ಫಣಿಂದ್ರ ಸುಬ್ರಹ್ಮಣ್ಯ 
ರಾಜ್ಯ

ಬೆಂಗಳೂರಿನಲ್ಲಿ ಜೋಡಿ ಕೊಲೆ: ಹಾಡುಹಗಲೇ ಏರೋನಿಕ್ಸ್ ಕಂಪನಿ ಸಿಇಒ, ಎಂಡಿ ಬರ್ಬರ ಹತ್ಯೆ

ರಾಜಧಾನಿ ಬೆಂಗಳೂರಿನ ಅಮೃತಹಳ್ಳಿಯಲ್ಲಿ ಹಾಡುಹಗಲೇ ಜೋಡಿ ಕೊಲೆ ನಡೆದಿದ್ದು, ಏರೋನಿಕ್ಸ್ ಇಂಟರ್ನೆಟ್ ಕಂಪನಿಯ ಸಿಇಒ ಹಾಗೂ ಎಂಡಿಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ.

ಬೆಂಗಳೂರು: ರಾಜಧಾನಿ ಬೆಂಗಳೂರಿನ ಅಮೃತಹಳ್ಳಿಯಲ್ಲಿ ಹಾಡುಹಗಲೇ ಜೋಡಿ ಕೊಲೆ ನಡೆದಿದ್ದು, ಏರೋನಿಕ್ಸ್ ಇಂಟರ್ನೆಟ್ ಕಂಪನಿಯ ಸಿಇಒ ಹಾಗೂ ಎಂಡಿಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ.

ಏರೋನಿಕ್ಸ್ ಇಂಟರ್ನೆಟ್ ಕಂಪನಿಯ ಸಿಇಒ ವಿನುಕುಮಾರ್ ಮತ್ತು ವ್ಯವಸ್ಥಾಪಕ ನಿರ್ದೇಶಕ ಫಣಿಂದ್ರ ಸುಬ್ರಹ್ಮಣ್ಯ ಅವರನ್ನು ತಲ್ವಾರ್ ನಿಂದ ಚುಚ್ಚಿ, ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದೆ.

ಇಂದು ಸಂಜೆ 4 ಗಂಟೆಯ ಸುಮಾರಿಗೆ ಕಂಪನಿಯ ಮಾಜಿ ಉದ್ಯೋಗಿ ಫೆಲಿಕ್ಸ್ ಎಂಬಾತ ಈ ಕೃತ್ಯ ಎಸಗಿದ್ದು, ಸ್ಥಳಕ್ಕೆ ಅಮೃತಹಳ್ಳಿ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸುತ್ತಿದ್ದಾರೆ.

ಏರೋನಿಕ್ಸ್ ಸಂಸ್ಥೆಯಲ್ಲಿ ಉದ್ಯೋಗಿಯಾಗಿದ್ದ ಫೆಲಿಕ್ಸ್, ಕಂಪನಿಯಿಂದ ಹೊರಬಂದು ಸ್ವಂತ ಕಂಪನಿ ಸ್ಥಾಪಿಸಿದ್ದ. ಈ ಉದ್ಯಮಕ್ಕೆ ಪಣೀಂದ್ರ ಎದುರಾಳಿಯಾಗಿದ್ದನಂತೆ. ಇದೇ ಕಾರಣಕ್ಕೆ ಫೆಲಿಕ್ಸ್, ಎದುರಾಳಿ ಫಣೀಂದ್ರರನ್ನು ಕೊಲೆ ಮಾಡಲು ಸಂಚು ರೂಪಿಸಿದ್ದು, ಇಂದು ಸಂಜೆ ಅದರಂತೆ ಪಂಪಾ ಬಡವಾಣೆಯಲ್ಲಿರುವ ಏರೋನಿಕ್ಸ್ ಕಂಪನಿಗೆ ತೆರಳಿ ಪಣೀಂದ್ರ ಹಾಗೂ ವಿನುಕುಮಾರ್ ಅವರನ್ನು ಹತ್ಯೆ ಮಾಡಿ ಪರಾರಿಯಾಗಿದ್ದಾನೆ.

ತಲ್ವಾರ್ ಮತ್ತು ಚಾಕುವಿನ ಇರಿತದಿಂದ ಗಂಭೀರವಾಗಿ ಗಾಯಗೊಂಡ ಫಣೀಂದ್ರ ಮತ್ತು ವಿನುಕುಮಾರ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಆಗಮಿಸಿದ ಅಮೃತಹಳ್ಳಿ ಠಾಣಾ ಪೊಲೀಸರು ಪರಿಶೀಲನೆ ನಡೆಸಿ ಫಣಿಂದ್ರ, ವಿನುಕುಮಾರ್ ಮೃತದೇಹಗಳನ್ನು ಮಣಿಪಾಲ್ ಆಸ್ಪತ್ರೆಗೆ ರವಾನಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT