ವಿಭೂತಿಪುರ ಕೆರೆ ಸ್ವಚ್ಥತಾ ಕಾರ್ಯ 
ರಾಜ್ಯ

ಬೆಂಗಳೂರು: ವಿಭೂತಿಪುರ ಕೆರೆ ಸ್ವಚ್ಛಗೊಳಿಸಿದ ಸ್ವಯಂಸೇವಕರು; 5 ದಿನಗಳ ನಂತರ ಕಸ ಸುರಿದ ಯುವಕರು!

ವಿಭೂತಿಪುರ ಕೆರೆ ಕ್ಷೇಮಾಭಿವೃದ್ಧಿ ಸಂಘದ ಸ್ವಯಂಸೇವಕರು ಹಾಗೂ ಸಮೀಪದ ಬಡಾವಣೆಗಳ ನಾಗರಿಕರು ವಿಭೂತಿಪುರ ಕೆರೆಯ ಸುತ್ತಮುತ್ತ ಸ್ವಚ್ಛಗೊಳಿಸಿ ಸಸಿಗಳನ್ನು ನೆಟ್ಟು ಐದು ದಿನಗಳ ನಂತರ ಇಬ್ಬರು ಯುವಕರು ಪ್ಲಾಸ್ಟಿಕ್ ತ್ಯಾಜ್ಯವನ್ನು ಕೆರೆಗೆ ಸುರಿಯುತ್ತಿದ್ದಾಗ ಸಿಕ್ಕಿಬಿದ್ದಿದ್ದಾರೆ.

ಬೆಂಗಳೂರು: ವಿಭೂತಿಪುರ ಕೆರೆ ಕ್ಷೇಮಾಭಿವೃದ್ಧಿ ಸಂಘದ ಸ್ವಯಂಸೇವಕರು ಹಾಗೂ ಸಮೀಪದ ಬಡಾವಣೆಗಳ ನಾಗರಿಕರು ವಿಭೂತಿಪುರ ಕೆರೆಯ ಸುತ್ತಮುತ್ತ ಸ್ವಚ್ಛಗೊಳಿಸಿ ಸಸಿಗಳನ್ನು ನೆಟ್ಟು ಐದು ದಿನಗಳ ನಂತರ ಇಬ್ಬರು ಯುವಕರು ಪ್ಲಾಸ್ಟಿಕ್ ತ್ಯಾಜ್ಯವನ್ನು ಕೆರೆಗೆ ಸುರಿಯುತ್ತಿದ್ದಾಗ ಸಿಕ್ಕಿಬಿದ್ದಿದ್ದಾರೆ.

ಸಿಕ್ಕಿಬಿದ್ದ ನಂತರ  ತಮ್ಮ ಕೃತ್ಯವನ್ನು ಸಮರ್ಥಿಸಿಕೊಳ್ಳಲು ಯತ್ನಿಸಿದ್ದಾರೆ, ಅದು ಕೇವಲ ಪೂಜಾ ಸಾಮಗ್ರಿಗಳು ಎಂದು ಹೇಳಿ ತಪ್ಪಿಸಿಕೊಳ್ಳಲು ಯತ್ನಿಸಿದ್ದಾರೆ. ಈ ವಿಷಯವನ್ನು ಸ್ವಯಂಸೇವಕರು ಕೂಡಲೇ ಬಿಬಿಎಂಪಿ ಮುಖ್ಯ ಇಂಜಿನಿಯರ್ (ಕೆರೆ) ವಿಜಯಕುಮಾರ್ ಹರಿದಾಸ್ ಅವರ ಗಮನಕ್ಕೆ ತಂದರು, ಅವರು ಸಮಸ್ಯೆಯನ್ನು ಪರಿಶೀಲಿಸಲು ಸಂಬಂಧಿಸಿದ ಎಂಜಿನಿಯರ್ ಗಳಿಗೆ ಸೂಚಿಸುವುದಾಗಿ ತಿಳಿಸಿದ್ದಾರೆ. ಈ ಸಂಬಂಧ  ಯುವಕರ ವಿರುದ್ಧ ಎಫ್‌ಐಆರ್ ದಾಖಲಿಸಲಾಗುವುದು ಎಂದು ಹರಿದಾಸ್ ತಿಳಿಸಿದ್ದಾರೆ.

ಸ್ವಯಂಸೇವಕರು ಮತ್ತು ಯುವಕರ ನಡುವಿನ ಘರ್ಷಣೆಯ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಕೆರೆಗಳಿಗೆ ತ್ಯಾಜ್ಯ ಸುರಿಯುವುದು ಉಲ್ಲಂಘನೆಯಾಗಿದೆ. ನಾವು ಈ ಬಗ್ಗೆ ಜಾಗೃತಿ ಕಾರ್ಯಕ್ರಮಗಳನ್ನು ನಡೆಸಿದ್ದೇವೆ ಮತ್ತು ಕೆರೆಯ ಆವರಣದಲ್ಲಿ ಮಾಡಬೇಕಾದ ಮತ್ತು ಮಾಡಬಾರದ ಬಗ್ಗೆ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘಗಳನ್ನು ಸಹ ಮಾಡಿದ್ದೇವೆ.

ಘಟನೆಯ ಬಗ್ಗೆ ಎಫ್‌ಐಆರ್ ದಾಖಲಿಸಲು ನಾವು ಪ್ರಯತ್ನಿಸುತ್ತೇವೆ ಎಂದು ಹರಿದಾಸ್ ಹೇಳಿದರು. ನಗರದಾದ್ಯಂತ ಎಲ್ಲಾ ಕೆರೆಗಳಲ್ಲಿ ಹೆಚ್ಚುವರಿಯಾಗಿ ಗೃಹರಕ್ಷಕ ದಳದಂತಹ ಭದ್ರತಾ ಸಿಬ್ಬಂದಿ ನಿಯೋಜಿಸಲಾಗುವುದು ಎಂದು ಹರಿದಾಸ್ ತಿಳಿಸಿದ್ದಾರೆ.

ಕೆರೆಗೆ ಕಾಯಕಲ್ಪ ನೀಡುವ ಕಾರ್ಯದಲ್ಲಿ ತೊಡಗಿದ್ದ ತಲಕಾವೇರಿ ಲೇಔಟ್ ನಿವಾಸಿ ಬಿ.ಪಿ.ಎ.ಸಿ ಸದಸ್ಯೆ ಸತ್ಯವಾಣಿ ಶ್ರೀಧರ್, ಜನರು ಕಸ ಸುರಿಯುತ್ತಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಹಲವು ಹೋರಾಟದ ನಂತರ ಕೆರೆಗೆ ಜೀವ ಬಂದಿದೆ.

ಕಳೆದ ಶನಿವಾರ ಮತ್ತು ಭಾನುವಾರ ವೀರಭದ್ರನಗರ, ಬೃಂದಾವನ ಲೇಔಟ್ ಮತ್ತು ಸಮೀಪದ ಅಪಾರ್ಟ್‌ಮೆಂಟ್‌ಗಳ ನಿವಾಸಿಗಳು ಕೆರೆ ಪ್ರದೇಶವನ್ನು ಸ್ವಚ್ಛಗೊಳಿಸಿ ಸಸಿಗಳನ್ನು ನೆಟ್ಟರು.  ಬಿಬಿಎಂಪಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಿ ಕೆರೆಗೆ ಬೇಲಿ ಹಾಕಬೇಕು ಎಂದು ಅವರು ಒತ್ತಾಯಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

ಪಕ್ಷದ ಮೇಲೆ ನನಗೆ ನಂಬಿಕೆ ಇದೆ: ದುಡ್ಡು- ಬ್ಲಡ್ ನಿರಂತರ ಚಲನೆಯಲ್ಲಿ ಇರಬೇಕು; ಅಕ್ಕಪಕ್ಕದಲ್ಲಿ ಇರುವವರೇ ಮೋಸ ಮಾಡುತ್ತಾರೆ, ಎಚ್ಚರ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT