ಬಿಜೆಪಿ 
ರಾಜ್ಯ

ಜೈನ ಮುನಿ ಹತ್ಯೆ, ಯುವ ಬ್ರಿಗೇಡ್ ಸದಸ್ಯನ ಹತ್ಯೆ ಪ್ರಕರಣ: ಬಿಜೆಪಿಯಿಂದ 2 ಸತ್ಯಶೋಧನಾ ತಂಡ ರಚನೆ

ಬೆಳಗಾವಿಯಲ್ಲಿ ನಡೆದ ಜೈನ ಮುನಿ ಹತ್ಯೆ ಪ್ರಕರಣ ಹಾಗೂ ಮೈಸೂರಿನ ತಿ.ನರಸಿಪುರದಲ್ಲಿ ನಡೆದ ಯುವಾ ಬ್ರಿಗೇಡ್ ಕಾರ್ಯಕರ್ತನ ಹತ್ಯೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಬಿಜೆಪಿ ಸತ್ಯ ಶೋಧನ ತಂಡವನ್ನು ರಚಿಸಿದೆ. 

ಬೆಂಗಳೂರು: ಬೆಳಗಾವಿಯಲ್ಲಿ ನಡೆದ ಜೈನ ಮುನಿ ಹತ್ಯೆ ಪ್ರಕರಣ ಹಾಗೂ ಮೈಸೂರಿನ ತಿ.ನರಸಿಪುರದಲ್ಲಿ ನಡೆದ ಯುವಾ ಬ್ರಿಗೇಡ್ ಕಾರ್ಯಕರ್ತನ ಹತ್ಯೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಬಿಜೆಪಿ ಸತ್ಯ ಶೋಧನ ತಂಡವನ್ನು ರಚಿಸಿದೆ. 

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಸಿಟಿ ರವಿ ನೇತೃತ್ವದಲ್ಲಿ ಈ ಸಮಿತಿ ಕಾರ್ಯನಿರ್ವಹಿಸಲಿದ್ದು, ಘಟನೆಗಳ ಸತ್ಯವನ್ನು ತಿಳಿಯುವ ಕೆಲಸ ಮಾಡಲಿದೆ ಎಂದು ಪಕ್ಷ ತಿಳಿಸಿದೆ.

ಕಟೀಲ್ ನೇತೃತ್ವದಲ್ಲಿ 11 ಮಂದಿ ಕಾರ್ಯನಿರ್ವಹಿಸಲಿದ್ದರೆ, ಸಿಟಿ ರವಿ ನೇತೃತ್ವದಲ್ಲಿ 10 ಸದಸ್ಯರು ಇರಲಿದ್ದಾರೆ. ಅವರಿಗೆ ವಹಿಸಲಾದ ಜಿಲ್ಲೆಗಳಿಗೆ ಇಬ್ಬರೂ ನಾಯಕರೂ ಮಂಗಳವಾರ ಭೇಟಿ ನೀಡಿದ್ದಾರೆ ಎಂದು ತಿಳಿದುಬಂದಿದೆ.

ಜೈನಮುನಿ ಆಚಾರ್ಯ ಶ್ರೀ ಕಾಮಕುಮಾರ ನಂದಿ ಮಹಾರಾಜರನ್ನು ಚಿಕ್ಕೋಡಿಯಲ್ಲಿ ಹತ್ಯೆ ಮಾಡಿ ಅವರ ದೇಹವನ್ನು ತುಂಡು ತುಂಡಾಗಿ ಕತ್ತರಿಸಿ ಬೋರ್ವೆಲ್ ನಲ್ಲಿ ಹಾಕಲಾಗಿತ್ತು.

ಈ ಹತ್ಯೆ ಬಿಜೆಪಿ-ಕಾಂಗ್ರೆಸ್ ನಡುವೆ ವಾಗ್ವಾದಕ್ಕೆ, ಪರಸ್ಪರ ಆರೋಪಗಳಿಗೆ ಕಾರಣವಾಗಿತ್ತು. ಈ ನಡುವೆ ಗೃಹ ಸಚಿವ ಡಾ. ಜಿ ಪರಮೇಶ್ವರ ಜೈನ ಮುನಿಗಳ ಹತ್ಯೆ ಪ್ರಕರಣವನ್ನು ಸಿಬಿಐ ಗೆ ವಹಿಸಲು ಸಾಧ್ಯವಿಲ್ಲ ಎಂದು ಹೇಳಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಯುಕ್ರೇನ್-ರಷ್ಯಾ ಶಾಂತಿ ಒಪ್ಪಂದ ಸನಿಹ: ಸುಳಿವು ನೀಡಿದ ಯುಕ್ರೇನ್

2026 T20 ವಿಶ್ವಕಪ್: ಕೊಲಂಬೋದಲ್ಲಿ ಫೆ.15 ರಂದು ಭಾರತ- ಪಾಕ್ ಪಂದ್ಯ

ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು: ಸಿಎಂ, ಡಿಸಿಎಂ ಸಂತಾಪ

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ರಾಸಾಯನಿಕಗಳು, ಎಲೆಕ್ಟ್ರಾನಿಕ್ ಘಟಕಗಳ ಸುಲಭ ಲಭ್ಯತೆಯಿಂದ ಐಇಡಿ ಅಪಾಯ ಹೆಚ್ಚು: NSG

SCROLL FOR NEXT