ಸಾಂದರ್ಭಿಕ ಚಿತ್ರ 
ರಾಜ್ಯ

ಡಿ.ಜೆ.ಹಳ್ಳಿ: ಮಾರಕಾಸ್ತ್ರಗಳಿಂದ ಕೊಚ್ಚಿ ರಿಯಲ್ ಎಸ್ಟೇಟ್ ಉದ್ಯಮಿಯ ಬರ್ಬರ ಹತ್ಯೆ

ಡಿಜೆ ಹಳ್ಳಿಯ ಕೆಎಚ್‌ಬಿ ಮುಖ್ಯರಸ್ತೆಯಲ್ಲಿ ರಿಯಲ್ ಎಸ್ಟೇಟ್ ಉದ್ಯಮಿ, ರೌಡಿ ಶೀಟರ್ ಕಪಿಲ್‌ನನ್ನು ದುಷ್ಕರ್ಮಿಗಳು ಮಂಗಳವಾರ ರಾತ್ರಿ ಕೊಲೆ ಮಾಡಿ ಪರಾರಿಯಾಗಿದ್ದಾರೆ.

ಬೆಂಗಳೂರು: ಡಿಜೆ ಹಳ್ಳಿಯ ಕೆಎಚ್‌ಬಿ ಮುಖ್ಯರಸ್ತೆಯಲ್ಲಿ ರಿಯಲ್ ಎಸ್ಟೇಟ್ ಉದ್ಯಮಿ, ರೌಡಿ ಶೀಟರ್ ಕಪಿಲ್‌ನನ್ನು ದುಷ್ಕರ್ಮಿಗಳು ಮಂಗಳವಾರ ರಾತ್ರಿ ಕೊಲೆ ಮಾಡಿ ಪರಾರಿಯಾಗಿದ್ದಾರೆ.

ಎರಡು ಬೈಕ್‌ನಲ್ಲಿ ಬಂದ ನಾಲ್ವರು, ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ. ಗಂಭೀರ ಸ್ಥಿತಿಯಲ್ಲಿ ಬಿದ್ದಿದ್ದ ಕಪಿಲ್‌ ಅವರನ್ನು ಸ್ಥಳೀಯರು ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗ ಮಧ್ಯದಲ್ಲಿ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಡಿಸಿಪಿ ಭೀಮಾಶಂಕರ್ ಗುಳೇದ್ ಭೇಟಿ ನೀಡಿ ಮಾಹಿತಿ ಪಡೆದರು.

ರಿಯಲ್ ಎಸ್ಟೇಟ್ ಉದ್ಯಮಿಯಾಗಿದ್ದ ಮೃತ ರೌಡಿಶೀಟರ್ ಕಪಿಲ್‌, 2014ರ ಕೊಲೆ ಪ್ರಕರಣದ ಆರೋಪಿಯಾಗಿದ್ದ. ಡಿ.ಜೆ. ಹಳ್ಳಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆಸ್ಪತ್ರೆಗೆ ಡಿಸಿಪಿ ಭೀಮಾಶಂಕರ ಗುಳೇದ್ ಭೇಟಿ ನೀಡಿ ಮಾಹಿತಿ ಪಡೆದಿದ್ದಾರೆ.

ರಾತ್ರಿ ಎಂಟು ಗಂಟೆ ಸುಮಾರಿಗೆ ಸ್ನೇಹಿತರನ್ನು ನೋಡಲು ಡಿ.ಜೆ.ಹಳ್ಳಿಗೆ ಕಪಿಲ್ ಬಂದಿದ್ದ. ಈ ವೇಳೆ ಎರಡು ಬೈಕ್‌ಗಳಲ್ಲಿ ಹೆಲ್ಮೆಟ್  ಧರಿಸಿ ದುಷ್ಕರ್ಮಿಗಳು ಬಂದಿದ್ದರು. ಬೈಕ್‌ವೊಂದರ ನಂಬರ್ ಪ್ಲೇಟ್ ಮೇಲೆ ಅನುಮಾನ ಪಟ್ಟ ಕಪಿಲ್‌, ನಂಬರ್ ಪ್ಲೇಟ್ ನೋಡುವಂತೆ ಸ್ನೇಹಿತನನ್ನು ಕಳುಹಿಸಿದ್ದಾನೆ.

ಸ್ನೇಹಿತ ಹೋಗುತ್ತಿದ್ದಂತೆ ಕಪಿಲ್ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ. ಸುಮಾರು ನೂರು ಮೀಟರ್ ಅಟ್ಟಿಸಿಕೊಂಡು ಹೋಗಿ ಕಪಿಲ್‌ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಲಾಗಿದೆ. ಇದರಿಂದ ಗಂಭೀರವಾಗಿ ಗಾಯಗೊಂಡಿದ್ದ ಕಪಿಲ್‌, ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಡಿಜೆ ಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT