ಕೊಲೆಯಾದ ವೇಣುಗೋಪಾಲ್ ನಾಯಕ್ 
ರಾಜ್ಯ

ಮೈಸೂರು: ಹನುಮ ಜಯಂತಿ ವೇಳೆ ಗುಂಪು ಘರ್ಷಣೆ; ಯುವ ಬ್ರಿಗೇಡ್​ ಕಾರ್ಯಕರ್ತನ ಬರ್ಬರ ಹತ್ಯೆ

ಮೈಸೂರು ಜಿಲ್ಲೆಯ ಟಿ.ನರಸೀಪುರದಲ್ಲಿ ಹನುಮ ಜಯಂತಿ ವೇಳೆ ಗುಂಪು ಘರ್ಷಣೆ ನಡೆದಿದ್ದು, ಈ ವೇಳೆ ಯುವ ಬ್ರಿಗೇಡ್ ಕಾರ್ಯಕರ್ತನನ್ನು ಬರ್ಬರ ಹತ್ಯೆ ಮಾಡಲಾಗಿದೆ.

ಮೈಸೂರು: ಮೈಸೂರು ಜಿಲ್ಲೆಯ ಟಿ.ನರಸೀಪುರದಲ್ಲಿ ಹನುಮ ಜಯಂತಿ ವೇಳೆ ಗುಂಪು ಘರ್ಷಣೆ ನಡೆದಿದ್ದು, ಈ ವೇಳೆ ಯುವ ಬ್ರಿಗೇಡ್ ಕಾರ್ಯಕರ್ತನನ್ನು ಬರ್ಬರ ಹತ್ಯೆ ಮಾಡಲಾಗಿದೆ.

ಈ ಘಟನೆ ಮೈಸೂರಿನ ತಿ.ನರಸೀಪುರ ಪಟ್ಟಣದ ಹೊರ ವಲಯದಲ್ಲಿ ನಡೆದಿದೆ. ವೇಣುಗೋಪಾಲ್ ನಾಯಕ್ ಕೊಲೆಯಾದ ಯುವಕ.  ಕ್ಷುಲ್ಲಕ ಕಾರಣಕ್ಕೆ  ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ.

ಮೃತ ಯುವಕ ವೇಣುಗೋಪಾಲ್ ಯುವಬ್ರಿಗೇಡ್​ನ ಕಾರ್ಯಕರ್ತನಾಗಿದ್ದು, ನರಸೀಪುರ ಪಟ್ಟಣದ ಶ್ರೀರಾಂಪುರ ಕಾಲೋನಿ ನಿವಾಸಿಯಾಗಿದ್ದಾನೆ, ನಿನ್ನೆ ನಡೆದ ಹನುಮ ಜಯಂತಿ ವೇಳೆ ಎರಡು ಗುಂಪುಗಳ ನಡುವೆ ಮಾತಿನ ಚಕಮಕಿ ಉಂಟಾಗಿತ್ತು, ಈ ವೇಳೆ ಎರಡು ಗುಂಪುಗಳ ನಡುವೆ ಮದ್ಯಸ್ತಿಕೆ ವಹಿಸಿ ಸಮಾಧಾನ ಪಡಿಸಲಾಗಿತ್ತು.

ತಿ.ನರಸೀಪುರ ಸಾರ್ವಜನಿಕ ಆಸ್ಪತ್ರೆಗೆ ಮೃತ ದೇಹ ರವಾನೆ ಮಾಡಲಾಗಿದ್ದು, ಪೊಲೀಸರು ಘಟನಾ ಸ್ಥಳದಲ್ಲಿಯೇ ಮೊಕ್ಕಾಂ ಹೂಡಿದ್ದಾರೆ. ಪೊಲೀಸರು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.

ಯುವ ಬ್ರಿಗೇಡ್ ಕಾರ್ಯಕರ್ತನ ಕೊಲೆಯಾದ ಹಿನ್ನೆಲೆಯಲ್ಲಿ ತಾಲೂಕು ಆಸ್ಪತ್ರೆಗೆ ಯುವ ಬ್ರಿಗೇಡ್‌ ಮುಖಂಡ ಚಕ್ರವರ್ತಿ ಸೂಲಿಬೆಲೆ ಭೇಟಿ ನೀಡಿದ್ದು, ಮೃತ ಯುವಕನ ಅಂತಿಮ ದರ್ಶನ ಪಡೆದಿದ್ದಾರೆ. ಮೃತ ಯುವಕನ ವೇಣುಗೋಪಾಲ್ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ.   

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Nationwide strike: 'ಕಾರ್ಮಿಕ ನೀತಿ' ವಿರೋಧಿಸಿ ದೇಶಾದ್ಯಂತ ಮುಷ್ಕರ: 30 ಕೋಟಿ ಕಾರ್ಮಿಕರು ಭಾಗಿ, ಬ್ಯಾಂಕಿಂಗ್, ವಿದ್ಯುತ್ ಸೇವೆ ವ್ಯತ್ಯಯ!

ಟಿ20 ವಿಶ್ವಕಪ್ 2026: ಆಫ್ಘಾನಿಸ್ತಾನ ಬೆಂಬಿಡದ super Over ಭೂತ, ಇತಿಹಾಸ ಹೇಳೋದೇನು? 3 ಸೂಪರ್ ಓವರ್ ಕಂಡಿದ್ದ ಆ ಪಂದ್ಯ!

Dr Sreeleela: ನಟನೆ ಜೊತೆಗೇ MBBS ಪದವಿ ಪಡೆದ ಶ್ರೀಲೀಲಾ, ಪೋಷಕರ ತಬ್ಬಿ ಆನಂದ ಭಾಷ್ಮ! Video

Pakadua Vivah: ಯುವಕನಿಗೆ ಮತ್ತಿನ ಪದಾರ್ಥ ನೀಡಿ ಬಲವಂತದ ಮದುವೆ: Video Viral

ಬೆಂಗಳೂರಿನಲ್ಲಿ ಮತ್ತೊಂದು ರಸ್ತೆ ಗಲಾಟೆ: ಬಾನೆಟ್ ಮೇಲೆ ವ್ಯಕ್ತಿಯ ಎಳೆದೊಯ್ದ ಕಾರು ಜಪ್ತಿ, ಚಾಲಕ ಬಂಧನ!

SCROLL FOR NEXT