ಸಚಿವ ಎಚ್ ಕೆ ಪಾಟೀಲ್ 
ರಾಜ್ಯ

ಜಿಎಸ್ ಟಿ ಕಲೆಕ್ಷನ್ ಸೋರಿಕೆ ತಡೆಗೆ ಕ್ರಮ; ಇ-ಕಾಮರ್ಸ್ ಮಾರಾಟಗಾರರ ಲೆಕ್ಕ ಪರಿಶೋಧನೆ, ತಪಾಸಣೆ ಹೆಚ್ಚಳ: ಎಚ್.ಕೆ. ಪಾಟೀಲ್

ರಾಜ್ಯದಲ್ಲಿ ಜಿಎಸ್‌ಟಿ ಕಲೆಕ್ಷನ್ ಗೆ ಸಂಬಂಧಿಸಿದಂತೆ ಸೋರಿಕೆ ತಡೆಯಲು ಸರ್ಕಾರ ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದು, ಇ-ಕಾಮರ್ಸ್ ಮಾರಾಟಗಾರರ ಪರಿಶೋಧನೆ ಮತ್ತು ತಪಾಸಣೆಯನ್ನು ಹೆಚ್ಚಿಸಲಾಗುವುದು ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ. ಪಾಟೀಲ್ ಶುಕ್ರವಾರ ಹೇಳಿದ್ದಾರೆ.

ಬೆಂಗಳೂರು: ರಾಜ್ಯದಲ್ಲಿ ಜಿಎಸ್‌ಟಿ ಕಲೆಕ್ಷನ್ ಗೆ ಸಂಬಂಧಿಸಿದಂತೆ ಸೋರಿಕೆ ತಡೆಯಲು ಸರ್ಕಾರ ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದು, ಇ-ಕಾಮರ್ಸ್ ಮಾರಾಟಗಾರರ ಪರಿಶೋಧನೆ ಮತ್ತು ತಪಾಸಣೆಯನ್ನು ಹೆಚ್ಚಿಸಲಾಗುವುದು ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್. ಕೆ. ಪಾಟೀಲ್ ಶುಕ್ರವಾರ ಹೇಳಿದ್ದಾರೆ.

ವಿಧಾನಸಭೆಯಲ್ಲಿ ಕರ್ನಾಟಕ ಸರಕು ಮತ್ತು ಸೇವಾ ತೆರಿಗೆ ವಿಧೇಯಕ 2023ನ್ನು ಪರಿಗಣನೆಗೆ ಪ್ರಾಯೋಗಿಕವಾಗಿ ಮಂಡಿಸುವ ವೇಳೆ ಸಚಿವರು ಈ ವಿಷಯ ತಿಳಿಸಿದರು. ನಂತರ ವಿಧೇಯಕವನ್ನು ಅಂಗೀಕರಿಸಲಾಯಿತು. ವ್ಯಾಟ್ ಯುಗದಲ್ಲಿ ರಾಜ್ಯದಲ್ಲಿ 5,80,000 ತೆರಿಗೆ ಪಾವತಿದಾರರಿದ್ದರು. ಇಂದು ಜಿಎಸ್‌ಟಿ ಅವಧಿಯಲ್ಲಿ ಅದು 10 ಲಕ್ಷಕ್ಕೆ ಏರಿದೆ, ಆದ್ದರಿಂದ ಸುಮಾರು 4.2ಲಕ್ಷ ತೆರಿಗೆದಾರರು ನಿವ್ವಳ ತೆರಿಗೆ ವ್ಯಾಪ್ತಿಗೆ ಬಂದಿದ್ದಾರೆ ಎಂದರು. 

ಕರ್ನಾಟಕವು 2017-18ರಲ್ಲಿ 44,816 ಕೋಟಿ ರೂ.ಗಳಿಂದ 2022-23ರಲ್ಲಿ 81,848 ಕೋಟಿ ರೂ.ಗೆ ಜಿಎಸ್‌ಟಿ ಸಂಗ್ರಹದಲ್ಲಿ ಹೆಚ್ಚುತ್ತಿರುವ ಪ್ರವೃತ್ತಿಯನ್ನು ಪ್ರದರ್ಶಿಸಿದೆ. ನಮ್ಮ ಬಜೆಟ್ ಗಾತ್ರ ಮತ್ತು ಆದಾಯ ಹೆಚ್ಚಳಕ್ಕೆ ಜಿಎಸ್‌ಟಿ ಅಪಾರ ಕೊಡುಗೆ ನೀಡಿದೆ ಎಂದು ಪಾಟೀಲ್ ಹೇಳಿದರು. ಸೇವಾ ವಲಯದಲ್ಲಿ ತೆರಿಗೆ ವಂಚನೆ ಹೆಚ್ಚು ಎಂಬ ಅಭಿಪ್ರಾಯವಿದೆ. ಆದರೆ, ನಮ್ಮ ಕೊಡುಗೆಯ ಶೇಕಡಾ 56 ರಷ್ಟು ಸೇವಾ ವಲಯದಿದ ಬಂದಿದೆ ಎಂದು ಅವರು ತಿಳಿಸಿದರು. 

ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಶಾಸಕ ಶಿವಲಿಂಗೇಗೌಡ, ಎಚ್.ಡಿ. ರೇವಣ್ಣ ಮತ್ತಿತರರು ಜಿಎಸ್ ಟಿ, ತೆರಿಗೆ ವಂಚನೆ ಪ್ರಕರಣಗಳನ್ನು ಪ್ರಸ್ತಾಪಿಸಿ ಸರ್ಕಾರ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು. ಜಿಎಸ್ ಟಿ ಸೋರಿಕೆ ತಡೆಗಟ್ಟಲು ಸರ್ಕಾರ ಎಲ್ಲಾ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುತ್ತದೆ ಎಂದು ಸಚಿವರು ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

SCROLL FOR NEXT