ಕೃಷ್ಣ ಬೈರೇಗೌಡ, 
ರಾಜ್ಯ

ಬಿಜೆಪಿ ಆದೇಶ ತಡೆ ಹಿಡಿದ ಕಾಂಗ್ರೆಸ್ ಸರ್ಕಾರ: ಆರ್‌ಎಸ್‌ಎಸ್‌ ಅಂಗಸಂಸ್ಥೆಗೆ ನೀಡಿದ್ದ 35 ಎಕರೆ ಗೋಮಾಳ ವಾಪಸ್!

ಆರ್‌ಎಸ್‍ಎಸ್‍ ಅಂಗಸಂಸ್ಥೆಗಳಿಗೆ ಬಿಜೆಪಿ ಸರ್ಕಾರ ಮಂಜೂರು ಮಾಡಿದ್ದ ನೂರಾರು ಎಕರೆ ಸರ್ಕಾರಿ ಭೂಮಿಯನ್ನು ವಾಪಸ್ ಪಡೆಯಲು ಸರ್ಕಾರ ಕ್ರಮ ತೆಗೆದುಕೊಂಡಿದೆ

ಬೆಂಗಳೂರು: ಆರ್‌ಎಸ್‍ಎಸ್‍ ಅಂಗಸಂಸ್ಥೆಗಳಿಗೆ ಬಿಜೆಪಿ ಸರ್ಕಾರ ಮಂಜೂರು ಮಾಡಿದ್ದ ನೂರಾರು ಎಕರೆ ಸರ್ಕಾರಿ ಭೂಮಿಯನ್ನು ವಾಪಸ್ ಪಡೆಯಲು ಸರ್ಕಾರ ಕ್ರಮ ತೆಗೆದುಕೊಂಡಿದೆ

ಈ ಸಂಬಂಧ ವಿಧಾನಸೌಧದಲ್ಲಿ ಮಾಹಿತಿ ನೀಡಿದ ಕಂದಾಯ ಸಚಿವ ಕೃಷ್ಣ ಬೈರೇಗೌಡ, ಆರೆಸ್ಸೆಸ್‌ಗೆ ಸೇರಿದ ಜನಸೇವಾ ಟ್ರಸ್ಟ್‌ಗೆ ಬೆಂಗಳೂರು ದಕ್ಷಿಣ ತಾಲ್ಲೂಕಿನ ಕುರುಬರಹಳ್ಳಿ ಗ್ರಾಮದ ತಾವರೆಕೆರೆ ಹೋಬಳಿಯಲ್ಲಿ ಹಿಂದಿನ ಬಿಜೆಪಿ ಸರ್ಕಾರ 35 ಎಕರೆ 33 ಗುಂಟೆ ಗೋಮಾಳ ಜಮೀನು ನೀಡಿತ್ತು. ಕಳೆದ ಸೆಪ್ಟೆಂಬರ್‌ನಲ್ಲಿ ಗೋಮಾಳ ಭೂಮಿಯನ್ನು ಬಿಜೆಪಿ ಸರ್ಕಾರ ಜನಸೇವಾ ಟ್ರಸ್ಟ್‌ಗೆ ನೀಡಿತ್ತು. 2023ರ ಮೇ 22ರಂದು ಜಿಲ್ಲಾಧಿಕಾರಿ ಮಂಜೂರು ಆದೇಶ ಹೊರಡಿಸಿದ್ದರು. ಗೋಮಾಳವು ಜಾನುವಾರುಗಳ ಮೇವಿಗಾಗಿ ಮೀಸಲಿರಿಸಿದ ಸರ್ಕಾರಿ ಭೂಮಿಯಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಕಳೆದ ಮೂರು ವರ್ಷಗಳಲ್ಲಿ ಬೆಂಗಳೂರು ದಕ್ಷಿಣ ತಾಲ್ಲೂಕಿನಲ್ಲಿ ಎಷ್ಟು ಸರ್ಕಾರಿ ಜಮೀನನ್ನು ಸಂಘ ಸಂಸ್ಥೆಗಳಿಗೆ, ಇಲಾಖೆಗಳಿಗೆ ಮತ್ತು ವಿವಿಧ ಉದ್ದೇಶಗಳಿಗೆ ನೀಡಲಾಗಿದೆ ಎಂದು ಬಿಜೆಪಿ ಶಾಸಕ ಎಸ್‌.ಟಿ. ಸೋಮಶೇಖರ್‌ ಕೇಳಿದ ಪ್ರಶ್ನೆಗೆ ಲಿಖಿತ ಉತ್ತರ ನೀಡಿರುವ ಕಂದಾಯ ಸಚಿವ ಕೃಷ್ಣ ಬೈರೇಗೌಡ, ಜನಸೇವಾ ಟ್ರಸ್ಟ್‌ಗೆ 35 ಎಕರೆ 33 ಗುಂಟೆ ಮಂಜೂರು ಮಾಡುವುದನ್ನು ತಡೆಹಿಡಿಯಲಾಗಿದೆ ಎಂಬ ಮುಖ್ಯಮಂತ್ರಿಯವರ ಸೂಚನೆಯನ್ನು ಉಲ್ಲೇಖಿಸಿದ್ದಾರೆ.

ತರಾತುರಿಯಲ್ಲಿ ಜಮೀನು ಮಂಜೂರು ಮಾಡಿರುವ ಎಲ್ಲ ಪ್ರಕರಣಗಳನ್ನು ನಾವು ಪರಿಶೀಲಿಸುತ್ತಿದ್ದೇವೆ. ಗೋಶಾಲೆಯ ಉದ್ದೇಶಕ್ಕಾಗಿ ಒಂದು ಲಾಭರಹಿತ ಸಂಸ್ಥೆಗೆ 35 ಎಕರೆ ಜಮೀನು ನೀಡಲಾಗಿದೆ’ ಎಂದ ಸಚಿವರು, ‘ನಾವು ಅರ್ಹತೆ ಮತ್ತು ಉದ್ದೇಶದ ಆಧಾರದಲ್ಲಿ ಭೂಮಿ ಮಂಜೂರಾತಿಯನ್ನು ಪರಿಶೀಲಿಸುತ್ತೇವೆ. ಸಾರ್ವಜನಿಕ ಹಿತಾಸಕ್ತಿ ಇದೆಯೇ ಅಥವಾ ಇಲ್ಲವೇ ಎಂಬುದನ್ನೂ ನೋಡುತ್ತೇವೆ’  ಎಂದು ಹೇಳಿದ್ದಾರೆ.

2019 ಮತ್ತು 2022ರ ನಡುವೆ ಬಿಜೆಪಿ ಅಧಿಕಾರದಲ್ಲಿದ್ದಾಗ ಆದಿಚುಂಚುನಗಿರಿ ಮಠ, ಸಿದ್ದಗಂಗಾ ಮಠ, ಇಸ್ಕಾನ್, ರಾಷ್ಟ್ರೋತ್ಥಾನ ಪರಿಷತ್, ಕರ್ನಾಟಕ ಲಾನ್ ಟೆನಿಸ್ ಸಂಘ, ಒಕ್ಕಲಿಗರ ಸಂಘ ಸೇರಿದಂತೆ ವಿವಿಧ ಸಂಸ್ಥೆಗಳಿಗೆ ಒಂಬತ್ತು ಜಿಲ್ಲೆಗಳಲ್ಲಿ 252.36 ಎಕರೆ ಗೋಮಾಳ ಭೂಮಿ ಮಂಜೂರಾಗಿದೆ.

ನಾವು ಅವಸರದ ಹಂಚಿಕೆಗಳ ಪ್ರಕರಣಗಳನ್ನು ಪರಿಶೀಲಿಸುತ್ತಿದ್ದೇವೆ, ಇದರಲ್ಲಿ ಅರ್ಹವಲ್ಲದ ಅನುದಾನಗಳು ಸೇರಿವೆ" ಎಂದು ಕೃಷ್ಣ ಬೈರೇಗೌಡ ಹೇಳಿದರು. ಗೋಶಾಲೆಯ ಉದ್ದೇಶಕ್ಕಾಗಿ ಒಂದು ಲಾಭ ರಹಿತ ಸಂಸ್ಥೆಗೆ 35 ಎಕರೆ ಭೂಮಿಯನ್ನು ನೀಡಲಾಗಿದೆ ಎಂದು ಸಚಿವರು ಗಮನಸೆಳೆದರು. "ನಾವು ಅರ್ಹತೆ ಮತ್ತು ಉದ್ದೇಶದ ಆಧಾರದ ಮೇಲೆ ಅನುದಾನವನ್ನು ಪರಿಶೀಲಿಸುತ್ತೇವೆ. ಸಾರ್ವಜನಿಕ ಹಿತಾಸಕ್ತಿ ಇದೆಯೇ ಅಥವಾ ಇಲ್ಲವೇ ಎಂಬುದನ್ನು ನಾವು ನೋಡುತ್ತೇವೆ ಎಂದು ಅವರು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT