ಕಾಂಗ್ರೆಸ್ ನಾಯಕರ ಪ್ರತಿಭಟನೆ 
ರಾಜ್ಯ

ರಾಹುಲ್ ಗಾಂಧಿ ಸಂಸತ್ ಸದಸ್ಯತ್ವ ಅನರ್ಹತೆ: ಬಾಯಿಗೆ ಕಪ್ಪು ಪಟ್ಟಿ ಧರಿಸಿ ಕಾಂಗ್ರೆಸ್ ನಾಯಕರ ಮೌನ ಪ್ರತಿಭಟನೆ

'ಮೋದಿ ಉಪನಾಮ' ವಿವಾದ ಹಿನ್ನೆಲೆಯಲ್ಲಿ ಕೋರ್ಟ್ ಆದೇಶ ಬಂದ ನಂತರ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿಯವರ ಸಂಸದ ಸದಸ್ಯತ್ವ ರದ್ಧತಿ ಹಿಂದೆ ಬಿಜೆಪಿ ಪಿತೂರಿ ಇದೆ, ಬಿಜೆಪಿಯಿಂದ ಸೇಡಿನ ರಾಜಕಾರಣವಾಗುತ್ತಿದೆ ಎಂದು ಆರೋಪಿಸಿ ದೇಶಾದ್ಯಂತ ರಾಜ್ಯ ಕೇಂದ್ರಗಳಲ್ಲಿ ಕಾಂಗ್ರೆಸ್ ನಾಯಕರು ಮೌನ ಪ್ರತಿಭಟನೆ ಹಮ್ಮಿಕೊಂಡಿದ್ದು, ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಸಿಎಂ ಸಿದ್ದ

ಬೆಂಗಳೂರು: 'ಮೋದಿ ಉಪನಾಮ' ವಿವಾದ ಹಿನ್ನೆಲೆಯಲ್ಲಿ ಕೋರ್ಟ್ ಆದೇಶ ಬಂದ ನಂತರ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿಯವರ ಸಂಸದ ಸದಸ್ಯತ್ವ ರದ್ಧತಿ ಹಿಂದೆ ಬಿಜೆಪಿ ಪಿತೂರಿ ಇದೆ, ಬಿಜೆಪಿಯಿಂದ ಸೇಡಿನ ರಾಜಕಾರಣವಾಗುತ್ತಿದೆ ಎಂದು ಆರೋಪಿಸಿ ದೇಶಾದ್ಯಂತ ರಾಜ್ಯ ಕೇಂದ್ರಗಳಲ್ಲಿ ಕಾಂಗ್ರೆಸ್ ನಾಯಕರು ಮೌನ ಪ್ರತಿಭಟನೆ ಹಮ್ಮಿಕೊಂಡಿದ್ದು, ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ ಕೆ ಶಿವಕುಮಾರ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.

ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ ಕೆ ಶಿವಕುಮಾರ್, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಂದೀಪ್ ಸಿಂಗ್ ಸುರ್ಜೆವಾಲಾ, ಮಂತ್ರಿಗಳು, ಶಾಸಕರು ಭಾಗಿಯಾಗಿದ್ದರು. ಕಾಂಗ್ರೆಸ್ ನಾಯಕರು ಬಾಯಿಗೆ ಕಪ್ಪು ಪಟ್ಟಿ ಧರಿಸಿ ಕೇಂದ್ರ ಬಿಜೆಪಿ ಸರ್ಕಾರ ವಿರುದ್ಧ ಮೌನ ಪ್ರತಿಭಟನೆ ನಡೆಸಿದರು. 

ಕಡತಗಳನ್ನ ಫ್ರೀಡಂ ಪಾರ್ಕ್​ಗೆ ತಂದ ಅಧಿಕಾರಿಗಳು: ಕಾಂಗ್ರೆಸ್ ಫ್ರೀಡಂ ಪಾರ್ಕ್ ಬಳಿ ಮೌನ ಪ್ರತಿಭಟನೆ ನಡೆಸುತ್ತಿರುವ ಹಿನ್ನೆಲೆ ಅಧಿಕಾರಿಗಳು ಕಡತಗಳನ್ನ ಫ್ರೀಡಂ ಪಾರ್ಕ್​ಗೆ ತೆಗೆದುಕೊಂಡು ಬಂದಿದ್ದಾರೆ. ಈ ವೇಳೆ ಅಧಿಕಾರಿಗಳು ತಂದಿದ್ದ ಕಡತಗಳಿಗೆ ಡಿಸಿಎಂ ಡಿ.ಕೆ ಶಿವಕುಮಾರ್ ಸಹಿ ಹಾಕಿದ್ದಾರೆ. ಸಹಿ ಹಾಕಿದ ಬಳಿಕ ಕಡತಗಳನ್ನ ಅಧಿಕಾರಿಗಳು ಹೊತ್ತೊಯ್ದಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ವಿಯೆಟ್ನಾಂ ದೋಣಿ ದುರಂತ: 15 ಭಾರತೀಯ ಪ್ರವಾಸಿಗರು ಸಾವು; ತಮಿಳುನಾಡು, ಆಂಧ್ರ ಮಂದಿ ಸಮುದ್ರಪಾಲು; Video

HMT ಆದಾಗ ನಾನು ಹುಟ್ಟಿರ್ಲಿಲ್ಲ, ನೀವೇನು? ಅರಣ್ಯ ಭೂಮಿ ಅಂತ ದಾಖಲೆ ತೋರಿಸಿ ಕುಮಾರಸ್ವಾಮಿಗೆ ಈಶ್ವರ್ ಖಂಡ್ರೆ ಟಾಂಗ್

ಪಾಕ್ ಉಗ್ರರ ರಣಬೇಟೆ: ಬಲೂಚಿಸ್ತಾನದಲ್ಲಿ 88 ಭಯೋತ್ಪಾದಕರ ಹತ್ಯೆ!

'10 Snakes' ಪೋಸ್ಟ್ ಗೆ ಶ್ರೇಷ್ಠ ಅಯ್ಯರ್‌ ಲೈಕ್, ಭಾರಿ ವಿವಾದಕ್ಕೆ ಗುರಿಯಾದ ಶ್ರೇಯಸ್ ಅಯ್ಯರ್! ನೆಟ್ಟಿಗರು ತೀವ್ರ ಚರ್ಚೆ

INS Mahendragiri: ಪ್ರಾಜೆಕ್ಟ್ 17A; ಕೇವಲ 18 ತಿಂಗಳಲ್ಲಿ 6ನೇ ಯುದ್ಧನೌಕೆ ನೌಕಾಪಡೆಗೆ ಸೇರ್ಪಡೆ; Video