ಥಳಿತಕ್ಕೊಳಗಾದ ಯುವಕ. 
ರಾಜ್ಯ

ಹುಬ್ಬಳ್ಳಿ: ಯುವಕನ ಬೆತ್ತಲೆಗೊಳಿಸಿ ಮನಬಂದಂತೆ ಥಳಿತ; ವಿಡಿಯೋ ವೈರಲ್

ಯುವಕನ ಬೆತ್ತಲೆಗೊಳಿಸಿದ ಗುಂಪೊಂದು ಮನಬಂದಂತೆ ಥಳಸಿರುವ ಘಟನೆಯೊಂದು ಬೆಂಡಿಗೇರಿ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಹುಬ್ಬಳ್ಳಿ: ಯುವಕನ ಬೆತ್ತಲೆಗೊಳಿಸಿದ ಗುಂಪೊಂದು ಮನಬಂದಂತೆ ಥಳಸಿರುವ ಘಟನೆಯೊಂದು ಬೆಂಡಿಗೇರಿ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಈ ಕುರಿತ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಘಟನೆ ಸಂಬಂಧ ಪೊಲೀಸರು ಐವರನ್ನು ಬಂಧನಕ್ಕೊಳಪಡಿಸಿದ್ದಾರೆ.

ಬಂಧಿತರನ್ನು ಪ್ರಜ್ವಲ್, ವಿನಾಯಕ್, ಗಣೇಶ್, ಸಚಿನ್ ಮತ್ತು ಮಂಜುನಾಥ್ ಎಂದು ಗುರ್ತಿಸಲಾಗಿದ್ದು, ಐವರನ್ನು ವಶಕ್ಕೆ ಪಡೆದಿರು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

ನಾಲ್ಕು ತಿಂಗಳ ಹಿಂದೆ ಹುಬ್ಬಳ್ಳಿಯ ಸೆಟ್ಲಮೆಂಟ್ ಪ್ರದೇಶದಲ್ಲಿ ಕೃತ್ಯ ನಡೆದಿದೆ ಎನ್ನಲಾಗುತ್ತಿದ್ದು, ಹಲ್ಲೆಗೊಳಗಾದ ಯುವಕ ದೂರು ನೀಡಿಲ್ಲ. ಅಮಾನುಷ ಕೃತ್ಯದ ಹಿನ್ನೆಲೆಯಲ್ಲಿ ಪೊಲೀಸರು ಸ್ವತಃ ತಾವೇ ಪ್ರಕರಣ ದಾಖಲಿಸಿಕೊಳ್ಳಲು ಚಿಂತನೆ ನಡೆಸಿದ್ದಾರೆ.

ಹಲ್ಲೆಗೊಳಗಾದ ಯುವಕ ಇನ್​​ಸ್ಟಾಗ್ರಾಂನಲ್ಲಿ ಬಂಧನಕ್ಕೊಳಗಾಗಿರುವ ಆರೋಪಿಯೊಬ್ಬನ ತಾಯಿಯ ಕುರಿತು ನಿಂದನಾತ್ಮಕ ಪೋಸ್ಟ್ ಹಾಕಿದ್ದು, ಈ ಹಿನ್ನೆಲೆಯಲ್ಲಿ ಬೆತ್ತಲೆಗೊಳಸಿ, ಥಳಿಸಿದ್ದಾರೆಂದು ಹೇಳಲಾಗುತ್ತಿದೆ. ವೈರಲ್ ಆಗಿರುವ ವಿಡಿಯೋದಲ್ಲಿ ಯುವಕನಿಗೆ ಥಳಿಸುತ್ತಿದ್ದವರು ಕನ್ನಡ ಮತ್ತು ಮರಾಠಿ ಭಾಷೆಯಲ್ಲಿ ಮಾತನಾಡುತ್ತಿರುವುದು ಕಂಡು ಬಂದಿದೆ.

ಘಟನೆ ಸಂಬಂಧ ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತ ಸಂತೋಷ್ ಬಾಬು ಅವರು ಪ್ರತಿಕ್ರಿಯೆ ನೀಡಿ, ಘಟನೆ ನಾಲ್ಕು ತಿಂಗಳ ಹಿಂದೆ ನಡೆದಿದ್ದು, ವಿಷಯ ಪೊಲೀಸರ ಗಮನಕ್ಕೆ ಬಂದ ತಕ್ಷಣ ಕ್ರಮ ಕೈಗೊಳ್ಳಲಾಗಿದೆ. ಬಂಧಿತರ ಹೇಳಿಕೆ ಆಧರಿಸಿ ಇನ್ನಷ್ಟು ಆರೋಪಿಗಳ ಬಂಧನವಾಗುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ.

ಇದೊಂದು ಅಮಾನವೀಯ ಘಟನೆಯಾಗಿದ್ದು, ಘಟನೆ ಕ್ರಮ ಕೈಗೊಳ್ಳಲಾಗಿದೆ. ಸಂತ್ರಸ್ತ ಯುವಕ ಸಂತ್ರಸ್ತೆ ಧಾರವಾಡ ಮೂಲದವರಾಗಿದ್ದು, ಶೀಘ್ರದಲ್ಲೇ ಆತನನ್ನು ಪತ್ತೆ ಹಚ್ಚಲಾಗುವುದು ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT