ಸಿಎಂ ಸಿದ್ದರಾಮಯ್ಯ 
ರಾಜ್ಯ

ಕುಮಾರಸ್ವಾಮಿ ಯಾವಾಗಲೂ ಹಿಟ್ ಅಂಡ್ ರನ್ ಕೇಸು, ಆರೋಪಕ್ಕೆ ಸದನದಲ್ಲಿ ಉತ್ತರ ಕೊಡುತ್ತೇನೆ: ಸಿಎಂ ಸಿದ್ದರಾಮಯ್ಯ

ಜೆಡಿಎಸ್ ನಾಯಕ ಹೆಚ್ ಡಿ ಕುಮಾರಸ್ವಾಮಿಯವರು ಹತಾಶೆ, ದ್ವೇಷದಿಂದ ಹೀಗೆಲ್ಲಾ ಮಾತನಾಡುತ್ತಿದ್ದಾರೆ. ಹೊಸ ಸರ್ಕಾರ ರಚನೆಯಾದ ಮೇಲೆ ವರ್ಗಾವಣೆಯಾಗುವುದು ಸಾಮಾನ್ಯ. ಅದರಲ್ಲಿ ದಂಧೆ, ಲಂಚ ನಡೆದಿದೆ ಎನ್ನುವುದು ಸುಳ್ಳು ಆರೋಪ ಎಂದು ಸಿಎಂ ಸಿದ್ದರಾಮಯ್ಯ ಮಾಜಿ ಸಿಎಂ ಕುಮಾರಸ್ವಾಮಿ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ.

ಬೆಂಗಳೂರು: ಜೆಡಿಎಸ್ ನಾಯಕ ಹೆಚ್ ಡಿ ಕುಮಾರಸ್ವಾಮಿಯವರು ಹತಾಶೆ, ದ್ವೇಷದಿಂದ ಹೀಗೆಲ್ಲಾ ಮಾತನಾಡುತ್ತಿದ್ದಾರೆ. ಹೊಸ ಸರ್ಕಾರ ರಚನೆಯಾದ ಮೇಲೆ ವರ್ಗಾವಣೆಯಾಗುವುದು ಸಾಮಾನ್ಯ. ಅದರಲ್ಲಿ ದಂಧೆ, ಲಂಚ ನಡೆದಿದೆ ಎನ್ನುವುದು ಸುಳ್ಳು ಆರೋಪ ಎಂದು ಸಿಎಂ ಸಿದ್ದರಾಮಯ್ಯ(Siddaramaiah) ಮಾಜಿ ಸಿಎಂ ಕುಮಾರಸ್ವಾಮಿ(H D Kumaraswamy) ಆರೋಪಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ.

ಇಂದು ವಿಧಾನ ಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿಗಳು ಮುಖ್ಯಮಂತ್ರಿಗಳಾಗಿದ್ದ ಸಮಯದಲ್ಲಿ ವರ್ಗಾವಣೆಯಾಗಿರಲಿಲ್ಲವೇ, ಆಗ ಅವರು ಲಂಚ ತೆಗೆದುಕೊಂಡಿದ್ದರೇ, ಟ್ರಾನ್ಸ್ ಫರ್ ಆದಾಗ ದುಡ್ಡು ತಗೊಂಡಿದ್ದಾರೆ, ಲಂಚ ತೆಗೆದುಕೊಂಡಿದ್ದಾರೆ ಎನ್ನುವುದು ಕೇವಲ ಊಹೆಯಷ್ಟೇ ಎಂದರು.

ಆಡಳಿತಾತ್ಮಕ ದೃಷ್ಟಿಯಿಂದ ಸಾಮಾನ್ಯ ವರ್ಗಾವಣೆ ಪ್ರಕ್ರಿಯೆ ನಡೆಯುತ್ತದೆ. ಮಾರ್ಚ್ ಏಪ್ರಿಲ್ ತಿಂಗಳಲ್ಲಿ ಎಲೆಕ್ಷನ್ ಎಂದು ವರ್ಗಾವಣೆಗಳು ಆಗಿರಲಿಲ್ಲ, ಈಗ ನಡೆಯುತ್ತಿರುವ ಸರ್ಕಾರಿ ಅಧಿಕಾರಿಗಳ ವರ್ಗಾವಣೆ ಸಾಮಾನ್ಯ ಪ್ರಕ್ರಿಯೆ ಎಂದರು.

ಕುಮಾರಸ್ವಾಮಿ ಹಿಟ್ ಅಂಡ್ ರನ್ ಕೇಸು: ಕುಮಾರಸ್ವಾಮಿಯವರು ಯಾವಾಗಲೂ ಹಿಟ್ ಅಂಡ್ ರನ್ ಕೇಸು, ಅವರು ಇದುವರೆಗೆ ಮಾಡಿರುವ ಆರೋಪಗಳನ್ನು ತಾತ್ವಿಕವಾಗಿ ಕೊನೆಯವರೆಗೆ ತೆಗೆದುಕೊಂಡು ಹೋಗಿದ್ದಾರೆಯೇ, ಸರಿಯಾದ ಸಮಯಕ್ಕೆ ದಾಖಲೆ ಬಿಡುಗಡೆ ಮಾಡಲಿ ನೋಡೋಣ, ನಾವು ಆಗ ಉತ್ತರ ಕೊಡುತ್ತೇವೆ ಎಂದರು.

ಅವರ ಕುಟುಂಬದವರೂ ರಾಜಕೀಯದಲ್ಲಿ ಇದ್ದಾರೆ: ಪುತ್ರ ಯತೀಂದ್ರ ಮನೆಯಲ್ಲಿ ಇರುತ್ತಾರೆ, ಅವರು ಮಾಜಿ ಶಾಸಕ. ಹೆಚ್.ಡಿ.ಕುಮಾರಸ್ವಾಮಿ ಮನೆಯಲ್ಲಿ ಅವರ ಪುತ್ರ ಇರುತ್ತಾರೆ ಹೆಚ್​. ಡಿ ಕುಮಾರಸ್ವಾಮಿ ಅಣ್ಣ ಸಚಿವರು ಆಗಿದ್ದರು, ಅವರ ತಂದೆ ಪಿಎಂ ಆಗಿದ್ದವರು. ಅಣ್ಣ, ಮಕ್ಕಳು ಶಾಸಕರು ಆಗಿದ್ದರು, ಏನಂತ ಕರೆಯಬೇಕು. ನಾನು ಇದಕ್ಕೆಲ್ಲಾ ಅಧಿವೇಶನದಲ್ಲೇ ಉತ್ತರ ಕೊಡುತ್ತೇನೆ ಎಂದು ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ಮಾಡಿದರು.

ಬಸ್ ಚಾಲಕ ಜಗದೀಶ್ ಆತ್ಮಹತ್ಯೆಗೆ ಯತ್ನ ಕುರಿತು ವರದಿ ಕೇಳುತ್ತೇನೆ: ರಾಜಕೀಯ ದ್ವೇಷದಿಂದ ವರ್ಗಾವಣೆ ಮಾಡಿದ್ದಾರೆ ಎಂದು ಸಚಿವ ಎನ್. ಚಲುವರಾಯಸ್ವಾಮಿ ವಿರುದ್ಧ ಆರೋಪ ಮಾಡಿ ಕೆಎಎಸ್​ಆರ್​​ಟಿಸಿ ಬಸ್ ಚಾಲಕ ಜಗದೀಶ್ ಎಂಬವರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬಗ್ಗೆ ಮಾಧ್ಯಮ ಪ್ರತಿನಿಧಿಗಳು ಕೇಳಿದಾಗ ಪ್ರತಿಕ್ರಿಯಿಸಿದ ಸಿಎಂ, ಈ ವಿಚಾರದ ಬಗ್ಗೆ ವಿವರ ಗೊತ್ತಿಲ್ಲ, ತಿಳಿದುಕೊಂಡು ಹೇಳುತ್ತೇನೆ ಎಂದರು.

ಜಗದೀಶ್ ಅವರ ಪತ್ನಿ ಪಂಚಾಯತ್ ಸದಸ್ಯೆ, ಇದರಲ್ಲಿ ರಾಜಕೀಯ ಇರಬಹುದು ಎಂದು ನನಗೆ ಅನಿಸುತ್ತದೆ, ಅವರನ್ನು ವರ್ಗಾವಣೆ ಮಾಡಿದ್ದಕ್ಕೆ ಆತ್ಮಹತ್ಯೆಗೆ ಯತ್ನಿಸಿದ್ದು, ವರ್ಗಾವಣೆಗೆ ಆತ್ಮಹತ್ಯೆ ಯತ್ನಕ್ಕೆ ಸಚಿವ ಚಲುವರಾಯಸ್ವಾಮಿ ಕಾರಣ ಎಂದು ಕುಮಾರಸ್ವಾಮಿಯವರು ಆರೋಪ ಮಾಡುತ್ತಿದ್ದಾರೆ. ಅವರ ಆರೋಪದಲ್ಲಿ ಹುರುಳಿದೆ ಎಂದು ನನಗನಿಸುವುದಿಲ್ಲ. ಈ ಬಗ್ಗೆ ವರದಿ ತರಿಸಿಕೊಳ್ಳುತ್ತೇನೆ ಎಂದರು.

ಮೈಸೂರಿನಲ್ಲಿ  ಮಾತನಾಡಿದ ಮಾಜಿ ಸಿಎಂ ಕುಮಾರಸ್ವಾಮಿ, ಸೂಕ್ತ ಸಮಯದಲ್ಲಿ ಪೆನ್ ಡ್ರೈವ್ ನಲ್ಲಿರುವ ದಾಖಲೆ ಬಿಡುಗಡೆ ಮಾಡುತ್ತೇನೆ. ಈ ಸರ್ಕಾರ ಏನು ಮಾತನಾಡುತ್ತದೆಯೋ ಎಲ್ಲವನ್ನು ಮಾತನಾಡಲಿ. ನನ್ನನ್ನು ಹಿಟ್ ಅಂಡ್ ರನ್ ಎಂದು ಹೇಳಿಕೊಳ್ಳಲಿ. ನನಗೆ ಪೆನ್ ಡ್ರೈವ್ ಬಿಡುಗಡೆ ಮಾಡುವ ಅವಸರವಿಲ್ಲ, ಸಮಯ ಬಂದಾಗ ಪೆನ್ ಡ್ರೈವ್ ಬಿಡುಗಡೆ ಮಾಡುತ್ತೇನೆ. ಪೆನ್ ಡ್ರೈವ್ ಮಾಹಿತಿ ಹೊರಗೆ ಬಂದರೆ ಮಂತ್ರಿ ರಾಜೀನಾಮೆ ನೀಡಬೇಕಾಗುತ್ತದೆ ಎಂದು ವರ್ಗಾವಣೆ ದಂಧೆ ಬಗ್ಗೆ ಹೊಸ ಬಾಂಬ್ ಸಿಡಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಯುಕ್ರೇನ್-ರಷ್ಯಾ ಶಾಂತಿ ಒಪ್ಪಂದ ಸನಿಹ: ಸುಳಿವು ನೀಡಿದ ಯುಕ್ರೇನ್

2026 T20 ವಿಶ್ವಕಪ್: ಕೊಲಂಬೋದಲ್ಲಿ ಫೆ.15 ರಂದು ಭಾರತ- ಪಾಕ್ ಪಂದ್ಯ

ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು: ಸಿಎಂ, ಡಿಸಿಎಂ ಸಂತಾಪ

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ರಾಸಾಯನಿಕಗಳು, ಎಲೆಕ್ಟ್ರಾನಿಕ್ ಘಟಕಗಳ ಸುಲಭ ಲಭ್ಯತೆಯಿಂದ ಐಇಡಿ ಅಪಾಯ ಹೆಚ್ಚು: NSG

SCROLL FOR NEXT