ಕೊಲೆಯಾದ ವೇಣುಗೋಪಾಲ್ ನಾಯಕ್ 
ರಾಜ್ಯ

ಮೈಸೂರು: ಹನುಮ ಜಯಂತಿ ವೇಳೆ ಗುಂಪು ಘರ್ಷಣೆ; ಯುವ ಬ್ರಿಗೇಡ್​ ಕಾರ್ಯಕರ್ತನ ಬರ್ಬರ ಹತ್ಯೆ

ಮೈಸೂರು ಜಿಲ್ಲೆಯ ಟಿ.ನರಸೀಪುರದಲ್ಲಿ ಹನುಮ ಜಯಂತಿ ವೇಳೆ ಗುಂಪು ಘರ್ಷಣೆ ನಡೆದಿದ್ದು, ಈ ವೇಳೆ ಯುವ ಬ್ರಿಗೇಡ್ ಕಾರ್ಯಕರ್ತನನ್ನು ಬರ್ಬರ ಹತ್ಯೆ ಮಾಡಲಾಗಿದೆ.

ಮೈಸೂರು: ಮೈಸೂರು ಜಿಲ್ಲೆಯ ಟಿ.ನರಸೀಪುರದಲ್ಲಿ ಹನುಮ ಜಯಂತಿ ವೇಳೆ ಗುಂಪು ಘರ್ಷಣೆ ನಡೆದಿದ್ದು, ಈ ವೇಳೆ ಯುವ ಬ್ರಿಗೇಡ್ ಕಾರ್ಯಕರ್ತನನ್ನು ಬರ್ಬರ ಹತ್ಯೆ ಮಾಡಲಾಗಿದೆ.

ಈ ಘಟನೆ ಮೈಸೂರಿನ ತಿ.ನರಸೀಪುರ ಪಟ್ಟಣದ ಹೊರ ವಲಯದಲ್ಲಿ ನಡೆದಿದೆ. ವೇಣುಗೋಪಾಲ್ ನಾಯಕ್ ಕೊಲೆಯಾದ ಯುವಕ.  ಕ್ಷುಲ್ಲಕ ಕಾರಣಕ್ಕೆ  ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ.

ಮೃತ ಯುವಕ ವೇಣುಗೋಪಾಲ್ ಯುವಬ್ರಿಗೇಡ್​ನ ಕಾರ್ಯಕರ್ತನಾಗಿದ್ದು, ನರಸೀಪುರ ಪಟ್ಟಣದ ಶ್ರೀರಾಂಪುರ ಕಾಲೋನಿ ನಿವಾಸಿಯಾಗಿದ್ದಾನೆ, ನಿನ್ನೆ ನಡೆದ ಹನುಮ ಜಯಂತಿ ವೇಳೆ ಎರಡು ಗುಂಪುಗಳ ನಡುವೆ ಮಾತಿನ ಚಕಮಕಿ ಉಂಟಾಗಿತ್ತು, ಈ ವೇಳೆ ಎರಡು ಗುಂಪುಗಳ ನಡುವೆ ಮದ್ಯಸ್ತಿಕೆ ವಹಿಸಿ ಸಮಾಧಾನ ಪಡಿಸಲಾಗಿತ್ತು.

ತಿ.ನರಸೀಪುರ ಸಾರ್ವಜನಿಕ ಆಸ್ಪತ್ರೆಗೆ ಮೃತ ದೇಹ ರವಾನೆ ಮಾಡಲಾಗಿದ್ದು, ಪೊಲೀಸರು ಘಟನಾ ಸ್ಥಳದಲ್ಲಿಯೇ ಮೊಕ್ಕಾಂ ಹೂಡಿದ್ದಾರೆ. ಪೊಲೀಸರು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.

ಯುವ ಬ್ರಿಗೇಡ್ ಕಾರ್ಯಕರ್ತನ ಕೊಲೆಯಾದ ಹಿನ್ನೆಲೆಯಲ್ಲಿ ತಾಲೂಕು ಆಸ್ಪತ್ರೆಗೆ ಯುವ ಬ್ರಿಗೇಡ್‌ ಮುಖಂಡ ಚಕ್ರವರ್ತಿ ಸೂಲಿಬೆಲೆ ಭೇಟಿ ನೀಡಿದ್ದು, ಮೃತ ಯುವಕನ ಅಂತಿಮ ದರ್ಶನ ಪಡೆದಿದ್ದಾರೆ. ಮೃತ ಯುವಕನ ವೇಣುಗೋಪಾಲ್ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ.   

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ಮೊದಲ ಬಾರಿಗೆ ದಾಳಿ ಕುರಿತು ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

ಚಾಮುಂಡೇಶ್ವರಿ ದೇವಿ ಬಗ್ಗೆ ಗೌರವವಿದ್ದು, ಧಾರ್ಮಿಕ ಭಾವನೆಗಳ ಗೌರವಿಸುತ್ತೇನೆ; ಬಾನು ಮುಷ್ತಾಕ್

JC ರಸ್ತೆಯಲ್ಲಿ White-topping ಕಾಮಗಾರಿ: ಆ.30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

SCROLL FOR NEXT