ಹೈಕೋರ್ಟ್ 
ರಾಜ್ಯ

ಶಿಕ್ಷಕರ ಕ್ಷೇತ್ರಕ್ಕೆ ಚುನಾವಣೆ ನಡೆಸಿ: ಚುನಾವಣಾ ಆಯೋಗಕ್ಕೆ ಹೈಕೋರ್ಟ್ ಆದೇಶ

ಬೆಂಗಳೂರು ಶಿಕ್ಷಕರ ಕ್ಷೇತ್ರವು ತನ್ನ ವ್ಯಾಪ್ತಿಗೆ ಒಳಪಡುವ ಸುಮಾರು 8,000 ಶಾಲೆಗಳನ್ನು ಮತ್ತು ಒಂದು ಲಕ್ಷಕ್ಕೂ ಹೆಚ್ಚು ಶಿಕ್ಷಕರನ್ನು ಹೊಂದಿದೆ. ಕಳೆದ ಮೂರು ತಿಂಗಳಿನಿಂದ ಖಾಲಿ ಇರುವ ಸ್ಥಾನಕ್ಕೆ ವಿಧಾನ ಪರಿಷತ್ತಿನಲ್ಲಿ ಧ್ವನಿ ಎತ್ತುವವರಿಲ್ಲ ಎನ್ನುವಂತಾಗಿದೆ. 

ಬೆಂಗಳೂರು: ವಿಧಾನಸಭಾ ಚುನಾವಣೆಯ ನಂತರ ನೂತನ ಸರ್ಕಾರದಲ್ಲಿ ಬೆಂಗಳೂರು ಶಿಕ್ಷಕರ ಕ್ಷೇತ್ರಕ್ಕೆ ಯಾವುದೇ ಪ್ರತಿನಿಧಿ ಇಲ್ಲ. ಕರ್ನಾಟಕ ಅಸೋಸಿಯೇಟೆಡ್ ಮ್ಯಾನೇಜ್‌ಮೆಂಟ್ ಆಫ್ ಸ್ಕೂಲ್ಸ್ (KAMS) ಮತ್ತು ಕರ್ನಾಟಕ ಖಾಸಗಿ ಶಾಲೆಗಳ ಆಡಳಿತಗಳು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಸಮನ್ವಯ ಸಮಿತಿ (KPMTCC) ಮಧ್ಯಪ್ರವೇಶಿಸುವಂತೆ ಕರ್ನಾಟಕ ಹೈಕೋರ್ಟ್‌ನಲ್ಲಿ ರಿಟ್ ಅರ್ಜಿಯನ್ನು ಸಲ್ಲಿಸಿದ್ದು, ನ್ಯಾಯಾಲಯವು ಭಾರತೀಯ ಚುನಾವಣಾ ಆಯೋಗವನ್ನು ಶಿಕ್ಷಕರ ಕ್ಷೇತ್ರಕ್ಕೆ ಚುನಾವಣೆ ನಡೆಸಲು ಕೇಳಿದೆ. 

ಈ ಹಿಂದೆ ಪುಟ್ಟಣ್ಣ ಅವರು 2021ರಿಂದ 2027ರವರೆಗೆ ಆರು ವರ್ಷಗಳ ಕಾಲ ಎಂಎಲ್‌ಸಿ ಆಗಿ ಆಯ್ಕೆಯಾಗಿದ್ದರು. 2023ರ ಮಾರ್ಚ್‌ನಲ್ಲಿ ಆ ಸ್ಥಾನಕ್ಕೆ ರಾಜೀನಾಮೆ ನೀಡಿ ಕಾಂಗ್ರೆಸ್‌ಗೆ ಸೇರ್ಪಡೆಯಾಗಿದ್ದರು. ಸರ್ಕಾರ ತಮ್ಮ ಸಮಸ್ಯೆಗಳನ್ನು ಆಲಿಸುತ್ತಿಲ್ಲ ಎಂದು ಕಾರ್ಯಕರ್ತರು ಆರೋಪಿಸುತ್ತಿದ್ದಾರೆ. 

ಬೆಂಗಳೂರು ಶಿಕ್ಷಕರ ಕ್ಷೇತ್ರವು ತನ್ನ ವ್ಯಾಪ್ತಿಗೆ ಒಳಪಡುವ ಸುಮಾರು 8,000 ಶಾಲೆಗಳನ್ನು ಮತ್ತು ಒಂದು ಲಕ್ಷಕ್ಕೂ ಹೆಚ್ಚು ಶಿಕ್ಷಕರನ್ನು ಹೊಂದಿದೆ. ಕಳೆದ ಮೂರು ತಿಂಗಳಿನಿಂದ ಖಾಲಿ ಇರುವ ಸ್ಥಾನಕ್ಕೆ ವಿಧಾನ ಪರಿಷತ್ತಿನಲ್ಲಿ ಧ್ವನಿ ಎತ್ತುವವರಿಲ್ಲ ಎನ್ನುವಂತಾಗಿದೆ. 

ಕಾನೂನಿನ ಪ್ರಕಾರ, ಚುನಾವಣಾ ಆಯೋಗವು ಪ್ರಜಾಪ್ರತಿನಿಧಿ ಕಾಯ್ದೆಯ ಸೆಕ್ಷನ್ 151 ಎ ಅಡಿಯಲ್ಲಿ ಸದರಿ ಹುದ್ದೆಯನ್ನು ಖಾಲಿ ಇರಿಸುವಂತಿಲ್ಲ, ಖಾಲಿಯಿರುವ ದಿನಾಂಕದಿಂದ 6 ತಿಂಗಳೊಳಗೆ ಖಾಲಿ ಹುದ್ದೆಗಳನ್ನು ಭರ್ತಿ ಮಾಡಬೇಕು ಎಂದು ಹೇಳುತ್ತದೆ. ಇದರಿಂದ ಮತದಾರರ ಹಕ್ಕುಗಳ ಮೇಲೆ ಪರಿಣಾಮ ಬೀರಲಿದೆ. ಕೆಎಎಂಎಸ್‌ನ ಶಶಿಕುಮಾರ್, ಆದಷ್ಟು ಬೇಗ ಚುನಾವಣೆ ನಡೆಸುವುದು ಬಹಳ ಮುಖ್ಯ. ಇಷ್ಟೆಲ್ಲಾ ಪತ್ರಗಳನ್ನು ನೀಡಿ ಆಯೋಗಕ್ಕೆ ಮನವಿ ಮಾಡಿದರೂ ಈ ನಿಟ್ಟಿನಲ್ಲಿ ಕ್ರಮ ಕೈಗೊಂಡಿಲ್ಲ.

ಇತರ ಕ್ಷೇತ್ರಗಳಿಗೆ ಹೋಲಿಸಿದರೆ ಇದು ಅತಿದೊಡ್ಡ ಎಂಎಲ್‌ಸಿ ಕ್ಷೇತ್ರಗಳಲ್ಲಿ ಒಂದಾಗಿದೆ.ನ38 ಎಂಎಲ್‌ಎ ಕ್ಷೇತ್ರಗಳ ಶಿಕ್ಷಕರು ಚುನಾವಣೆಗೆ ಮತ ಚಲಾಯಿಸುತ್ತಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

ಬಿಗ್ ಬಾಸ್ 12 ಫಿನಾಲೆ ಹೊತ್ತಲ್ಲಿ ಕಿಚ್ಚ ಸುದೀಪ್‌ಗೆ ಸಂಕಷ್ಟ ತಂದ 'ರಣಹದ್ದು'!

CM ಕುರ್ಚಿ ಗುದ್ದಾಟ: ಅಗತ್ಯವಿದ್ದಾಗ ಸಿದ್ದರಾಮಯ್ಯ, ಶಿವಕುಮಾರ್‌ರನ್ನು ಮಾತುಕತೆಗೆ ಕರೆಯಲಾಗುವುದು; ಮಲ್ಲಿಕಾರ್ಜುನ ಖರ್ಗೆ

ಉತ್ತರ ಪ್ರದೇಶ: "ಆಕ್ಷೇಪಾರ್ಹ" ಸ್ಥಿತಿಯಲ್ಲಿದ್ದ ಪ್ರೇಮಿಗಳನ್ನು ಹೊಡೆದು ಕೊಂದ ಕುಟುಂಬಸ್ಥರು!

ಮಹಾತ್ಮ ಗಾಂಧಿ ಸಂದೇಶಗಳು ಹಿಂದೆಂದಿಗಿಂತಲೂ ಈಗ ಹೆಚ್ಚು ಪ್ರಸ್ತುತ: ಸಬರಮತಿ ಆಶ್ರಮದಲ್ಲಿ ಜರ್ಮನ್ ಚಾನ್ಸೆಲರ್!

SCROLL FOR NEXT