ಕೆಜೆ ಜಾರ್ಜ್ 
ರಾಜ್ಯ

ವಿದ್ಯುತ್‌ ಸ್ಪರ್ಶದಿಂದ ಲೈನ್ ಮನ್ ಸಾವು ಪ್ರಕರಣ, ತನಿಖೆ ವರದಿ ನಂತರ ಸೂಕ್ತ ಕ್ರಮ: ಇಂಧನ ಸಚಿವ ಕೆ.ಜೆ.ಜಾರ್ಜ್‌

ಫಜಲಪುರ ತಾಲೂಕಿನ ಚೌಡಾಪುರ ಉಪವಿಭಾಗದಲ್ಲಿ ವಿದ್ಯುತ್‌ ಸ್ಪರ್ಶದಿಂದ ಲೈನ್ ಮನ್ ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಶಾಖಾಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ ಮತ್ತು ತನಿಖೆಗೆ ಆದೇಶಿಸಲಾಗಿದ್ದು,ತನಿಖಾ ವರದಿ ಬಂದ ನಂತರ ಸೂಕ್ತ ಕ್ರಮಕೈಗೊಳ್ಳಲಾಗುವುದು ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್‌ ವಿಧಾನಸಭೆಯಲ್ಲಿಂದು ತಿಳಿಸಿದರು. 

ಬೆಂಗಳೂರು: ಅಫಜಲಪುರ ತಾಲೂಕಿನ ಚೌಡಾಪುರ ಉಪವಿಭಾಗದಲ್ಲಿ ವಿದ್ಯುತ್‌ ಸ್ಪರ್ಶದಿಂದ ಲೈನ್ ಮನ್ ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಶಾಖಾಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ ಮತ್ತು ತನಿಖೆಗೆ ಆದೇಶಿಸಲಾಗಿದ್ದು,ತನಿಖಾ ವರದಿ ಬಂದ ನಂತರ ಸೂಕ್ತ ಕ್ರಮಕೈಗೊಳ್ಳಲಾಗುವುದು ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್‌ ವಿಧಾನಸಭೆಯಲ್ಲಿಂದು ತಿಳಿಸಿದರು. 

ಅಫಜಲಪುರ ಶಾಸಕ ಎಂ.ವೈ.ಪಾಟೀಲ್‌ ಅವರು ಶೂನ್ಯವೇಳೆಯಲ್ಲಿ ಪ್ರಸ್ತಾಪಿಸಿದ ವಿಷಯಕ್ಕೆ ಉತ್ತರಿಸಿದ ಸಚಿವರು, ಇದು ಅತ್ಯಂತ ದುರಂತ ಘಟನೆ. ಈಗಾಗಲೇ ಶಾಖಾಧಿಕಾರಿಗಳನ್ನು ಅಮಾನತುಗೊಳಿಸಿ ತನಿಖೆಗೆ ಆದೇಶಿಸಲಾಗಿದೆ. ತನಿಖಾ ವರದಿ ಅನುಸಾರ ಕ್ರಮಕೈಗೊಳ್ಳಲಾಗುವುದು. ಮೃತ ಮಾರ್ಗದಾಳು ಕುಟುಂಬಕ್ಕೆ 05ಲಕ್ಷ ರೂ.ಗಳ ಪರಿಹಾರ,ಅನುಕಂಪ ನೌಕರಿ,ವಿಮಾ ಸೇರಿ ಇನ್ನೀತರ ಸರಕಾರಿ ಸೌಲಭ್ಯಗಳನ್ನು ಕಲ್ಪಿಸಲಾಗುತ್ತದೆ ಎಂದರು. 

ಚೌಡಾಪುರ ಉಪವಿಭಾಗದಲ್ಲಿ ಲೈನ್ ಮನ್ ಶಾಖಾಧಿಕಾರಿಗಳ ಅನುಮತಿ ಪಡೆದುಕೊಂಡೇ ವಿದ್ಯುತ್‌ ಪರಿವರ್ತಕದ ದುರಸ್ತಿಗೆ ತೆರಳಿದ್ದರು. ಕಂಬ ಏರಿದಾಗ ವಿದ್ಯುತ್‌ ಸ್ಪರ್ಶಿಸಿ ಮಾರ್ಗದಾಳು ಸಾವನ್ನಪ್ಪಿದ್ದಾರೆ ಹೊರತು ಕಂಬದಿಂದ ಆಯಾತಪ್ಪಿ ಕೆಳಬಿದ್ದಿಲ್ಲ.ಇದು ಸಂಪೂರ್ಣ ಹೊಣೆ ಇಂಧನ ಇಲಾಖೆಯದ್ದಾಗಿದ್ದು,ಸದರಿ ಮೃತ ಮಾರ್ಗದಾಳು ಕುಟುಂಬಕ್ಕೆ 05ಲಕ್ಷ ಪರಿಹಾರದ ಬದಲಿಗೆ 50ಲಕ್ಷ ರೂ.ಗಳ ಪರಿಹಾರ ನೀಡಬೇಕು ಎಂದು ಅಫಜಲಪುರ ಶಾಸಕ ಎಂ.ವೈ.ಪಾಟೀಲ್‌ ಅವರು ಒತ್ತಾಯಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT