ಎಎಸ್‌ಐಗೆ ಪುರಾತನ ವಸ್ತುಗಳನ್ನು ಹಸ್ತಾಂತರಿಸಿದ ಕಸ್ಟಮ್ಸ್ ಇಲಾಖೆ 
ರಾಜ್ಯ

ಪ್ರಾಚೀನ ವಸ್ತುಗಳನ್ನು ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಗೆ ಹಸ್ತಾಂತರಿಸಿದ ಕಸ್ಟಮ್ಸ್ ಇಲಾಖೆ

ಬೆಂಗಳೂರು ಕಸ್ಟಮ್ಸ್ ಇಲಾಖೆಯು ವಶಪಡಿಸಿಕೊಂಡ ಮತ್ತು ಜಪ್ತಿ ಮಾಡಿದ ಕಲಾಕೃತಿಗಳನ್ನು ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಗೆ (ಎಎಸ್ಐ) ಗುರುವಾರ ಹಸ್ತಾಂತರಿಸಿದೆ.

ಬೆಂಗಳೂರು: ಬೆಂಗಳೂರು ಕಸ್ಟಮ್ಸ್ ಇಲಾಖೆಯು ವಶಪಡಿಸಿಕೊಂಡ ಮತ್ತು ಜಪ್ತಿ ಮಾಡಿದ ಕಲಾಕೃತಿಗಳನ್ನು ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಗೆ (ಎಎಸ್ಐ) ಗುರುವಾರ ಹಸ್ತಾಂತರಿಸಿದೆ.

ಬೆಂಗಳೂರಿನ ಕಸ್ಟಮ್ಸ್ ಮುಖ್ಯ ಆಯುಕ್ತರಾದ ವಿ. ಉಷಾ ಅವರು ವಶಪಡಿಸಿಕೊಂಡ ಮತ್ತು ಜಪ್ತಿ ಮಾಡಿದ ಪುರಾತನ ವಸ್ತುಗಳನ್ನು ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯ ಸೂಪರಿಂಟೆಂಡಿಂಗ್ ಆರ್ಕಿಯಾಲಜಿಸ್ಟ್ ಬಿಪಿನ್ ಚಂದ್ರ ಅವರಿಗೆ ಹಸ್ತಾಂತರಿಸಿದ್ದಾರೆ ಕಸ್ಟಮ್ಸ್ ಹೇಳಿಕೆಯಲ್ಲಿ ತಿಳಿಸಿದೆ. 

ಈ ವಸ್ತುಗಳನ್ನು ಬೆಂಗಳೂರಿನ ಇನ್‌ಲ್ಯಾಂಡ್ ಕಂಟೈನರ್ ಡಿಪೋ (ಐಸಿಡಿ) ಅಧಿಕಾರಿಗಳು ಯುರೋಪ್‌ಗೆ ಹೋಗುವ ಕಂಟೈನರ್‌ನಲ್ಲಿದ್ದ ವಸ್ತುಗಳಿಂದ ವಶಪಡಿಸಿಕೊಂಡಿದ್ದಾರೆ. ವಿದೇಶಿ ಪ್ರಜೆಯೊಬ್ಬರು ತಮ್ಮ ತಾಯ್ನಾಡಿಗೆ ಹಿಂದಿರುಗುವ ಮೂಲಕ ರಫ್ತು ಮಾಡಲಾಗುತ್ತಿದ್ದ ಗೃಹೋಪಯೋಗಿ ವಸ್ತುಗಳನ್ನು ತುಂಬಿದ ಕಂಟೈನರ್‌ನಲ್ಲಿ ಈ ಅಮೂಲ್ಯ ವಸ್ತುಗಳು ಪತ್ತೆಯಾಗಿದ್ದವು.

ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯ ಅಧಿಕಾರಿಗಳಿಗೆ ಪುರಾತನ ವಸ್ತುಗಳನ್ನು ಹಸ್ತಾಂತರಿಸುವ ಸಂದರ್ಭದಲ್ಲಿ ಸಿಜಿಎಸ್‌ಟಿ ಮುಖ್ಯ ಆಯುಕ್ತ ಸಂಜಯ್ ಪಂತ್ ಮತ್ತು ಕಸ್ಟಮ್ಸ್ ವಿಶಾಖಪಟ್ಟಣಂ ವಲಯದ ಆಯುಕ್ತ ಅಮಿತೇಶ್, ಬೆಂಗಳೂರು ವಲಯದ ಹೆಚ್ಚುವರಿ ಆಯುಕ್ತರಾದ ಬಿ. ಕೊಂತೌಜಮ್ ಸೇರಿದಂತೆ ಜಿಲ್ಲಾಧಿಕಾರಿ ವಿನುತಾ ಮತ್ತು ಸಹಾಯಕ ಅಧೀಕ್ಷಕ ಪುರಾತತ್ವಶಾಸ್ತ್ರಜ್ಞ ಶ್ರೀಗುರು ಸಹ ಉಪಸ್ಥಿತರಿದ್ದರು.

ಎಎಸ್ಐಗೆ  ಹಸ್ತಾಂತರಿಸಲಾದ ಪುರಾತನ ವಸ್ತುಗಳಲ್ಲಿ ಫೇಸ್ ಮಾಸ್ಕ್, ಭೂತ (ರಾಕ್ಷಸ) ರೂಪದಲ್ಲಿ ಶಿವನನ್ನು ಪ್ರತಿನಿಧಿಸುವ ಲೋಹದ ಮುಖವಾಡವನ್ನು ಒಳಗೊಂಡಿವೆ. ಇದು ಬಹುಶಃ ತುಳುನಾಡು (ಕರಾವಳಿ ಕರ್ನಾಟಕ) ಕರ್ನಾಟಕಕ್ಕೆ ಸೇರಿದವುಗಳಾಗಿವೆ. 

ಮತ್ತೊಂದು ಪುರಾತನ ವಸ್ತುವೆಂದರೆ, ವುಡನ್ ಹಾರ್ಸ್ ರೈಡರ್ (ಮರದ ರಥ) ಆಗಿದೆ. ಇದನ್ನು ಸಾಂಪ್ರದಾಯಿಕವಾಗಿ ದಕ್ಷಿಣ ಭಾರತದ ದೇವಾಲಯಗಳಲ್ಲಿ, ವಿಶೇಷವಾಗಿ ಕೇರಳದಲ್ಲಿ ಬಳಸಲಾಗುತ್ತದೆ. ಅಲ್ಲದೆ, ಎರಡು ಮರದ ಗೊಂಬೆಗಳು (ಆಟಿಕೆಗಳು), ಲೋಹದ ಬುದ್ಧನ ಚಿತ್ರವನ್ನು ಒಳಗೊಂಡಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜೀನಾಮೆ ಬಗ್ಗೆ ಖುದ್ದು ಸುಳಿವು ನೀಡಿದ CM ಸಿದ್ದರಾಮಯ್ಯ; ಸಾಮಾಜಿಕ ಮಾಧ್ಯಮದಲ್ಲಿ ಮಹತ್ವದ ಪೋಸ್ಟ್​!

ಹೈಕಮಾಂಡ್ ಅದೇಶ ಪಾಲನೆ: ಗುರುವಾರ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ; Video

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

ಸಿಎಂ ಸಿದ್ದರಾಮಯ್ಯ ಪದತ್ಯಾಗ; ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮಹತ್ವದ ಸಭೆ

Mysuru Rain: ಸಿಡಿಲು ಬಡಿದು ಬೆಂಗಳೂರಿನ ಟೆಕ್ಕಿ ಸಾವು

SCROLL FOR NEXT