ಸಚಿವ ಎಚ್ ಕೆ ಪಾಟೀಲ್ 
ರಾಜ್ಯ

ಜಿಎಸ್ ಟಿ ಕಲೆಕ್ಷನ್ ಸೋರಿಕೆ ತಡೆಗೆ ಕ್ರಮ; ಇ-ಕಾಮರ್ಸ್ ಮಾರಾಟಗಾರರ ಲೆಕ್ಕ ಪರಿಶೋಧನೆ, ತಪಾಸಣೆ ಹೆಚ್ಚಳ: ಎಚ್.ಕೆ. ಪಾಟೀಲ್

ರಾಜ್ಯದಲ್ಲಿ ಜಿಎಸ್‌ಟಿ ಕಲೆಕ್ಷನ್ ಗೆ ಸಂಬಂಧಿಸಿದಂತೆ ಸೋರಿಕೆ ತಡೆಯಲು ಸರ್ಕಾರ ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದು, ಇ-ಕಾಮರ್ಸ್ ಮಾರಾಟಗಾರರ ಪರಿಶೋಧನೆ ಮತ್ತು ತಪಾಸಣೆಯನ್ನು ಹೆಚ್ಚಿಸಲಾಗುವುದು ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ. ಪಾಟೀಲ್ ಶುಕ್ರವಾರ ಹೇಳಿದ್ದಾರೆ.

ಬೆಂಗಳೂರು: ರಾಜ್ಯದಲ್ಲಿ ಜಿಎಸ್‌ಟಿ ಕಲೆಕ್ಷನ್ ಗೆ ಸಂಬಂಧಿಸಿದಂತೆ ಸೋರಿಕೆ ತಡೆಯಲು ಸರ್ಕಾರ ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದು, ಇ-ಕಾಮರ್ಸ್ ಮಾರಾಟಗಾರರ ಪರಿಶೋಧನೆ ಮತ್ತು ತಪಾಸಣೆಯನ್ನು ಹೆಚ್ಚಿಸಲಾಗುವುದು ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್. ಕೆ. ಪಾಟೀಲ್ ಶುಕ್ರವಾರ ಹೇಳಿದ್ದಾರೆ.

ವಿಧಾನಸಭೆಯಲ್ಲಿ ಕರ್ನಾಟಕ ಸರಕು ಮತ್ತು ಸೇವಾ ತೆರಿಗೆ ವಿಧೇಯಕ 2023ನ್ನು ಪರಿಗಣನೆಗೆ ಪ್ರಾಯೋಗಿಕವಾಗಿ ಮಂಡಿಸುವ ವೇಳೆ ಸಚಿವರು ಈ ವಿಷಯ ತಿಳಿಸಿದರು. ನಂತರ ವಿಧೇಯಕವನ್ನು ಅಂಗೀಕರಿಸಲಾಯಿತು. ವ್ಯಾಟ್ ಯುಗದಲ್ಲಿ ರಾಜ್ಯದಲ್ಲಿ 5,80,000 ತೆರಿಗೆ ಪಾವತಿದಾರರಿದ್ದರು. ಇಂದು ಜಿಎಸ್‌ಟಿ ಅವಧಿಯಲ್ಲಿ ಅದು 10 ಲಕ್ಷಕ್ಕೆ ಏರಿದೆ, ಆದ್ದರಿಂದ ಸುಮಾರು 4.2ಲಕ್ಷ ತೆರಿಗೆದಾರರು ನಿವ್ವಳ ತೆರಿಗೆ ವ್ಯಾಪ್ತಿಗೆ ಬಂದಿದ್ದಾರೆ ಎಂದರು. 

ಕರ್ನಾಟಕವು 2017-18ರಲ್ಲಿ 44,816 ಕೋಟಿ ರೂ.ಗಳಿಂದ 2022-23ರಲ್ಲಿ 81,848 ಕೋಟಿ ರೂ.ಗೆ ಜಿಎಸ್‌ಟಿ ಸಂಗ್ರಹದಲ್ಲಿ ಹೆಚ್ಚುತ್ತಿರುವ ಪ್ರವೃತ್ತಿಯನ್ನು ಪ್ರದರ್ಶಿಸಿದೆ. ನಮ್ಮ ಬಜೆಟ್ ಗಾತ್ರ ಮತ್ತು ಆದಾಯ ಹೆಚ್ಚಳಕ್ಕೆ ಜಿಎಸ್‌ಟಿ ಅಪಾರ ಕೊಡುಗೆ ನೀಡಿದೆ ಎಂದು ಪಾಟೀಲ್ ಹೇಳಿದರು. ಸೇವಾ ವಲಯದಲ್ಲಿ ತೆರಿಗೆ ವಂಚನೆ ಹೆಚ್ಚು ಎಂಬ ಅಭಿಪ್ರಾಯವಿದೆ. ಆದರೆ, ನಮ್ಮ ಕೊಡುಗೆಯ ಶೇಕಡಾ 56 ರಷ್ಟು ಸೇವಾ ವಲಯದಿದ ಬಂದಿದೆ ಎಂದು ಅವರು ತಿಳಿಸಿದರು. 

ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಶಾಸಕ ಶಿವಲಿಂಗೇಗೌಡ, ಎಚ್.ಡಿ. ರೇವಣ್ಣ ಮತ್ತಿತರರು ಜಿಎಸ್ ಟಿ, ತೆರಿಗೆ ವಂಚನೆ ಪ್ರಕರಣಗಳನ್ನು ಪ್ರಸ್ತಾಪಿಸಿ ಸರ್ಕಾರ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು. ಜಿಎಸ್ ಟಿ ಸೋರಿಕೆ ತಡೆಗಟ್ಟಲು ಸರ್ಕಾರ ಎಲ್ಲಾ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುತ್ತದೆ ಎಂದು ಸಚಿವರು ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT