ಸಂಗ್ರಹ ಚಿತ್ರ 
ರಾಜ್ಯ

ಹಂಪಿಯಲ್ಲಿ ಜಿ20 ಶೃಂಗಸಭೆ: ಭದ್ರತೆಗೆ 100 ಸಿಸಿಟಿವಿ ಕ್ಯಾಮೆರಾ, 300 ಮಂದಿ ಪೊಲೀಸರ ನಿಯೋಜನೆ

ಜಿ20 ಶೃಂಗಸಭೆ ಭಾನುವಾರದಿಂದ ಹಂಪಿಯಲ್ಲಿ ಆರಂಭವಾಗಲಿದ್ದು, ಸುಮಾರು 52 ದೇಶಗಳಿಂದ ಬರಲಿರುವ ಗಣ್ಯರ ಭದ್ರತೆಗಾಗಿ 100 ಸಿಸಿಟಿವಿ ಕ್ಯಾಮೆರಾಗಳು ಹಾಗೂ ಕೇಂದ್ರೀಯ ಭದ್ರತಾಪಡೆಗಳು, ಎಸ್ಪಿಗಳು, ಡಿವೈಎಸ್ಪಿಗಳು ಸೇರಿದಂತೆ 300 ಮಂದಿ ಪೊಲೀಸರನ್ನು ನಿಯೋಜಿಸಲಾಗಿದೆ.

ಹೊಸಪೇಟೆ (ವಿಜಯನಗರ): ಜಿ20 ಶೃಂಗಸಭೆ ಭಾನುವಾರದಿಂದ ಹಂಪಿಯಲ್ಲಿ ಆರಂಭವಾಗಲಿದ್ದು, ಸುಮಾರು 52 ದೇಶಗಳಿಂದ ಬರಲಿರುವ ಗಣ್ಯರ ಭದ್ರತೆಗಾಗಿ 100 ಸಿಸಿಟಿವಿ ಕ್ಯಾಮೆರಾಗಳು ಹಾಗೂ ಕೇಂದ್ರೀಯ ಭದ್ರತಾಪಡೆಗಳು, ಎಸ್ಪಿಗಳು, ಡಿವೈಎಸ್ಪಿಗಳು ಸೇರಿದಂತೆ 300 ಮಂದಿ ಪೊಲೀಸರನ್ನು ನಿಯೋಜಿಸಲಾಗಿದೆ.

ವಿಜಯನಗರ ಜಿಲ್ಲಾಡಳಿತ ಮಂಡಳಿಯು ಕಳೆದ ಮೂರು ತಿಂಗಳಿನಿಂದ ಜಿ20 ಶೃಂಗಸಭೆಗೆ ಸಿದ್ಧತೆ ನಡೆಸಿದೆ.

ನೀತಿ ಆಯೋಗದ ಸಿಇಒ ಅಮಿತ್ಭಾ ಕಾಂತ್ ಮತ್ತು ಆಂತರಿಕ ಭದ್ರತಾ ವಿಭಾಗದ ಐಜಿಪಿ ವಿಪುಲ್ ಕುಮಾರ್ ಈಗಾಗಲೇ ಹಂಪಿಗೆ ಭೇಟಿ ಪರಿಶೀಲನೆ ನಡೆಸಿದ್ದಾರೆ.

ಇಬ್ಬರು ಎಸ್ಪಿಗಳು, 5 ಡಿವೈಎಸ್ಪಿಗಳು ಮತ್ತು ಸುಮಾರು 300 ಪೊಲೀಸರು ಹಂಪಿಯಲ್ಲಿ ಪ್ರತಿನಿಧಿಗಳ ಭದ್ರತೆಯನ್ನು ಮೇಲ್ವಿಚಾರಣೆ ಮಾಡುತ್ತಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಆಯ್ದ ಸ್ಥಳಗಳಲ್ಲಿ 100 ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ ಮತ್ತು ಹಾನಿಗೊಳಗಾದ ಕೆಲವು ಕ್ಯಾಮೆರಾಗಳನ್ನು ಬದಲಾಯಿಸಿದ್ದೇವೆಂದು ಮಾಹಿತಿ ನೀಡಿದ್ದಾರೆ.

ಹಂಪಿಯಲ್ಲಿ ನಡೆಯುವ ಜಿ20 ಶೃಂಗಸಭೆಯಲ್ಲಿ 43 ದೇಶಗಳ ಪ್ರತಿನಿಧಿಗಳು ಮತ್ತು ಅಧಿಕಾರಿಗಳು ಭಾಗವಹಿಸುತ್ತಿದ್ದಾರೆ. ಹಂಪಿಯಲ್ಲಿ ಜಿ20 ಶೃಂಗಸಭೆ ನಡೆಯುತ್ತಿರುವುದು ನಮಗೆ ಹೆಮ್ಮೆ ತಂದಿದೆ ಎಂದು ಮತ್ತೊಬ್ಬ ಅಧಿಕಾರಿ ತಿಳಿಸಿದ್ದಾರೆ.

ಸಮಾವೇಶದ ಸಮಯದಲ್ಲಿ ಹಂಪಿಗೆ ಪ್ರವಾಸಿಗರ ಪ್ರವೇಶಕ್ಕೆ ಯಾವುದೇ ನಿರ್ಬಂಧವಿಲ್ಲ ಹೇರಲಾಗಿಲ್ಲ. ಆದರೆ, ಶೃಂಗಸಭೆ ನಡೆಯುವ ಸ್ಥಳಗಳಿಗೆ ಇತರರ ಪ್ರವೇಶಕ್ಕೆ ಅನುಮತಿಯಿಲ್ಲ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ