ಪ್ರಾತಿನಿಧಿಕ ಚಿತ್ರ 
ರಾಜ್ಯ

ಕೊಡಗಿನಲ್ಲಿ ವಿದ್ಯುತ್ ಬಿಲ್ ನೀಡಲು ಬಂದಿದ್ದ ಮೀಟರ್ ರೀಡರ್‌ಗೆ ಚಾಕು ಇರಿತ

ಉಚಿತ ವಿದ್ಯುತ್ ಯೋಜನೆ ವಿಚಾರವಾಗಿ ಬಿಲ್ ಕಟ್ಟಲು ನಿರಾಕರಿಸುವ ಸಾರ್ವಜನಿಕರ ಮಧ್ಯೆ ಅಲ್ಲಲ್ಲಿ ಹಲ್ಲೆ ಪ್ರಕರಣಗಳೂ ವರದಿಯಾಗಿದ್ದವು. ಇದೀಗ ವಿದ್ಯುತ್ ಬಿಲ್ ಸರಿ ಇಲ್ಲ ಎಂದು ಆರೋಪಿಸಿ ಬಿಲ್ ಕಲೆಕ್ಟರ್‌ಗೆ ಚಾಕುವಿನಿಂದ ಇರಿದ ಆತಂಕಕಾರಿ ಘಟನೆ ಕೊಡಗಿನ ಮಾದಾಪುರದಲ್ಲಿ ನಡೆದಿದೆ.

ಮಡಿಕೇರಿ: ಉಚಿತ ವಿದ್ಯುತ್ ಯೋಜನೆ ವಿಚಾರವಾಗಿ ಬಿಲ್ ಕಟ್ಟಲು ನಿರಾಕರಿಸುವ ಸಾರ್ವಜನಿಕರ ಮಧ್ಯೆ ಅಲ್ಲಲ್ಲಿ ಹಲ್ಲೆ ಪ್ರಕರಣಗಳೂ ವರದಿಯಾಗಿದ್ದವು. ಇದೀಗ ವಿದ್ಯುತ್ ಬಿಲ್ ಸರಿ ಇಲ್ಲ ಎಂದು ಆರೋಪಿಸಿ ಮೀಟರ್ ರೀಡರ್‌ಗೆ ಚಾಕುವಿನಿಂದ ಇರಿದ ಆತಂಕಕಾರಿ ಘಟನೆ ಕೊಡಗಿನ ಮಾದಾಪುರದಲ್ಲಿ ನಡೆದಿದೆ.

ಬಿಲ್ ಕೊಡಲು ಬಂದಿದ್ದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತದ ಮೀಟರ್ ರೀಡರ್ ವಿರುದ್ಧ ಗುರುವಾರ ಸಿಟ್ಟಿಗೆದ್ದ ಗ್ರಾಹಕರು ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆ.

ಮೀಟರ್ ರೀಡರ್ ಪ್ರಶಾಂತ್ ಅವರನ್ನು ಮಡಿಕೇರಿಯ ಜಿಲ್ಲಾ ಆಸ್ಪತ್ರೆಯ ಐಸಿಯುಗೆ ಸ್ಥಳಾಂತರಿಸಲಾಗಿದೆ.

‘ಹೆಚ್ಚಿನ’ ಮೊತ್ತದ ವಿದ್ಯುತ್ ಬಿಲ್ ನೀಡಿದಾಗ ಗ್ರಾಹಕ ರಿತೇಶ್ ಕೋಪಗೊಂಡಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಪ್ರಕರಣದಲ್ಲಿ ಯಾವುದೇ ಬಂಧನವಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಹೆಚ್ಚಿನ ವಿದ್ಯುತ್ ಬಿಲ್ ನೀಡಿದ ಹಿನ್ನೆಲೆ ರಿತೇಶ್ ಬಿಲ್ ಸರಿಯಿಲ್ಲ ಎಂದು ಆರೋಪಿಸಿ ಬಿಲ್ ಕಲೆಕ್ಟರ್ ಪ್ರಶಾಂತ್ ಜತೆಗೆ ವಾಗ್ವಾದ ನಡೆಸಿದ್ದಾರೆ. ಈ ವೇಳೆ ಕೋಪಗೊಂಡು ಚಾಕುವಿನಿಂದ ಹಲ್ಲೆ ನಡೆಸಿದ್ದಾರೆ. ಗಾಯಗೊಂಡ ಪ್ರಶಾಂತ್ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಹಲ್ಲೆ ಮಾಡಿದ ರಿತೇಶ್ ತಲೆಮರೆಸಿಕೊಂಡಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಸೋಮವಾರಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ಮೊದಲ ಬಾರಿಗೆ ದಾಳಿ ಕುರಿತು ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

ಚಾಮುಂಡೇಶ್ವರಿ ದೇವಿ ಬಗ್ಗೆ ಗೌರವವಿದ್ದು, ಧಾರ್ಮಿಕ ಭಾವನೆಗಳ ಗೌರವಿಸುತ್ತೇನೆ; ಬಾನು ಮುಷ್ತಾಕ್

JC ರಸ್ತೆಯಲ್ಲಿ White-topping ಕಾಮಗಾರಿ: ಆ.30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

SCROLL FOR NEXT