ವಂಶಿಕಾ-ನಿಶಾ 
ರಾಜ್ಯ

ವಂಶಿಕಾ ಮಾಸ್ಟರ್ ಆನಂದ್ ಹೆಸರಲ್ಲಿ ವಂಚನೆ: ನಿಶಾಗೆ 14 ದಿನಗಳ ನ್ಯಾಯಾಂಗ ಬಂಧನ

ನಟ ಮಾಸ್ಟರ್ ಆನಂದ್ ಪುತ್ರಿಯಾದ ಬಾಲನಟಿ ವಂಶಿಕಾ ಹೆಸರಿನಲ್ಲಿ ಜನರನ್ನು ವಂಚಿಸಿರುವ ನಿಶಾ ನರಸಪ್ಪಳನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ 39ನೇ ಎಸಿಎಮ್ಎಮ್ ಕೋರ್ಟ್ ಆದೇಶ ಹೊರಡಿಸಿದೆ. 

ಬೆಂಗಳೂರು: ನಟ ಮಾಸ್ಟರ್ ಆನಂದ್ ಪುತ್ರಿಯಾದ ಬಾಲನಟಿ ವಂಶಿಕಾ ಹೆಸರಿನಲ್ಲಿ ಜನರನ್ನು ವಂಚಿಸಿರುವ ನಿಶಾ ನರಸಪ್ಪಳನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ 39ನೇ ಎಸಿಎಮ್ಎಮ್ ಕೋರ್ಟ್ ಆದೇಶ ಹೊರಡಿಸಿದೆ. 

ವಂಚನೆ ಬಗ್ಗೆ ವಂಶಿಕಾ ತಾಯಿ ಯಶಸ್ವಿನಿ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ಹಿನ್ನೆಲೆಯಲ್ಲಿ ನಿಶಾ ನರಸಪ್ಪಳನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದರು. ನಂತರ 39ನೇ ಎಸಿಎಮ್ಎಮ್ ಕೋರ್ಟ್ ಮುಂದೆ ನಿಶಾಳನ್ನು ಹಾಜರುಪಡಿಸಿದ್ದರು.

ಯಶಸ್ವಿನಿ ಅವರಿಗೆ ಇನ್‌ಸ್ಟಾಗ್ರಾಂ ಮೂಲಕ ಆರೋಪಿ ನಿಶಾ ಎಂಬಾಕೆಯ ಪರಿಚಯವಾಗಿತ್ತು. ಕಾರ್ಯಕ್ರಮವೊಂದಕ್ಕೆ ತಾಯಿ–ಮಗಳನ್ನು ಆರೋಪಿ ಆಹ್ವಾನಿಸಿದ್ದರು. ಇದರಿಂದ ಮತ್ತಷ್ಟು ಹತ್ತಿರವಾಗಿದ್ದರು.

ವಂಶಿಕಾ ಹೆಸರು ಹಾಗೂ ಫೋಟೊಗಳನ್ನು ದುರ್ಬಳಕೆ ಮಾಡಿಕೊಂಡಿದ್ದ ಆರೋಪಿ, ಮಕ್ಕಳಿಗೆ ಟಿ.ವಿ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಅವಕಾಶ ಕೊಡಿಸುತ್ತೇನೆ ಎಂದು ಜಾಹೀರಾತು ನೀಡುತ್ತಿದ್ದರು. ಫೋಟೊಶೂಟ್ ಹೆಸರಿನಲ್ಲಿ ಪೋಷಕರಿಂದ ಹಣ ಪಡೆಯುತ್ತಿದ್ದರು. ನಂತರ, ಯಾವುದೇ ಅವಕಾಶ ಕೊಡಿಸದೇ ಜನರನ್ನು ವಂಚಿಸುತ್ತಿದ್ದರು. ಇದುವರೆಗೂ 17 ಜನರಿಗೆ ನಿಶಾ ವಂಚಿಸಿದ್ದಾಳೆ ಎಂದು  ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

SCROLL FOR NEXT