ಡಿಕೆ ಶಿವಕುಮಾರ್ 
ರಾಜ್ಯ

ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧದ ಅಕ್ರಮ ಆಸ್ತಿ ಪ್ರಕರಣ: ಜುಲೈ 21ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್ 

ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಗುರುವಾರ ಜುಲೈ 21 ಕ್ಕೆ ಮುಂದೂಡಿದೆ.

ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಗುರುವಾರ ಜುಲೈ 21 ಕ್ಕೆ ಮುಂದೂಡಿದೆ. ಅಂದು ಅವರ ವಿರುದ್ಧದ ಆರೋಪಗಳಿಗೆ ಅವರ ಪರ ವಕೀಲರು ಕೇಂದ್ರ ತನಿಖಾ ದಳ (ಸಿಬಿಐ)  ಉತ್ತರವನ್ನು ಸಲ್ಲಿಸಬೇಕು. ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ತಮ್ಮ ವಿರುದ್ಧ ಸಿಬಿಐ ದಾಖಲಿಸಿರುವ ಎಫ್‌ಐಆರ್  ರಾಜ್ಯ ಕಾಂಗ್ರೆಸ್ ಅಧ್ಯಕ್ಷರು ಪ್ರಶ್ನಿಸಿದ್ದಾರೆ. 

ಮುಚ್ಚಿದ ಲಕೋಟೆಯ ವಿಷಯಗಳನ್ನು ಬಹಿರಂಗಪಡಿಸದಂತೆ ನ್ಯಾಯಾಲಯ ಇಂದು ಸಿಬಿಐಗೆ ತಡೆ ನೀಡಿತು. ಸಿಬಿಐ ವಕೀಲ ಪಿ ಪ್ರಸನ್ನ ಕುಮಾರ್ ಅವರು ಆಪಾದಿತನ ಅಕ್ರಮ ಆಸ್ತಿಯ ಅಂದಾಜು ಮೊತ್ತವನ್ನು ನ್ಯಾಯಾಲಯಕ್ಕೆ ಸಲ್ಲಿಸಲು ಬಯಸಿದ್ದರು. ಆದಾಗ್ಯೂ, ಕೇಂದ್ರೀಯ ತನಿಖಾ ಸಂಸ್ಥೆ ಈಗಾಗಲೇ ಮುಚ್ಚಿದ ಲಕೋಟೆಯಲ್ಲಿ ಈ  ವಿವರಗಳನ್ನು ನ್ಯಾಯಾಲಯಕ್ಕೆ ಸಲ್ಲಿಸಿದೆ ಎಂದು ನ್ಯಾಯಮೂರ್ತಿ ಕೆ ನಟರಾಜನ್ ಹೇಳಿದರು. 

ಶಿವಕುಮಾರ್  2013ರಿಂದ 2018ರ ನಡುವೆ ಅಕ್ರಮ ಆಸ್ತಿ ಹೊಂದಿದ್ದಾರೆ ಎಂದು ಸಿಬಿಐ ಆರೋಪಿಸಿದೆ. ಈ ಸಂಬಂಧ ಸೆಪ್ಟೆಂಬರ್ 3 ರಂದು ಸಿಬಿಐ ಎಫ್ ಐಆರ್ ದಾಖಲಿಸಿತ್ತು. ಇದನ್ನು ಶಿವಕುಮಾರ್ 2021ರಲ್ಲಿ  ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದರು. ನಮೂನೆ 126 ಮಾದರಿಯಲ್ಲಿ ಸಂಗ್ರಹಿಸಲಾದ 11 ಸಂಪುಟ, 2,412 ಪುಟಗಳ ವಿವರಗಳನ್ನು ಹೊರತುಪಡಿಸಿ 596 ಹೆಚ್ಚುವರಿ ದಾಖಲೆಗಳನ್ನು ಸಂಗ್ರಹಿಸಿರುವುದಾಗಿ ಸಿಬಿಐ ನ್ಯಾಯಾಲಯಕ್ಕೆ ಸಲ್ಲಿಸಿದೆ.

ಈ ಪ್ರಕರಣದಲ್ಲಿ ಎಂಭತ್ನಾಲ್ಕು ಸಾಕ್ಷಿಗಳನ್ನು ಕೂಡ ವಿಚಾರಣೆಗೆ ಒಳಪಡಿಸಲಾಗಿದೆ. ಆದಾಯ ತೆರಿಗೆ ಇಲಾಖೆಯು 2017 ರಲ್ಲಿ ಶಿವಕುಮಾರ್ ಅವರ ಕಚೇರಿಗಳು ಮತ್ತು ನಿವಾಸಗಳಲ್ಲಿ ಶೋಧ ಮತ್ತು ಜಪ್ತಿ ಕಾರ್ಯಾಚರಣೆ ನಡೆಸಿತ್ತು. ಅದರ ಆಧಾರದ ಮೇಲೆ ಜಾರಿ ನಿರ್ದೇಶನಾಲಯ ಕಾಂಗ್ರೆಸ್ ನಾಯಕನ ವಿರುದ್ಧ ತನ್ನದೇ ಆದ ತನಿಖೆ ಆರಂಭಿಸಿದ್ದು, ಇಡಿ ತನಿಖೆಯ ಆಧಾರದ ಮೇಲೆ ಸಿಬಿಐ ಅವರ ವಿರುದ್ಧ ಎಫ್‌ಐಆರ್ ದಾಖಲಿಸಲು ರಾಜ್ಯ ಸರ್ಕಾರದಿಂದ ಅನುಮತಿ ಕೋರಿತ್ತು.

ಸೆಪ್ಟೆಂಬರ್ 25, 2019 ರಂದು ಸರ್ಕಾರದಿಂದ ಮಂಜೂರಾತಿ ನೀಡಲಾಯಿತಾದರೂ ಒಂದು ವರ್ಷದ ನಂತರ ಎಫ್‌ಐಆರ್ ದಾಖಲಿಸಲಾಯಿತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT