ಸಚಿವ ಕೃಷ್ಣ ಭೈರೇಗೌಡ 
ರಾಜ್ಯ

ಅಮರನಾಥ ಯಾತ್ರಿಕರನ್ನು ಸುರಕ್ಷಿತವಾಗಿ ತವರಿಗೆ ಕರೆತರಲಾಗುವುದು: ಸಚಿವ ಕೃಷ್ಣ ಭೈರೇಗೌಡ

ತೀವ್ರ ಮಳೆ, ಭೂಕುಸಿತದಿಂದಾಗಿ ಅಮರನಾಥ ಯಾತ್ರೆಯಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಕನ್ನಡಿಗರನ್ನು ಸುರಕ್ಷಿತವಾಗಿ ತವರಿಗೆ ಕರೆತರಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರು ಸೋಮವಾರ ಹೇಳಿದರು.

ಬೆಂಗಳೂರು: ತೀವ್ರ ಮಳೆ, ಭೂಕುಸಿತದಿಂದಾಗಿ ಅಮರನಾಥ ಯಾತ್ರೆಯಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಕನ್ನಡಿಗರನ್ನು ಸುರಕ್ಷಿತವಾಗಿ ತವರಿಗೆ ಕರೆತರಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರು ಸೋಮವಾರ ಹೇಳಿದರು.

ವಿಧಾನಸಭೆಯಲ್ಲಿ ಮಾತನಾಡಿದ ಸಚಿವರು, “ಈಗಾಗಲೇ ಯಾತ್ರಾರ್ಥಿಗಳ ರಕ್ಷಿಸಿ ಸಿಆರ್‌ಪಿಎಫ್ ಶಿಬಿರಕ್ಕೆ ಸ್ಥಳಾಂತರಿಸಲಾಗಿದ್ದ 129 ಯಾತ್ರಾರ್ಥಿಗಳನ್ನು ಸುರಕ್ಷಿತವಾಗಿ ಕಾಶ್ಮೀರಕ್ಕೆ ಕರೆತರಲಾಗಿದೆ. ಆದರೆ, ಬಾಲ್ಟಾಲ್ ಕ್ಯಾಂಪ್‌ನಲ್ಲಿ ಹವಾಮಾನ ಹದಗೆಟ್ಟಿದ್ದು, ದಟ್ಟವಾದ ಮಂಜಿನಿಂದಾಗಿ ರಸ್ತೆಗಳನ್ನು ಮುಚ್ಚಲಾಗಿದೆ. ಬುಧವಾರದ ವೇಳೆಗೆ ಪರಿಸ್ಥಿತಿ ಸುಧಾರಿಸುವ ನಿರೀಕ್ಷೆಗಳಿದ್ದು, ಬಳಿಕ ರಸ್ತೆ ಕಾಮಗಾರಿ ಆರಂಭವಾಗಲಿದೆ. ನಂತರ ಯಾತ್ರಾರ್ಥಿಗಳನ್ನು ರಾಜ್ಯಕ್ಕೆ ಕರೆತರಲಾಗುವುದು ಎಂದು ಹೇಳಿದರು.

ಈಗಾಗಲೇ ಕಾಶ್ಮೀರಕ್ಕೆ ಕಳುಹಿಸಲಾಗಿರುವ ರಾಜ್ಯದ ನಾಲ್ವರು ಹಿರಿಯ ಐಎಎಸ್ ಮತ್ತು ಐಪಿಎಸ್ ಅಧಿಕಾರಿಗಳೊಂದಿಗೆ ಮುಖ್ಯಮಂತ್ರಿಗಳ ಕಚೇರಿ ಮಾತುಕತೆ ನಡೆಸುತ್ತಿದೆ.

ಯಾತ್ರಿಕರ ಕುಟುಂಬಗಳು ಭಯಪಡುವ ಅಗತ್ಯವಿಲ್ಲ, ಪ್ರತಿಯೊಬ್ಬರನ್ನು ಸುರಕ್ಷಿತವಾಗಿ ತವರಿಗೆ ಕರೆತರುವುದು ನಮ್ಮ ಜವಾಬ್ದಾರಿಯಾಗಿದೆ ಎಂದು ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಕಾವೇರಿ' ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ ನೀರು ಬಿಡಬೇಕೆಂಬ CWRC ಆದೇಶ ಎತ್ತಿಹಿಡಿದ CWMA

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ

2013ರ ಲೈಂಗಿಕ ದೌರ್ಜನ್ಯ ಪ್ರಕರಣ: Tehelka ಮಾಜಿ ಸಂಪಾದಕ ತರುಣ್ ತೇಜ್‌ಪಾಲ್‌ಗೆ ಸುಪ್ರೀಂ ಕೋರ್ಟ್‌ ಶಾಕ್‌; 2 ವಾರಗಳಲ್ಲಿ ಶರಣಾಗುವಂತೆ ಖಡಕ್ ಸೂಚನೆ..!

ವಿಮಾನ ಸುರಕ್ಷತೆಯಲ್ಲಿ ರಾಜಿಯಿಲ್ಲ: ಪೈಲಟ್‌ಗಳ ಡ್ರಗ್‌ ಟೆಸ್ಟ್‌ ನಿಯಮದಲ್ಲಿ ಮಹತ್ವದ ಬದಲಾವಣೆ, ವರ್ಷವಿಡೀ ಯಾದೃಚ್ಛಿಕ ತಪಾಸಣೆಗೆ ಕೇಂದ್ರ ಸರ್ಕಾರ ಮುಂದು..!

ಮೊಜ್ತಾಬಾ ಖಮೇನಿ ಜೀವಂತವಾಗಿ ಇದ್ದಾರೋ ಅಥವಾ ಇಲ್ಲವೋ? ಆತಂಕದ ಹಳೆಯ Video ಬಿಡುಗಡೆ ಮಾಡಿದ ಇರಾನ್!