ್ದೇವೆ ಎಂದು ಉತ್ತರಿಸಿದರು.

ಇದೇ ವೇಳೆ 2023ರ ಜನವರಿಯಿಂದ ಇಲ್ಲಿಯವರೆಗೂ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ 512 ಅಪಘಾತಗಳು ವರದಿಯಾಗಿವೆ, ಇದರಲ್ಲಿ 123 ಜನರು ಸಾವನ್ನಪ್ಪಿದ್ದಾರೆ ಮತ್ತು 585 ಜನರಿಗೆ ಗಂಭೀರ ಗಾಯಗಳಾಗಿವೆ. ಅವುಗಳಲ್ಲಿ 245 ಅಪಘಾತಗಳು ಬೆಂಗಳೂರು-ನಿಡಘಟ್ಟ ಹೆದ್ದಾರಿಯ ನಡುವೆ ವರದಿಯಾಗಿವೆ ಎಂದು ಸದನಕ್ಕೆ ಸಚಿವರು ಮಾಹಿತಿ ನೀಡಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮುಂಬೈ: ಖ್ಯಾತ ಹಿರಿಯ ಗಾಯಕಿ ಆಶಾ ಭೋಸ್ಲೆ ನಿಧನ, ಗಣ್ಯರ ಕಂಬನಿ

US-Iran Peace Talks: ಇಸ್ಲಾಮಾಬಾದ್‌ನಲ್ಲಿ 21 ಗಂಟೆ ಮಾತುಕತೆಯಾದ್ರು, ಯುಎಸ್- ಇರಾನ್ ಶಾಂತಿ ಒಪ್ಪಂದ ವಿಫಲ! ಕಾರಣಗಳೇನು?

'ಇರಾನ್ ನಮಗೆ ಬೆದರಿಕೆಯೊಡ್ಡಿತ್ತು, ಆದರೆ ಈಗ ಬದುಕುಳಿಯಲು ಹೋರಾಡುತ್ತಿದೆ': ಶಾಂತಿ ಮಾತುಕತೆ ವಿಫಲದ ಬಳಿಕ ಇಸ್ರೇಲ್!

"Bad News": ಅಮೆರಿಕದ ಷರತ್ತುಗಳನ್ನು ಇರಾನ್ ಒಪ್ಪುತ್ತಿಲ್ಲ- ಜೆಡಿ ವ್ಯಾನ್ಸ್!

ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ನೇರ ಮಾತುಕತೆ; ಅಮೆರಿಕದ ಬೇಡಿಕೆ ಅತಿಯಾಗಿದೆ ಎಂದು ಇರಾನ್ ಮಾಧ್ಯಮಗಳ ಆರೋಪ

SCROLL FOR NEXT