ಆಶಾ ಕಾರ್ಯಕರ್ತೆಯರ ಸಾಂದರ್ಭಿಕ ಚಿತ್ರ 
ರಾಜ್ಯ

ಸದ್ಯಕ್ಕೆ ಆಶಾ ಕಾರ್ಯಕರ್ತೆಯರ ವೇತನ ಹೆಚ್ಚಳ ಇಲ್ಲ- ದಿನೇಶ್ ಗುಂಡೂರಾವ್

ಸದ್ಯಕ್ಕೆ ಆಶಾ ಕಾರ್ಯಕರ್ತೆಯರ ವೇತನ ಹೆಚ್ಚಳ ಇಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ವಿಧಾನಪರಿಷತ್ ನಲ್ಲಿ ಸೋಮವಾರ ಸ್ಪಷ್ಪಪಡಿಸಿದರು. 

ಬೆಂಗಳೂರು: ಸದ್ಯಕ್ಕೆ ಆಶಾ ಕಾರ್ಯಕರ್ತೆಯರ ವೇತನ ಹೆಚ್ಚಳ ಇಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ವಿಧಾನಪರಿಷತ್ ನಲ್ಲಿ ಸೋಮವಾರ ಸ್ಪಷ್ಪಪಡಿಸಿದರು. 

ಪ್ರಶ್ನೋತ್ತರ ವೇಳೆಯಲ್ಲಿ ಜೆಡಿಎಸ್ ನ ಕೆ. ಎ. ತಿಪ್ಪೇಸ್ವಾಮಿ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ರಾಜ್ಯದಲ್ಲಿ 41,119 ಆಶಾ ಕಾರ್ಯಕರ್ತೆಯರು ಕೆಲಸ ಮಾಡುತ್ತಿದ್ದಾರೆ. ಕಾರ್ಯ ನಿರ್ವಹಣೆ ಆಧಾರದಲ್ಲಿ ಪ್ರತಿ ತಿಂಗಳು ರೂ.5,000 ಗೌರವ ಧನ ನೀಡಲಾಗುತ್ತಿದೆ. ಸದ್ಯಕ್ಕೆ ಅವರ ವೇತನ ಹೆಚ್ಚಳ ಮಾಡುವ ಪ್ರಸ್ತಾವ ಸರ್ಕಾರದ ಮುಂದೆ ಇಲ್ಲ ಎಂದರು.

ಮತ್ತೊಂದು ಪ್ರಶ್ನೆಗೆ ಉತ್ತರಿಸಿದ ಸಚಿವರು, ಆಯುಷ್ ಇಲಾಖೆಯಲ್ಲಿ ತಜ್ಞ ವೈದ್ಯರು, ಸಿಬ್ಬಂದಿ ಸೇವೆ ಕಾಯಂಗೊಳಿಸಲು ನಿಯಮಗಳಲ್ಲಿ ಅವಕಾಶ ಇಲ್ಲ ಎಂದರು.ರಾಷ್ಟ್ರೀಯ ಆಯುಷ್ ಅಭಿಯಾನದಡಿ 113 ತಜ್ಞ ವೈದ್ಯರು ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದಾರೆ. ಈ ಯೋಜನೆ ತಾತ್ಕಾಲಿಕವಾಗಿದ್ದು, ವೈದ್ಯ ಹುದ್ದೆಗಳನ್ನು ಕಾಯಂ ಮಾಡಲು ಸಾಧ್ಯವಿಲ್ಲ ಎಂದು ತಿಳಿಸಿದರು.

ಆಯುಷ್ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವಾಗ ವಿಶೇಷ ನೇಮಕಾತಿ ನಿಯಮ ರೂಪಿಸಿ, ಕೃಪಾಂಕ ಹಾಗೂ ವಯೋಮಿತಿ ಸಡಿಲಿಕೆಯ ಅವಕಾಶ ಕಲ್ಪಿಸಲಾಗಿದೆ ಎಂದರು. 
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತ- ಫಿಜಿ ರಕ್ಷಣಾ ಸಹಕಾರ ಕ್ರಿಯಾ ಯೋಜನೆ ಸಿದ್ಧ: ಇಂಡೋ ಪೆಸಿಫಿಕ್‌ ವಲಯದಲ್ಲಿ ಚೀನಾದ ಪ್ರಾಬಲ್ಯ ತಡೆಗೆ ಮಾಸ್ಟರ್ ಪ್ಲಾನ್!

US tariff deadline: ಅಮೆರಿಕದ ಶೇ. 50 ರಷ್ಟು ಸುಂಕ ಆಗಸ್ಟ್ 27 ರಿಂದ ಜಾರಿ; ಮಂಗಳವಾರ ಮಹತ್ವದ PMO ಸಭೆ; ಮೋದಿ ಹೇಳಿದ್ದೇನು? Video

ಕಾರುಗಳ ಬೆಲೆಯಲ್ಲಿ ಆಗಲಿದೆ ಭಾರಿ ಇಳಿಕೆ: GST ಪರಿಷ್ಕರಣೆಗಾಗಿ ಕಾದು ಕುಳಿತ ಗ್ರಾಹಕರು!

IADWS: ಭಾರತೀಯ ಸೇನೆ ಬತ್ತಳಿಕೆಗೆ 'ಲೇಸರ್ ನಿರ್ದೇಶಿತ ಹೊಸ ಅಸ್ತ್ರ': ದಂಗಾದ ಚೀನಾ, ಹೇಳಿದ್ದು ಏನು?

ಗೌರಿ-ಗಣೇಶ ಹಬ್ಬ: ಪರಿಸರ ಕಾಳಜಿ ಮರೆಯದಿರೋಣ, ಜನತೆಗೆ ಸಿಎಂ ಸಿದ್ದರಾಮಯ್ಯ ಕರೆ! Video

SCROLL FOR NEXT