ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಪಿಎಸ್ಐ. 
ರಾಜ್ಯ

ತುಮಕೂರು: ನಿರಾಶ್ರಿತ ಕೇಂದ್ರದಲ್ಲಿ ವಿದೇಶಿ ಮಹಿಳೆಯರ ಪುಂಡಾಟ, ಪಿಎಸ್ಐ ಸೇರಿ ನಾಲ್ವರ ಮೇಲೆ ಹಲ್ಲೆ

ಪಾಸ್‌ಪೋರ್ಟ್ ಅವಧಿ ಮುಗಿದಿರುವ ವಿದೇಶಿ ನಿರಾಶ್ರಿತರಿಗೆ ಆಶ್ರಯ ನೀಡಿರುವ ದಿಬ್ಬೂರಿನ ಕೇಂದ್ರದಲ್ಲಿ ಕೆಲವು ವಿದೇಶಿ ಪ್ರಜೆಗಳು ಪುಂಡಾಟ ನಡೆಸಿದ್ದು, ಪಿಎಸ್ಐ ಸೇರಿ ನಾಲ್ವರ ಮೇಲೆ ಹಲ್ಲೆ ನಡೆಸಿರುವ ಘಟನೆ ಶುಕ್ರವಾರ ನಡೆದಿದೆ.

ತುಮಕೂರು: ಪಾಸ್‌ಪೋರ್ಟ್ ಅವಧಿ ಮುಗಿದಿರುವ ವಿದೇಶಿ ನಿರಾಶ್ರಿತರಿಗೆ ಆಶ್ರಯ ನೀಡಿರುವ ದಿಬ್ಬೂರಿನ ಕೇಂದ್ರದಲ್ಲಿ ಕೆಲವು ವಿದೇಶಿ ಪ್ರಜೆಗಳು ಪುಂಡಾಟ ನಡೆಸಿದ್ದು, ಪಿಎಸ್ಐ ಸೇರಿ ನಾಲ್ವರ ಮೇಲೆ ಹಲ್ಲೆ ನಡೆಸಿರುವ ಘಟನೆ ಶುಕ್ರವಾರ ನಡೆದಿದೆ.

ವಿದೇಶಿಗರ ನಿರಾಶ್ರಿತರ ಕೇಂದ್ರದಲ್ಲಿ ಉಗಾಂಡ, ಬಾಂಗ್ಲಾದೇಶ, ನೈಜೀರಿಯ ಸೇರಿ 5 ದೇಶದ 27 ಪ್ರಜೆಗಳಿದ್ದಾರೆ. ಕೇಂದ್ರದಲ್ಲಿ ವಿದೇಶಿ ಮಹಿಳೆಯರು ಸ್ಟೌವ್ ಬಳಸಿಕೊಂಡು ಅಡುಗೆ ಮಾಡಿಕೊಳ್ಳುತ್ತಿದ್ದರು. ಇದು ಅಪಾಯಕಾರಿಯಾದ ಹಿನ್ನೆಲೆಯಲ್ಲಿ ಸ್ಥಳಕ್ಕೆ ತೆರಳಿದ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಇದಕ್ಕೆ ನಿರಾಕರಿಸಿದ್ದರು. ಈ ವೇಳೆ ಪಿಎಸ್ಐ ಸೇರಿ ನಾಲ್ವರ ಮೇಲೆ ದಾಳಿ ನಡೆಸಿದ್ದಾರೆಂದು ಎಸ್'ಪಿ ರಾಹುಲ್ ಕುಮಾರ್ ಶಹಪುರ್ವಾಡ್ ಅವರು ಹೇಳಿದ್ದಾರೆ.

ಘಟನೆಯಲ್ಲಿ ಪಿಎಸ್‌ಐ ಚಂದ್ರಕಲಾ, ಮಹಿಳಾ ಕಾನ್ಸ್‌ಟೇಬಲ್ ತಾಸೀನಾ ಬಾನು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಘಟನೆ ಬಳಿಕ ಎಸ್'ಪಿ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಈ ವೇಳೆ ಹಲ್ಲೆ ನಡೆಸಿದ ನಾಲ್ವರು ಆರೋಪಿಗಳನ್ನು ವಶಕ್ಕೆ ಪಡೆದು, ಜೈಲಿಗಟ್ಟಿದ್ದಾರೆ. ಅಲ್ಲದೆ, ಮುಂಜಾಗ್ರತಾ ಕ್ರಮವಾಗಿ ಸ್ಥಳದಲ್ಲಿ ಹೆಚ್ಚಿನ ಸಿಬ್ಬಂದಿಗಳನ್ನೂ ನಿಯೋಜಿಸಿದ್ದಾರೆ.

 ಇವರ ಬಗ್ಗೆ ಹೆಚ್ಚಿನ ಮಾಹಿತಿ ಸಂಗ್ರಹಿಸಲಾಗುತ್ತಿದೆ. ಈ ಸಂಬಂಧ ತುಮಕೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT