ಬೆಂಗಳೂರು ವಿಮಾನ ನಿಲ್ದಾಣದ ಆವರಣದಲ್ಲಿ ನಡೆಯುತ್ತಿರುವ ನಿರ್ಮಾಣ ಕಾರ್ಯ 
ರಾಜ್ಯ

ವಿಮಾನ ನಿಲ್ದಾಣದಲ್ಲಿ ತಾಮ್ರದ ಕೇಬಲ್ ಕದ್ದ ಹೌಸ್ ಕೀಪರ್ ವಿರುದ್ಧ ಕೇಸ್ ದಾಖಲು, ಕೆಲಸದಿಂದ ವಜಾ

ಕಟ್ಟಡ ಕಾಮಗಾರಿ ನಡೆಯುತ್ತಿರುವ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಆವರಣದಲ್ಲಿ 50 ಮೀಟರ್‌ಗಳಷ್ಟು ತಾಮ್ರದ ಕೇಬಲ್ ವೈರ್ ಕದಿಯುತ್ತಿದ್ದ ಹೌಸ್ ಕೀಪಿಂಗ್ ಸಿಬ್ಬಂದಿಯೊಬ್ಬರು ರೆಡ್‌ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. 

ಬೆಂಗಳೂರು: ಕಟ್ಟಡ ಕಾಮಗಾರಿ ನಡೆಯುತ್ತಿರುವ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಆವರಣದಲ್ಲಿ 50 ಮೀಟರ್‌ಗಳಷ್ಟು ತಾಮ್ರದ ಕೇಬಲ್ ವೈರ್ ಕದಿಯುತ್ತಿದ್ದ ಹೌಸ್ ಕೀಪಿಂಗ್ ಸಿಬ್ಬಂದಿಯೊಬ್ಬರು ರೆಡ್‌ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. 

ಕೇಬಲ ಕದ್ದ ರಾಹುಲ್ ಕುಮಾರ್ ವಿರುದ್ಧ ಕೆಐಎ ಪೊಲೀಸ್ ಠಾಣೆಯಲ್ಲಿ ಮಂಗಳವಾರ ಎಫ್‌ಐಆರ್ ದಾಖಲಾಗಿದ್ದು, ಇಂದು ಸೇವೆಯಿಂದ ವಜಾಗೊಳಿಸಲಾಗಿದೆ.

ವಿಮಾನ ನಿಲ್ದಾಣದ ಪೊಲೀಸರ ಪ್ರಕಾರ, ವಿಮಾನ ನಿಲ್ದಾಣದ ಟರ್ಮಿನಲ್ 1 ಮತ್ತು 2 ನಡುವೆ ಮಲ್ಟಿ ಮಾಡಲ್ ಟ್ರಾನ್ಸ್‌ಪೋರ್ಟ್ ಹಬ್(ಎಂಎಂಟಿಎಚ್) ನಿರ್ಮಿಸುತ್ತಿರುವ ಗೋದ್ರೇಜ್ ಮತ್ತು ಬಾಯ್ಸ್ ಅವರು ನೀಡಿದ ದೂರಿನ ಆಧಾರದ ಮೇಲೆ ಐಪಿಸಿಯ ಸೆಕ್ಷನ್ 379(ಕಳ್ಳತನ) ಅಡಿಯಲ್ಲಿ ಕೇಸ್ ದಾಖಲಿಸಲಾಗಿದೆ.

ಎಸ್ಎಲ್ ವಿ ಸರ್ವಿಸೆಸ್, ತನ್ನ ಹೌಸ್ ಕೀಪಿಂಗ್ ಸಿಬ್ಬಂದಿಯಾಗಿದ್ದ ರಾಹುಲ್ ಕುಮಾರ್ ನನ್ನು ಕೆಲಸದಿಂದ ವಜಾ ಮಾಡಿದೆ.

ಬಿಹಾರ ಮೂಲದ ಕುಮಾರ್ ಮಂಗಳವಾರ ಸಂಜೆ 5.30 ರ ಸುಮಾರಿಗೆ ಕೇಬಲ್ ಅನ್ನು ಹೊತ್ತುಕೊಂಡು ನಿರ್ಮಾಣ ಸ್ಥಳದಿಂದ ಹೊರಗೆ ಹೋಗುತ್ತಿರುವುದನ್ನು ವಿಮಾನ ನಿಲ್ದಾಣದ ನಿರ್ವಾಹಕರು, ಬೆಂಗಳೂರು ಇಂಟರ್ನ್ಯಾಷನಲ್ ಏರ್‌ಪೋರ್ಟ್ ಲಿಮಿಟೆಡ್(BIAL)ನ ಭದ್ರತಾ ಸಿಬ್ಬಂದಿ ಗಮನಿಸಿದ್ದಾರೆ. ಅದರ ಬಗ್ಗೆ ಆತನನ್ನು ಕೇಳಿದಾಗ, ತನ್ನ ಬಟ್ಟೆ ಒಣಗಿಸಲು ಈ ಕೇಬಲ್ ಬೇಕಾಗಿದೆ ಎಂದು ಹೇಳಿದ್ದಾನೆ.

ಈ ಬಗ್ಗೆ ಭದ್ರತಾ ಸಿಬ್ಬಂದಿ ಗೋದ್ರೇಜ್‌ಗೆ ಮಾಹಿತಿ ನೀಡಿದ್ದಾರೆ. "ಅವರು ಕುಮಾರ್ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ. ಕೇಬಲ್‌ನ ಮೌಲ್ಯ ಕೇವಲ 3000 ರೂ. ಆದರೆ, ಭವಿಷ್ಯದಲ್ಲಿ ಹೆಚ್ಚು ಬೆಲೆಬಾಳುವ ವಸ್ತುಗಳು ಕಳ್ಳತನವಾಗುವ ಸಾಧ್ಯತೆಯಿದೆ. ಆದ್ದರಿಂದ, ಅವರು ಕೇಸ್ ದಾಖಲಿಸಿದ್ದಾರೆ" ಎಂದು ಪೊಲೀಸರು ಹೇಳಿದ್ದಾರೆ.

ಕೇಬಲ್‌ಗಳಲ್ಲಿನ ತಾಮ್ರವನ್ನು ಹೊರ ತೆಗೆದು ಅದನ್ನು ಸ್ಕ್ರ್ಯಾಪ್ ಅಂಗಡಿಗಳಲ್ಲಿ ಮಾರಾಟ ಮಾಡಲಾಗುತ್ತದೆ. ಹೀಗಾಗಿ ಕುಮಾರ್ ವಿರುದ್ಧ ಕೇಸ್ ದಾಖಲಿಸಲಾಗಿದ್ದು, ಸದ್ಯ ಆರೋಪಿ ಜಾಮೀನಿನ ಮೇಲೆ ಹೊರಗಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದಾವಣಗೆರೆಯಲ್ಲಿ ಕಾಂಗ್ರೆಸ್ ಬೆನ್ನಿಗೆ ಚೂರಿ: ಸುರ್ಜೇವಾಲ ಕೈಸೇರಿದ ರಿಪೋರ್ಟ್; MLC ಅಬ್ದುಲ್ ಜಬ್ಬಾರ್ ರಾಜಿನಾಮೆ!

ದಾವಣಗೆರೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ: ಸಿಎಂ ರಾಜಕೀಯ ಕಾರ್ಯದರ್ಶಿ ನಸೀರ್ ತಲೆದಂಡ, ಜಮೀರ್ ಸಚಿವ ಸ್ಥಾನಕ್ಕೂ ಕುತ್ತು?

ಮಗ ವಿದೇಶದಲ್ಲಿ ಓದುತ್ತಿದ್ದಾನೆ, ಹಲ್ಲೆ ಕೇಸ್ ಕೈಬಿಡಿ: ಪುತ್ರನ ಭವಿಷ್ಯಕ್ಕಾಗಿ ಪ್ರಕರಣ ರದ್ದು ಕೋರಿದ ಅನಂತಕುಮಾರ್ ಹೆಗಡೆ!

ನಮಸ್ತೆ.. ಏನ್ರೀ ರಾಹುಲ್ ಹೇಗಿದ್ದೀರಾ? ; ಸಂಸತ್ ಭವನದ ಬಳಿ ಪ್ರಧಾನಿ ಮೋದಿ-Rahul Gandhi ಅಪರೂಪದ ಮುಖಾಮುಖಿ! Video

ಮಾತುಕತೆಗೂ ಮುನ್ನವೇ ಟೆಹ್ರಾನ್‌ಗೆ ದೊಡ್ಡ ಗೆಲುವು; ಫ್ರೀಜ್ ಮಾಡಲಾದ ಇರಾನ್ ಸ್ವತ್ತುಗಳ ಬಿಡುಗಡೆಗೆ ಅಮೆರಿಕ ಒಪ್ಪಿಗೆ!

SCROLL FOR NEXT