ಡಿಸಿಎಂ ಡಿಕೆ ಶಿವಕುಮಾರ್ ಸಾಂದರ್ಭಿಕ ಚಿತ್ರ 
ರಾಜ್ಯ

ಜೈನ ಮುನಿ ಹಂತಕರ ವಿರುದ್ಧ ಕಠಿಣ ಕ್ರಮ: ಡಿಸಿಎಂ ಡಿಕೆ ಶಿವಕುಮಾರ್ 

ಬೆಳಗಾವಿಯಲ್ಲಿ ಜೈನ ಮುನಿಗಳಾದ ಕಾಮಕುಮಾರನಂದಿ ಮಹಾರಾಜರ ಹತ್ಯೆ ಮಾಡಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ ನೀಡಿದ್ದಾರೆ.

ಬೆಂಗಳೂರು: ಜೈನ ಮುನಿಗಳಾದ ಕಾಮಕುಮಾರನಂದಿ ಮಹಾರಾಜರ ಹತ್ಯೆ ಮಾಡಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ ನೀಡಿದ್ದಾರೆ.

ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಉಪಮುಖ್ಯಮಂತ್ರಿ, ಜೈನ ಮುನಿಗಳ ಹತ್ಯೆ ಖಂಡನೀಯ. ಇದನ್ನು ಸರ್ಕಾರ ಸಹಿಸುವುದಿಲ್ಲ. ತಪ್ಪಿತಸ್ಥರ ವಿರುದ್ಧ ಕಾನೂನಿನ  ಕಠಿಣ ಕ್ರಮ ಕೈಗೊಳ್ಳಲಾಗುವುದು, ಯಾರೊಬ್ಬರೂ ಪ್ರಚೋದನೆಗೆ ಒಳಗಾಗಬಾರದು, ಬೇರೆಯವರನ್ನು ಪ್ರಚೋದಿಸಬಾರದು. ಶಾಂತಿ ಸುವ್ಯವಸ್ಥೆ ಕಾಪಾಡಬೇಕು ಎಂದರು.

ಇನ್ನು ಬೆಳಗಾವಿಯ ಗೊರೂರು ಮಠದ ಗುಣಾಧಾರನಂದಿ ಮಹಾರಾಜ ಸ್ವಾಮೀಜಿಗಳು ಸ್ವಾಮೀಜಿಗಳಿಗೆ ಭದ್ರತೆ ನೀಡಬೇಕು ಎಂದು ಅನ್ನ, ನೀರು ತ್ಯಜಿಸಿ ಪ್ರತಿಭಟನೆಗೆ ಮುಂದಾಗಿರುವ ಮಾಹಿತಿ ಬಂದಿದೆ. ಸ್ವಾಮೀಜಿಗಳಿಗೆ ಭದ್ರತೆ ನೀಡುವ ಕೆಲಸ ಮಾಡುತ್ತೇವೆ. ಕೂಡಲೇ ಅವರು ತಮ್ಮ ಪ್ರತಿಭಟನೆ ಕೈಬಿಡಬೇಕು ಎಂದು ಮನವಿ ಮಾಡಿದರು.

 ಅವರನ್ನು ದೂರವಾಣಿ ಮೂಲಕ ಸಂಪರ್ಕಿಸಲು ಪ್ರಯತ್ನಿಸುತ್ತಿದ್ದೇನೆ. ಆದರೆ ಸಂಪರ್ಕ ಸಾಧ್ಯವಾಗಿಲ್ಲ. ಹೀಗಾಗಿ ಸ್ಥಳೀಯ ಶಾಸಕರು, ಮಂತ್ರಿಗಳ ಜೊತೆ ಈ ವಿಚಾರವಾಗಿ ಮಾತನಾಡಿದ್ದೇನೆ ಎಂದು ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಲಂಚ ಪಡೆವಾಗ ಲೋಕಾಯುಕ್ತ ದಾಳಿ: ಇನ್ಸ್ ಪೆಕ್ಟರ್ ಹೈಡ್ರಾಮಾ, ಪೊಲೀಸರ ವಿರುದ್ಧವೇ ಕೂಗಾಡಿ ರಂಪಾಟ, Video Viral

ಕೇವಲ 400 ಮೀಟರ್​ಗೆ 18 ಸಾವಿರ ರೂ. ಬಾಡಿಗೆ: ಹಗಲು ದರೋಡೆಗಿಳಿದ ಮುಂಬೈ ಕ್ಯಾಬ್ ಚಾಲಕನ ಬಂಧನ!

ತಿರುಪತಿ ಲಡ್ಡುವಿನಲ್ಲಿ ಪ್ರಾಣಿಗಳ ಕೊಬ್ಬು ತಳ್ಳಿಹಾಕಿದ CBI; ಆದ್ರೆ ಕೃತಕ 'ತುಪ್ಪ' ಬಳಕೆ ಬಹಿರಂಗ

ಮಂಗನ ಜ್ವರಕ್ಕೆ ಈ ವರ್ಷ ಮೊದಲ ಸಾವು: ಶಿವಮೊಗ್ಗದಲ್ಲಿ 29 ವರ್ಷದ ಯುವಕ ಬಲಿ, ಆರೋಗ್ಯ ಇಲಾಖೆಗೆ ಮುನ್ನೆಚ್ಚರಿಕೆ

Big Boss Kannada 12 ಫಿನಾಲೆ ಎಪಿಸೋಡ್ ಗೆ ದಾಖಲೆ TRP, ಅಗ್ರಸ್ಥಾನಕ್ಕೆ ಕಲರ್ಸ್ ಕನ್ನಡ!

SCROLL FOR NEXT