ತೇಜಸ್ 
ರಾಜ್ಯ

ಬೆಂಗಳೂರು: ಆ್ಯಪ್ ಮೂಲಕ ಸಾಲ ಪಡೆದಿದ್ದ ವಿದ್ಯಾರ್ಥಿ ಟಾರ್ಚರ್ ತಾಳದೆ ಆತ್ಮಹತ್ಯೆಗೆ ಶರಣು

ಚೀನಾ ಆ್ಯಪ್ ಮೂಲಕ ಸಾಲ ಪಡೆದಿದ್ದ ವಿದ್ಯಾರ್ಥಿ ಟಾರ್ಚರ್ ತಾಳದೆ ನೇಣಿಗೆ ಶರಣಾಗಿರುವ ದಾರುಣ ಘಟನೆ ಬೆಂಗಳೂರಿನ ಎಚ್​ಎಂಟಿ ಕ್ವಾರ್ಟರ್ಸ್​ನಲ್ಲಿ ಬುಧವಾರ ನಡೆದಿದೆ. 

ಬೆಂಗಳೂರು: ಚೀನಾ ಆ್ಯಪ್ ಮೂಲಕ ಸಾಲ ಪಡೆದಿದ್ದ ವಿದ್ಯಾರ್ಥಿ ಟಾರ್ಚರ್ ತಾಳದೆ ನೇಣಿಗೆ ಶರಣಾಗಿರುವ ದಾರುಣ ಘಟನೆ ಬೆಂಗಳೂರಿನ ಎಚ್​ಎಂಟಿ ಕ್ವಾರ್ಟರ್ಸ್​ನಲ್ಲಿ ಬುಧವಾರ ನಡೆದಿದೆ.

ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿಯನ್ನು ತೇಜಸ್ ಎಂದು ಗುರುತಿಸಲಾಗಿದ್ದು, ಸ್ನೇಹಿತ ಮಹೇಶ್​ಗಾಗಿ ಸ್ಲೈಲ್ಸ್ ಪೇ, ಕಿಸಾತ್ ಹಾಗೂ ‌ಕೋಟಕ್ ಮಹೀಂದ್ರಾ ಮೂಲಕ ಲೋನ್ ಪಡೆದಿದ್ದ. ಆದರೆ ಕಳೆದ ಒಂದು ವರ್ಷದಿಂದ ಸ್ನೇಹಿತ ಮಹೇಶ್ ಇಎಂಐ ಕಟ್ಟಿರಲಿಲ್ಲ. ಈ ಹಿನ್ನೆಲೆಯಲ್ಲಿ ಲೋನ್ ಕೊಟ್ಟವರು ತೇಜಸ್ ಗೆ ಇಎಂಐ ಕಟ್ಟುವಂತೆ ಟಾರ್ಚರ್​ ನೀಡುತ್ತಿದ್ದರಂತೆ. 

ತೇಜಸ್ ಟಾರ್ಚರ್ ತಾಳದೆ ಡೆತ್ ನೋಟ್ ಬರೆದಿಟ್ಟು ನಿನ್ನೆ ಸಂಜೆ 6 ಗಂಟೆ ಸುಮಾರಿಗೆ ತಾಯಿಯ ವೇಲ್​ನಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

‘ಅಪ್ಪ ಅಮ್ಮ ನನ್ನನ್ನ ಕ್ಷಮಿಸಿ. ನಾನು ಮಾಡಿರುವ ತಪ್ಪಿಗೆ ಬೇರೆ ದಾರಿಯಿಲ್ಲ’ ‘ಮಾಡಿರುವ ಸಾಲ ತೀರಿಸಲು ಆಗುವುದಿಲ್ಲ, ಇದು ನನ್ನ ಕೊನೆ ತೀರ್ಮಾನ’ ‘ಥ್ಯಾಂಕ್ಸ್ ಗುಡ್​ ಬೈ’ ಎಂದು ಡೆತ್ ನೋಟ್​ ಬರೆದಿಟ್ಟು ತೇಜಸ್ ಆತ್ಮಹತ್ಯೆಗೆ ಶರಣಾಗಿದ್ದಾನೆ.

ಈ ಸಂಬಂಧ ಜಾಲಹಳ್ಳಿ ಪೊಲೀಸ್ ಠಾಣೆಗೆ ತೇಜಸ್ ಪೋಷಕರು ದೂರು ನೀಡಿದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

SCROLL FOR NEXT