ಸಂಗ್ರಹ ಚಿತ್ರ 
ರಾಜ್ಯ

ಮುಂಗಾರು ಮಳೆ ವಿಳಂಬ; ರಾಜ್ಯದಲ್ಲಿ ಶೇ.38ರಷ್ಟು ಮಳೆ ಕೊರತೆ

ಮುಂಗಾರು ಪ್ರವೇಶ ವಿಳಂಬವಾದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಶೇ.38ರಷ್ಟು ಮಳೆ ಕೊರತೆಯಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಬೆಂಗಳೂರು: ಮುಂಗಾರು ಪ್ರವೇಶ ವಿಳಂಬವಾದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಶೇ.38ರಷ್ಟು ಮಳೆ ಕೊರತೆಯಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ರಾಜ್ಯದಲ್ಲಿ ಕೆಲವು ಕಡೆ ಕಡಿಮೆ ಮಳೆಯಾಗಿದ್ದರೆ, ಮತ್ತೆ ಕೆಲವು ಕಡೆ ವರುಣನ ಸುಳಿವೇ ಇಲ್ಲದಂತಾಗಿದೆ. ಹೀಗಾಗಿ ಅನೇಕ ಡ್ಯಾಂಗಳು ಬರಿದಾಗಿದ್ದು ರಾಜ್ಯಕ್ಕೆ ನೀರಿನ ಕೊರತೆ ಸೃಷ್ಟಿಯಾಗಿದೆ ಎಂದು ವರದಿಗಳು ತಿಳಿವೆ.

ಕೆಆರ್‌ಎಸ್, ಕಬಿನಿ ಮತ್ತು ಹಾರಂಗಿ ಅಣೆಕಟ್ಟುಗಳನ್ನು ತುಂಬಲು ಪ್ರಮುಖ ಮೂಲಗಳಾಗಿರುವ ಕೊಡಗು ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾರಿ ಮಳೆ ಕೊರತೆಯುಂಟಾಗಿದದೆ ಎಂದು ತಿಳಿದುಬಂದಿದೆ.

ಈ ನಡುವೆ ಮುಂದಿನ 5 ದಿನಗಳವರೆಗೆ ಮಳೆಯಾಗಲಿದೆ ಎಂದು ಅಧಿಕಾರಿಗಳು ಮುನ್ಸೂಚನೆ ನೀಡಿದ್ದು, ಕೆಲವು ಜಿಲ್ಲೆಗಳಲ್ಲಿ ರೆಡ್ ಹಾಗೂ ಆರೆಂಜ್ ಅಲರ್ಟ್ ಗಳನ್ನು ಘೋಷಣೆ ಮಾಡಲಾಗಿದೆ.

ಈ ಬಾರಿ ಕೊಡಗಿನಲ್ಲಿ ಶೇ.78ರಷ್ಟು ಮಳೆ ಕೊರತೆ ಕಂಡುಬಂದರೆ, ಚಿಕ್ಕಮಗಳೂರಿನಲ್ಲಿ ಶೇ.60ರಷ್ಟು ಮಳೆ ಕೊರತೆಯಾಗಿದೆ. ಅದೇ ರೀತಿ ಲಿಂಗನಮಕ್ಕಿಯ ಪ್ರಮುಖ ನೀರಿನ ಮೂಲಗಳಲ್ಲೊಂದಾದ ಶಿವಮೊಗ್ಗದಲ್ಲಿ ಶೇ.66, ಕರಾವಳಿ ಕರ್ನಾಟಕದಲ್ಲಿ ಶೇ.31, ಉತ್ತರ ಒಳನಾಡಿನಲ್ಲಿ ಶೇ.38 ಹಾಗೂ ದಕ್ಷಿಣ ಒಳನಾಡಿನಲ್ಲಿ ಶೇ.46ರಷ್ಟು ಮಳೆ ಕೊರತೆಯಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಜೂನ್ 1 ರಿಂದ ಬೀದರ್, ಕೊಪ್ಪಳ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ದಾವಣಗೆರೆ, ಕೋಲಾರ, ಮಂಡ್ಯ ಮತ್ತು ಮೈಸೂರು ಮುಂತಾದ ಒಂಬತ್ತು ಜಿಲ್ಲೆಗಳಲ್ಲಿ ಮಾತ್ರ ಸಾಮಾನ್ಯ ಮಳೆಯಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಸಿದ್ದರಾಮಯ್ಯ ಬ್ರೇಕ್ ಫಾಸ್ಟ್ ಮೀಟಿಂಗ್; ದಿಢೀರ್ ಮುಂಬೈಗೆ ತೆರಳಿದ ರಾಜ್ಯಪಾಲ ಗೆಹ್ಲೋಟ್, ಇಂದು ರಾಜೀನಾಮೆ ಅನುಮಾನ..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

ಸಿಎಂ ಕುರ್ಚಿ ಕದನ: ಸಿದ್ದರಾಮಯ್ಯ ಮನೆ ಮುಂದೆ ಬೆಂಬಲಿಗರ ಶಕ್ತಿ ಪ್ರದರ್ಶನ, ರಾಜೀನಾಮೆ ನೀಡದಂತೆ ಆಗ್ರಹ..!

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

SCROLL FOR NEXT