ಕಾರು ಅಡ್ಡಗಟ್ಟಿದ ಆರೋಪಿಗಳು 
ರಾಜ್ಯ

ಬೆಂಗಳೂರು: ಹಾರ್ನ್ ಮಾಡಿದ್ದಕ್ಕೆ ಕಾರು ಚಾಲಕನ ಮೇಲೆ ಹಲ್ಲೆ; ಮೂವರು ಬೈಕ್ ಸವಾರರ ಬಂಧನ

ರಸ್ತೆಯಲ್ಲಿ ಅಡ್ಡಾದಿಡ್ಡಿ ತೆರಳುತ್ತಿದ್ದವರಿಗೆ ಹಾರ್ನ್ ಮಾಡಿ ದಾರಿ ಕೇಳಿದ್ದಕ್ಕೆ ಕಾರನ್ನು ಅಡ್ಡಗಟ್ಟಿ ಹಲ್ಲೆ ಮಾಡಿದ ಘಟನೆ ಬೆಂಗಳೂರಿನ ವರ್ತೂರು ಬಳಿ ನಡೆದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಬೈಕ್ ಸವಾರರನ್ನು ಬಂಧಿಸಲಾಗಿದೆಎಂದು ಪೊಲೀಸರು ತಿಳಿಸಿದ್ದಾರೆ.

ಬೆಂಗಳೂರು: ರಸ್ತೆಯಲ್ಲಿ ಅಡ್ಡಾದಿಡ್ಡಿ ತೆರಳುತ್ತಿದ್ದವರಿಗೆ ಹಾರ್ನ್ ಮಾಡಿ ದಾರಿ ಕೇಳಿದ್ದಕ್ಕೆ ಕಾರನ್ನು ಅಡ್ಡಗಟ್ಟಿ ಹಲ್ಲೆ ಮಾಡಿದ ಘಟನೆ ಬೆಂಗಳೂರಿನ ವರ್ತೂರು ಬಳಿ ನಡೆದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಬೈಕ್ ಸವಾರರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಹಲ್ಲೆಗೊಳಗಾದ ಯುವಕ ನೀಡಿದ ದೂರಿನ ಮೇರೆಗೆ ಎಫ್‌ಐಆರ್ ದಾಖಲಿಸಲಾಗಿದ್ದು, ತನಿಖೆ ನಡೆಯುತ್ತಿದೆ. ನಮ್ಮ ಕಣ್ಗಾವಲಿನಲ್ಲಿ ಇಂತಹ ಗೂಂಡಾಗಿರಿಗೆ ಅವಕಾಶವಿರುವುದಿಲ್ಲ ಮತ್ತು ತೀವ್ರ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎಂದು ಪೊಲೀಸರು ಎಚ್ಚರಿಕೆ ನೀಡಿದ್ದಾರೆ. 

ಏನಿದು ಘಟನೆ: ವರ್ತೂರು ಬಳಿಯ ರಸ್ತೆಯಲ್ಲಿ ಅಡ್ಡಾದಿಡ್ಡಿಯಾಗಿ ಬೈಕ್ ಚಾಲನೆ ಮಾಡುತ್ತಿದ್ದರಿಂದ ಮುಂದೆ ಸಾಗಲು ಆಗದ ಕಾರು ಚಾಲಕ ಹಾರ್ನ್ ಮಾಡಿದ್ದಾನೆ. ಇದೇ ಕಾರಣಕ್ಕೆ ಸಿಟ್ಟಾದ ಪುಂಡರ ಗುಂಪೊಂದು ಕಾರನ್ನು ಹಿಂಬಾಲಿಸಿ ಅಡ್ಡಗಟ್ಟಿ ಕಾರು ಚಾಲಕನ ಜೊತೆಗೆ ಜಗಳ ತೆಗೆದು ಗಲಾಟೆ ಮಾಡಿದ್ದಾರೆ ಎನ್ನಲಾಗಿದೆ. ಇನ್ನೂ ಈ ಗ್ಯಾಂಗ್ ಗುಂಜೂರು ಗೇಟ್ ನ ಅಪಾರ್ಟ್ ಮೆಂಟ್ ಬಳಿಯಲ್ಲಿ ಚಾಲಕನ ಜೊತೆಗೆ ಗಲಾಟೆ ತೆಗೆದಿದ್ದು, ಆ ಬಳಿಕ ಕಾರಿನ ಗ್ಲಾಸ್ ಒಡೆದು ಚಾಲಕನ ಮೇಲೆ ಹಲ್ಲೆ ಮಾಡಿ ಪರಾರಿಯಾಗಿದ್ದಾರೆ. ಈ ಎಲ್ಲಾ ದೃಶ್ಯಗಳು ಕಾರು ಚಾಲಕನ ಮೊಬೈಲ್ ಹಾಗೂ ಅಪಾರ್ಟ್ ಮೆಂಟ್ ಬಳಿಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಸಿಟಿಜನ್ಸ್ ಮೂವ್‌ಮೆಂಟ್, ಈಸ್ಟ್ ಬೆಂಗಳೂರು ಸಂಘಟನೆಗಳು ಈ ವಿಷಯವನ್ನು ಪೊಲೀಸರ ಗಮನಕ್ಕೆ ತಂದಿದ್ದವು. ಬೆಂಗಳೂರಿನಲ್ಲಿ ಏನಾಗುತ್ತಿದೆ? ಡಿಜಿಪಿ ರಜೆಯಲ್ಲಿದ್ದೀರಾ? ಬೆಂಗಳೂರಿನ ಐಟಿ ಹೃದಯಭಾಗದಲ್ಲಿ ಏನು ನಡೆಯುತ್ತಿದೆ ಎಂದು ಬೈಕ್‌ಗಳಲ್ಲಿ ಬಂದ ಗೂಂಡಾಗಳು ಹಾಡಹಗಲೇ ಐಟಿ ಉದ್ಯೋಗಿಗಳ ಮೇಲೆ ದೌರ್ಜನ್ಯ ನಡೆಸುತ್ತಿದ್ದಾರೆ. ಇದು ಸಂಪೂರ್ಣ ಅಕ್ರಮವಾಗಿದೆ. ಡಿಸಿಎಂ ಡಿ.ಕೆ. ಶಿವಕುಮಾರ್ ಸರ್, ಇದರಿಂದ ನೀವು ಬ್ರಾಂಡ್ ಬೆಂಗಳೂರು ಕಟ್ಟಲು ಸಾಧ್ಯವಿಲ್ಲ ಎಂದು ಟ್ವೀಟ್ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದರು.

ಭವಿಷ್ಯದಲ್ಲಿ ಇಂತಹ ಘಟನೆ ಕಂಡುಬಂದರೆ ಸಹಾಯವಾಣಿ 112 ಕರೆ ಮಾಡಿ ಎಂದು ಪೊಲೀಸರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

SCROLL FOR NEXT