ಯುಟಿ ಖಾದರ್. 
ರಾಜ್ಯ

ಕಲಾಪದ ಎಲ್ಲಾ ದಿನಗಳು ನಿಗದಿತ ಸಮಯಕ್ಕೆ ಸದನಕ್ಕೆ ಬಂದವರಿಗೆ ಬಹುಮಾನ: ಸ್ಪೀಕರ್ ಯುಟಿ ಖಾದರ್

ಕಲಾಪದ ಎಲ್ಲಾ ದಿನಗಳಲ್ಲೂ ನಿಗದಿತ ಸಮಯಕ್ಕೆ ಬರುವ ಶಾಸಕರಿಗೆ ಬಹುಮಾನ ನೀಡಲಾಗುವುದು ಎಂದು ವಿಧಾನಸಭಾಧ್ಯಕ್ಷ ಯು.ಟಿ.ಖಾದರ್‌ ಅವರು ಬುಧವಾರ ಹೇಳಿದರು.

ಬೆಂಗಳೂರು: ಕಲಾಪದ ಎಲ್ಲಾ ದಿನಗಳಲ್ಲೂ ನಿಗದಿತ ಸಮಯಕ್ಕೆ ಬರುವ ಶಾಸಕರಿಗೆ ಬಹುಮಾನ ನೀಡಲಾಗುವುದು ಎಂದು ವಿಧಾನಸಭಾಧ್ಯಕ್ಷ ಯು.ಟಿ.ಖಾದರ್‌ ಅವರು ಬುಧವಾರ ಹೇಳಿದರು.

ನಿಗದಿತ ಸಮಯಕ್ಕೆ ಸದನಕ್ಕೆ ಆಗಮಿಸಿದ್ದ ಶಾಸಕರಾದ ದರ್ಶನ್ ಪುಟ್ಟಣ್ಣಯ್ಯ, ಕೌಜಲಗಿ ಮಹಾಂತೇಶ್, ಎಸ್ ಸುರೇಶ್ ಕುಮಾರ್, ಪ್ರದೀಪ್ ಈಶ್ವರ್, ಎಸ್ ಆರ್ ಶ್ರೀನಿವಾಸ್, ಲತಾ ಮಲ್ಲಿಕಾರ್ಜುನ, ಶಿವಲಿಂಗೇಗೌಡ ಸೇರಿದಂತೆ ಇತರ ಶಾಸಕರ ಹೆಸರು ಓದಿದ ಸ್ಪೀಕರ್ ಶಾಸಕರ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಈ ವೇಳೆ ಕಲಾಪದ ಎಲ್ಲಾ ದಿನಗಳು ನಿಗದಿತ ಸಮಯಕ್ಕೆ ಸದನಕ್ಕೆ ಬಂದವರಿಗೆ ಬಹುಮಾನ ನೀಡಲಾಗುವುದು ಎಂದು ಸ್ಪೀಕರ್ ಹೇಳಿದರು.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರೊಬ್ಬರು, ನಿಗದಿತ ಸಮಯಕ್ಕೆ ಸದನಕ್ಕೆ ಆಗಮಿಸಿದ ಶಾಸಕರಿಗೆ ಬಹುಮಾನ ಕೊಟ್ಟರೆ ತಪ್ಪು ಸಂದೇಶ ಹೋಗುತ್ತದೆ. ಬಹುಮಾನ ಘೋಷಣೆ ಬದಲಾಗಿ ಸರ್ಟಿಫಿಕೇಟ್ ಕೊಡಲು ಮನವಿ ಮಾಡಿದರು. ಇದಕ್ಕೆ ಸ್ಪೀಕರ್ ಸಮ್ಮತಿ ಸೂಚಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT