ಸಂಗ್ರಹ ಚಿತ್ರ 
ರಾಜ್ಯ

ಪ್ರತಿ ಕ್ವಿಂಟಾಲ್ ಉಂಡೆ ಕೊಬ್ಬರಿಗೆ 1,250 ರೂ. ಪ್ರೋತ್ಸಾಹ ಧನ: ರಾಜ್ಯ ಸರ್ಕಾರ ಘೋಷಣೆ

ಸಂಕಷ್ಟದಲ್ಲಿರುವ ತೆಂಗು ಬೆಳೆಗಾರರ ನೆರವಿಗಾಗಿ ರಾಜ್ಯ ಸರ್ಕಾರ ಧಾವಿಸಿದ್ದು, ಪ್ರತಿ ಕ್ವಿಂಟಾಲ್ ಉಂಡೆ ಕೊಬ್ಬರಿಗೆ 1,250 ರೂಪಾಯಿ ಬೆಂಬಲ ಬೆಲೆ ನೀಡುವುದಾಗಿ ಘೋಷಣೆ ಮಾಡಿದೆ.

ಬೆಂಗಳೂರು: ಸಂಕಷ್ಟದಲ್ಲಿರುವ ತೆಂಗು ಬೆಳೆಗಾರರ ನೆರವಿಗಾಗಿ ರಾಜ್ಯ ಸರ್ಕಾರ ಧಾವಿಸಿದ್ದು, ಪ್ರತಿ ಕ್ವಿಂಟಾಲ್ ಉಂಡೆ ಕೊಬ್ಬರಿಗೆ 1,250 ರೂಪಾಯಿ ಬೆಂಬಲ ಬೆಲೆ ನೀಡುವುದಾಗಿ ಘೋಷಣೆ ಮಾಡಿದೆ.

ಸದನ ಸಮಾವೇಶಗೊಂಡಾಗ ಕೊಬ್ಬರಿ ಬೆಲೆ ಕುಸಿತ ಚರ್ಚೆಗೆ ಸಂಬಂಧಿಸಿದಂತೆ ಉತ್ತರ ನೀಡಿದ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಅವರು, ಇಂದಿನಿಂದ ಕೊಬ್ಬರಿ ಖರೀದಿಗೆ 1,250 ರೂ.ಪ್ರೋತ್ಸಾಹ ಧನ ನೀಡಲಾಗುವುದು ಎಂದು ಹೇಳಿದರು. ಇದೇ ವೇಳೆ ಈ ಹಿಂದೆ ಬೆಂಬಲ ಬೆಲೆ ಯೋಜನೆಯಡಿ ಕೊಬ್ಬರಿ ಮಾರಾಟ ಮಾಡಿದವರಿಗೆ ಇದು ಅನ್ವಯವಾಗುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಕೇಂದ್ರ ಸರ್ಕಾರವು ಪ್ರತೀ ಕ್ವಿಂಟಾಲ್ ಉಂಡೆ ಕೊಬ್ಬರಿಗೆ 11,750 ರೂ. ಬೆಂಬಲ ಬೆಲೆ ನಿಗದಿ ಪಡಿಸಿದೆ. ಇದರ ಜೊತೆಗೆ ರಾಜ್ಯಸರ್ಕಾರ 1,250 ರೂ. ಪ್ರೋತ್ಸಾಹ ಧನ ನೀಡಲಿದೆ ಎಂದು ಹೇಳಿದರು.

ನಿನ್ನೆಯವರೆಗೆ ಕೇಂದ್ರ ಸರ್ಕಾರದ ಏಜೆನ್ಸಿ ನ್ಯಾಪೆಡ್ ಮೂಲಕ ರಾಜ್ಯ ಏಜೆನ್ಸಿ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳದ ಮೂಲಕ 45,038 ಮೆಟ್ರಿಕ್ ಟನ್ ಉಂಡೆ ಕೊಬ್ಬರಿ ಖರೀದಿಸಲಾಗಿದೆ. 2022-23ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ತುಮಕೂರು, ಹಾಸನ, ಚಿಕ್ಕಮಗಳೂರು, ಚಿತ್ರದುರ್ಗ, ಮಂಡ್ಯ, ಮೈಸೂರು, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ 6.43 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ 26.06 ಲಕ್ಷ ಮೆಟ್ರಿಕ್ ಟನ್ ತೆಂಗು ಹಾಗೂ ಕೊಬ್ಬರಿ ಉತ್ಪಾದನೆಯಾಗಿದೆ. ಎಂಎಸ್ಸಿ ಅಡಿ ಕೊಬ್ಬರಿ ಖರೀದಿಗೆ 37,632 ರೈತರು ನೋಂದಣಿ ಮಾಡಿಕೊಂಡಿದ್ದಾರೆ. ನಿನ್ನೆಯವರೆಗೆ 31,641 ರೈತರು ಪ್ರಯೋಜನ ಪಡೆದಿದ್ದಾರೆ. ಜುಲೈ 26ರವರೆಗೂ ಖರೀದಿ ಪ್ರಕ್ರಿಯೆ ಚಾಲನೆಯಲ್ಲಿರುತ್ತದೆ ಎಂದರು.

ವಿವಿಧ ಮಾರುಕಟ್ಟೆಗಳಲ್ಲಿ ಪ್ರತಿ ಕ್ವಿಂಟಾಲ್ ಕೊಬ್ಬರಿಗೆ 7,700 ರಿಂದ 8,020 ರೂ.ವರೆಗೆ ಮಾರಾಟವಾಗುತ್ತಿದೆ. ರಾಜ್ಯ ಸರ್ಕಾರವು ಕೊಬ್ಬರಿ ಖರೀದಿ ಪ್ರಮಾಣ ಹೆಚ್ಚಳ ಹಾಗೂ ಖರೀದಿ ಅವ ವಿಸ್ತರಣೆಗೆ ಕೇಂದ್ರ ಸರ್ಕಾರವನ್ನು ಕೋರಿದೆ ಎಂದು ಹೇಳಿದರು.

ಕೇಂದ್ರ ಸರ್ಕಾರ ಖರೀದಿ ಪ್ರಮಾಣ ಹೆಚ್ಚಳ ಹಾಗೂ ಅವ ವಿಸ್ತರಣೆಗೆ ಅನುಮತಿ ನೀಡಿದ ಬಳಿಕ ನೋಂದಾಯಿಸುವವರಿಗೂ ಪ್ರೋತ್ಸಾಹ ಧನ ದೊರೆಯಲಿದೆ ಎಂದು ಸ್ಪಷ್ಟಪಡಿಸಿದರು.

ರಾಜ್ಯ ಸರ್ಕಾರದಿಂದ ಇದುವರೆಗೆ 1,000 ರೂ. ಮಾತ್ರ ಪ್ರೋತ್ಸಾಹ ಧನ ನೀಡಲಾಗಿತ್ತು. ಇದೇ ಮೊದಲ ಬಾರಿಗೆ 1,250 ರೂ. ಪ್ರೋತ್ಸಾಹ ಧನ ಕೊಡಲಾಗುತ್ತಿದೆ ಎಂದರು.

ಕೇಂದ್ರ ಸರ್ಕಾರಕ್ಕೆ ರಾಜ್ಯ ಸರ್ಕಾರವು ಬೆಂಬಲ ಬೆಲೆ ಯೋಜನೆಯಡಿ ಪ್ರತೀ ಕ್ವಿಂಟಾಲ್ ಕೊಬ್ಬರಿಗೆ 16,500 ರೂ.ವರೆಗೆ ಹೆಚ್ಚಿಸಬೇಕು. ಉತ್ಪಾದನೆಯ ಶೇ.25 ರಿಂದ ಶೇ.50ರಷ್ಟು ಖರೀದಿಗೆ ಅವಕಾಶ ನೀಡುವಂತೆ ಮನವಿ ಮಾಡಿದ್ದೇವೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

BMTC ಬಸ್ ಚಾಲಕನಿಗೆ ಫಿಡ್ಸ್, ಚಿನ್ನಸ್ವಾಮಿ ಕ್ರೀಡಾಂಗಣ ರಸ್ತೆಯಲ್ಲಿ ಸರಣಿ ಅಪಘಾತ

ಬೆಂಗಳೂರು: ರಾತ್ರಿಯಿಡೀ ಸುರಿದ ಮಳೆಯಿಂದ ಹಲವೆಡೆ ಜಲಾವೃತ, ಸಂಚಾರ ದಟ್ಟಣೆ, ಇಂದಿನ IMD ವರದಿ!

'ನಂಗೇ ಕೊಡಿ ಎಂದು ನಾನೇನು ಕೇಳಿಲ್ಲ..': ನೊಬೆಲ್ ಶಾಂತಿ ಪ್ರಶಸ್ತಿ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತು!

SCROLL FOR NEXT