ಸಾಂದರ್ಭಿಕ ಚಿತ್ರ 
ರಾಜ್ಯ

ಧರ್ಮಸ್ಥಳ: ಅಮಾನವೀಯವಾಗಿ ಜಾನುವಾರು ಸಾಗಣೆ ಮಾಡುತ್ತಿದ್ದ ನಾಲ್ವರು ಬಿಜೆಪಿ ಕಾರ್ಯಕರ್ತರ ಬಂಧನ

ಮೂರು ವಾಹನಗಳನ್ನು ಬಳಸಿ ಅಮಾನವೀಯವಾಗಿ ಜಾನುವಾರು ಸಾಗಣೆಯಲ್ಲಿ ತೊಡಗಿದ್ದಕ್ಕಾಗಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಗೆ ಸೇರಿದ ನಾಲ್ವರು ವ್ಯಕ್ತಿಗಳನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದಾರೆ.

ಧರ್ಮಸ್ಥಳ: ಮೂರು ವಾಹನಗಳನ್ನು ಬಳಸಿ ಅಮಾನವೀಯವಾಗಿ ಜಾನುವಾರು ಸಾಗಣೆಯಲ್ಲಿ ತೊಡಗಿದ್ದಕ್ಕಾಗಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಗೆ ಸೇರಿದ ನಾಲ್ವರು ವ್ಯಕ್ತಿಗಳನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದಾರೆ.

ಬಂಧಿತರನ್ನು ನಾವೂರು ಗ್ರಾಮದ ಮೋರ್ತಾಜೆ ನಿವಾಸಿ ಪ್ರಮೋದ್ ಸಾಲಿಯಾನ್, ಒಳಗದ್ದೆಯ ಪುಷ್ಪರಾಜ್, ಹಾಸನದ ಅರಕಲಗೂಡು ನಿವಾಸಿ ಚನ್ನಕೇಶವ, ಹೊಳೆನರಸೀಪುರ ನಿವಾಸಿ ಸಂದೀಪ್ ಹಿರೇಬೆಳಗುಳಿ ಎಂದು ಗುರುತಿಸಲಾಗಿದೆ. ನಾಲ್ವರೂ ಸಕ್ರಿಯ ಬಿಜೆಪಿ ಕಾರ್ಯಕರ್ತರು ಎಂದು ವರದಿಯಾಗಿದೆ.

ಖಚಿತ ಸುಳಿವಿನ ಮೇರೆಗೆ ಧರ್ಮಸ್ಥಳ ಪೊಲೀಸ್ ಠಾಣೆಯ ಎಸ್‌ಐ ಅನಿಲ್ ಕುಮಾರ್ ನೇತೃತ್ವದ ಪೊಲೀಸ್ ತಂಡ ಜುಲೈ 12 ರಂದು ರಾತ್ರಿ ಧರ್ಮಸ್ಥಳದ ಕನ್ಯಾಡಿ ರಾಮಮಂದಿರದ ಬಳಿ ವಾಹನ ತಪಾಸಣೆ ನಡೆಸಿತು.

ಉಜಿರೆಯಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಎರಡು ಪಿಕಪ್ ಸೇರಿದಂತೆ ಮೂರು ವಾಹನಗಳು ಜಾನುವಾರುಗಳನ್ನು ಸಾಗಿಸುತ್ತಿರುವುದು ಪತ್ತೆಯಾಗಿದೆ. ಆರು ಹಸುಗಳು ಮತ್ತು ಎರಡು ಗಂಡು ಕರುಗಳು ಸೇರಿದಂತೆ ಎಂಟು ಜಾನುವಾರುಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.

ವಶಪಡಿಸಿಕೊಂಡ ಜಾನುವಾರುಗಳ ಮೌಲ್ಯ 65000 ರೂ.ಗಳಾಗಿದ್ದು, ವಾಹನಗಳ ಮೌಲ್ಯ 7 ಲಕ್ಷ ರೂ. ಆಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT