ತಿರುಪತಿಯಲ್ಲಿ ಇಸ್ರೋ ಸಿಬ್ಬಂದಿಗಳು. 
ರಾಜ್ಯ

ಚಂದ್ರಯಾನ-3 ಉಡಾವಣೆಗೆ ಇಸ್ರೋ ಸಜ್ಜು: ಪ್ರತಿಕೃತಿ ಜೊತೆ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ವಿಜ್ಞಾನಿಗಳ ತಂಡ!

ಇಸ್ರೋದ ಮಹತ್ವಾಕಾಂಕ್ಷಿ ಯೋಜನೆಯಾದ ಚಂದ್ರಯಾನವು ತನ್ನ ಮೂರನೇ ದಂಡಯಾತ್ರೆಯಲ್ಲಿ ಚಂದ್ರನ ಕಡೆಗೆ ಹಾರಲು ಸಿದ್ಧವಾಗಿದ್ದು, ಈ ಮಧ್ಯೆ ಚಂದ್ರಯಾನ-3 ಉಪಗ್ರಹ ನೌಕೆಯ ಪ್ರತಿಕೃತಿ ಜೊತೆ ಇಸ್ರೋ ವಿಜ್ಞಾನಿಗಳು ಹಾಗೂ ಸಿಬ್ಬಂದಿಗಳ ತಂಡ ತಿರುಪತಿ ತಿಮ್ಮಪ್ಪನ ಸನ್ನಿಧಾನಕ್ಕೆ ಭೇಟಿ ನೀಡಿದ್ದು, ವಿಶೇಷ ಪೂಜೆ ಸಲ್ಲಿಸಿದೆ.

ತಿರುಪತಿ: ಇಸ್ರೋದ ಮಹತ್ವಾಕಾಂಕ್ಷಿ ಯೋಜನೆಯಾದ ಚಂದ್ರಯಾನವು ತನ್ನ ಮೂರನೇ ದಂಡಯಾತ್ರೆಯಲ್ಲಿ ಚಂದ್ರನ ಕಡೆಗೆ ಹಾರಲು ಸಿದ್ಧವಾಗಿದ್ದು, ಈ ಮಧ್ಯೆ ಚಂದ್ರಯಾನ-3 ಉಪಗ್ರಹ ನೌಕೆಯ ಪ್ರತಿಕೃತಿ ಜೊತೆ ಇಸ್ರೋ ವಿಜ್ಞಾನಿಗಳು ಹಾಗೂ ಸಿಬ್ಬಂದಿಗಳ ತಂಡ ತಿರುಪತಿ ತಿಮ್ಮಪ್ಪನ ಸನ್ನಿಧಾನಕ್ಕೆ ಭೇಟಿ ನೀಡಿದ್ದು, ವಿಶೇಷ ಪೂಜೆ ಸಲ್ಲಿಸಿದೆ.

ಆಂಧ್ರಪ್ರದೇಶದ ತಿರುಪತಿಯಲ್ಲಿರುವ ಬಾಲಾಜಿಯ ದೇಗುಲಕ್ಕೆ ಆಗಮಿಸಿದ ಇಸ್ರೋ ವಿಜ್ಞಾನಿಗಳ ತಂಡ ಮಿನಿಯೇಚರ್ ಮಾಡೆಲ್ ಜೊತೆ ತಿರುಪತಿ ತಿಮ್ಮಪ್ಪನ ದರ್ಶನ ಪಡೆದರು.

ಇಸ್ರೋದ ಮಹತ್ವಾಕಾಂಕ್ಷಿ ಯೋಜನೆಯಾದ ಚಂದ್ರಯಾನ-3 ಯೋಜನೆಗೆ 1 ದಿನವಷ್ಟೇ ಬಾಕಿ ಇದ್ದು, 25 ಗಂಟೆ 30 ನಿಮಿಷಗಳ ಕೌಂಟ್‌ಡೌನ್‌ ಇಂದು ಮಧ್ಯಾಹ್ನ 1 ಗಂಟೆಗೆ ಆರಂಭವಾಗಲಿದೆ. ಇದಕ್ಕೆ ಸಂಬಂಧಿಸಿದಂತೆ ಬುಧವಾರ ಸಿದ್ಧತಾ ಪರಿಶೀಲನೆಯನ್ನು ಇಸ್ರೋ ಮುಗಿಸಿದ್ದು, ಉಡ್ಡಯನಕ್ಕೆ ಅನುಮತಿ ನೀಡಿದೆ.

ಶುಕ್ರವಾರ ಮಧ್ಯಾಹ್ನ 2 ಗಂಟೆ 35 ನಿಮಿಷ 17 ಸೆಕೆಂಡ್‌ಗೆ ಚಂದ್ರಯಾನ ನೌಕೆಯನ್ನು ಹೊತ್ತ ರಾಕೆಟ್‌ ಶ್ರೀಹರಿಕೋಟಾದಿಂದ ಉಡಾವಣೆಗೊಳ್ಳಲಿದೆ. ಈ ಉಡಾವಣೆಗೆ ದೇಶೀಯವಾಗಿ ನಿರ್ಮಾಣ ಮಾಡಲಾದ ಲಾಂಚಿಂಗ್‌ ವಾಹನ ಬಳಸಲಾಗುತ್ತಿದ್ದು, ಲ್ಯಾಂಡರ್‌ ಮತ್ತು ರೋವರ್‌ಗಳನ್ನು ಸಹ ದೇಶೀಯವಾಗಿ ತಯಾರಿಸಲಾಗಿದೆ. ಲ್ಯಾಂಡರ್‌ ಆಗಸ್ಟ್‌ನಲ್ಲಿ ಚಂದ್ರನ ಮೇಲೆ ಇಳಿಯಲಿದೆ. ಈ ಉಡಾವಣೆಯನ್ನು ಇಸ್ರೋದ ಅಧಿಕೃತ ಯೂಟ್ಯೂಬ್‌ ಚಾನಲ್‌ನಲ್ಲಿ ವೀಕ್ಷಿಸಬಹುದು ಎಂದು ಇಸ್ರೋ ಹೇಳಿದೆ.

ಇದು ಚಂದ್ರಯಾನ-2 ಯೋಜನೆಯ ಮುಂದುವರೆದ ಭಾಗವಾದ ಕಾರಣ ಈ ಯೋಜನೆಯ ಆರ್ಬಿಟರನ್ನು ಕೈಬಿಡಲಾಗಿದೆ. ಚಂದ್ರನ ದಕ್ಷಿಣ ಧ್ರುವದಲ್ಲಿ ನೌಕೆಯನ್ನು ಇಳಿಸಲು ಇಸ್ರೋ ಸಿದ್ಧತೆ ನಡೆಸಿದ್ದು, ಈ ಬಾರಿ ಸಕಲ ಪೂರ್ವ ತಯಾರಿಯೊಂದಿಗೆ ನೌಕೆಯನ್ನು ಸಿದ್ಧಪಡಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

ದ್ವಿಶತಕ ಮಿಸ್: ಗಿಲ್ ತಪ್ಪಿನಿಂದ ರನ್ ಔಟ್ ಆಗಿ ತಲೆ ಚಚ್ಚಿಕೊಂಡ ಜೈಸ್ವಾಲ್; ಮೈದಾನ ತೊರೆಯುವಂತೆ ಅಂಪೈರ್ ತಾಕೀತು, Video!

ಅಧಿಕೃತವಾಗಿ 'ಹೊಸ ಗರ್ಲ್‌ ಫ್ರೆಂಡ್‌' ಪರಿಚಯಿಸಿದ ಹಾರ್ದಿಕ್ ಪಾಂಡ್ಯ! Video

2nd Test, Day 2: ವಿಂಡೀಸ್ ವಿರುದ್ಧ ಶತಕ, ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಶುಭ್ ಮನ್ ಗಿಲ್!

ಮಂಗಳೂರು: Muslim ಕ್ಯಾಬ್ ಚಾಲಕನಿಗೆ 'ಭಯೋತ್ಪಾದಕ' ಎಂದು ಕರೆದಿದ್ದ ಕೇರಳ ನಟನ ಬಂಧನ!

SCROLL FOR NEXT