ಬಾಬು ಜಗಜೀವನ್ ರಾಂ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ 
ರಾಜ್ಯ

ಬಾಬು ಜಗಜೀವನ್ ರಾಂ ಅವರ ಸಮಾಜಮುಖಿ ಕೆಲಸಗಳು ಚಿರಸ್ಥಾಯಿ- ಸಿಎಂ ಸಿದ್ದರಾಮಯ್ಯ

ಬಾಬು ಜಗಜೀವನ್ ರಾಂ ಅವರ  ಸಮಾಜಮುಖಿ ಕೆಲಸಗಳು ಚಿರಸ್ಥಾಯಿಯಾಗಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಬೆಂಗಳೂರು: ಬಾಬು ಜಗಜೀವನ್ ರಾಂ ಅವರ  ಸಮಾಜಮುಖಿ ಕೆಲಸಗಳು ಚಿರಸ್ಥಾಯಿಯಾಗಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಹಸಿರು ಕ್ರಾಂತಿಯ ಹರಿಹಾರ, ರಾಷ್ಟ್ರನಾಯಕ ಹಾಗೂ ಭಾರತದ ಮಾಜಿ ಉಪ ಪ್ರಧಾನಿ ಡಾ. ಬಾಬು ಜಗಜೀವನ್‍ ರಾಮ್ ರವರ 37 ನೇ ಪುಣ್ಯಸ್ಮರಣೆ ಅಂಗವಾಗಿ ವಿಧಾನಸೌಧದ ಪಶ್ಚಿಮದ್ವಾರ ಬಳಿ  ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮಾತನಾಡಿದ ಮುಖ್ಯಮಂತ್ರಿ, ಸ್ವಾತಂತ್ರ್ಯ ಭಾರತದಲ್ಲಿ ನೆಹರು ಅವರ ಸಂಪುಟದಲ್ಲಿ ಮಂತ್ರಿಯಾಗಿದ್ದ, ದೇಶದ ಮೊದಲ ಉಪ ಪ್ರಧಾನಿಯಾಗಿದ್ದ ಬಾಬು ಜಗಜೀವನ್ ರಾಮ್ ಅವರು, ದಕ್ಷ ಆಡಳಿತಗಾರರು. ಹಸಿರು ಕ್ರಾಂತಿಯ ಮೂಲಕ ದೇಶದಲ್ಲಿ ಆಹಾರ ಸ್ವಾಲಂಬಲನೆಯಾಗಲು ಕಾರಣಕರ್ತರು ಎಂದರು. 

ಯಾವುದೇ ಇಲಾಖೆಯಲ್ಲಿದ್ದರೂ ತಳಸಮುದಾಯದ ಜನರಿಗೆ ಸಂವಿಧಾನಬದ್ಧ ನ್ಯಾಯ ದೊರಕಿಸಲು ಹೋರಾಡಿದರು.  ಅವರ ಬದುಕು ನಮಗೆ ಪ್ರೇರಣೆಯಾಗಬೇಕು ಎಂದರು.  ಅಂಥ ಮಹಾನುಭಾವರ ಪುಣ್ಯಸ್ಮರಣೆ ಮಾಡಿದ್ದು, ಅವರು ನಮಗೆಲ್ಲರಿಗೂ ಮಾರ್ಗದರ್ಶಕರು.  ಅವರ ಮಾರ್ಗದಲ್ಲಿ ನಡೆಯುವ ಪ್ರಯತ್ನವೇ ನಾವು ಅವರಿಗೆ ಸಲ್ಲಿಸುವ ಗೌರವ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

BMTC ಬಸ್ ಚಾಲಕನಿಗೆ ಫಿಡ್ಸ್, ಚಿನ್ನಸ್ವಾಮಿ ಕ್ರೀಡಾಂಗಣ ರಸ್ತೆಯಲ್ಲಿ ಸರಣಿ ಅಪಘಾತ

ಬೆಂಗಳೂರು: ರಾತ್ರಿಯಿಡೀ ಸುರಿದ ಮಳೆಯಿಂದ ಹಲವೆಡೆ ಜಲಾವೃತ, ಸಂಚಾರ ದಟ್ಟಣೆ, ಇಂದಿನ IMD ವರದಿ!

'ನಂಗೇ ಕೊಡಿ ಎಂದು ನಾನೇನು ಕೇಳಿಲ್ಲ..': ನೊಬೆಲ್ ಶಾಂತಿ ಪ್ರಶಸ್ತಿ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತು!

SCROLL FOR NEXT