ಗೃಹ ಸಚಿವ ಡಾ.ಜಿ.ಪರಮೇಶ್ವರ್ 
ರಾಜ್ಯ

ಕಾರಾಗೃಹಗಳಲ್ಲಿ ಕೈದಿಗಳಿಗೆ ಸ್ಥಳಾವಕಾಶದ ಕೊರತೆ, ಹೆಚ್ಚುವರಿ ಜೈಲುಗಳ ನಿರ್ಮಾಣಕ್ಕೆ ಕ್ರಮ: ಗೃಹ ಸಚಿವ 

ರಾಜ್ಯದ ಬಹುತೇಕ ಕಾರಾಗೃಹಗಳಲ್ಲಿ ಸ್ಥಳಾವಕಾಶ ಕೊರತೆಯಿದ್ದು. ಈ ಹಿನ್ನೆಲೆಯಲ್ಲಿ ಹೆಚ್ಚುವರಿ ಜೈಲುಗಳ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗಿದೆ ಎಂದು ಗೃಹ ಸಚಿವ ಪರಮೇಶ್ವರ್ ಅವರು ಗುರುವಾರ ಹೇಳಿದ್ದಾರೆ.

ಬೆಂಗಳೂರು: ರಾಜ್ಯದ ಬಹುತೇಕ ಕಾರಾಗೃಹಗಳಲ್ಲಿ ಸ್ಥಳಾವಕಾಶ ಕೊರತೆಯಿದ್ದು. ಈ ಹಿನ್ನೆಲೆಯಲ್ಲಿ ಹೆಚ್ಚುವರಿ ಜೈಲುಗಳ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗಿದೆ ಎಂದು ಗೃಹ ಸಚಿವ ಪರಮೇಶ್ವರ್ ಅವರು ಗುರುವಾರ ಹೇಳಿದ್ದಾರೆ.

ಬಿಜೆಪಿ ಎಂಎಲ್ಸಿ ಪ್ರತಾಪ್ ಸಿಂಹ ನಾಯಕ್ ಕೆ ಅವರ ಪ್ರಶ್ನೆಗೆ ಉತ್ತರಿಸಿದ ಪರಮೇಶ್ವರ್ ಅವರು, ರಾಜ್ಯದಲ್ಲಿ 54 ಕಾರಾಗೃಹಗಳಿದ್ದು, ಅವುಗಳಲ್ಲಿ 9 ಕೇಂದ್ರ, 21 ಜಿಲ್ಲಾ ಕಾರಾಗೃಹ, 29 ತಾಲೂಕು ಕಾರಾಗೃಹಗಳಿವೆ. ಪ್ರಸ್ತುತ 14,237 ಬಂಧಿಗಳಿಗೆ ಅವಕಾಶವಿದೆಯಾದರೂ, ಈಗ 16,053 ಮಂದಿ ಕೈದಿಗಳು ಇದ್ದಾರೆ ಎಂದು ಹೇಳಿದರು.

ರಾಜ್ಯದಲ್ಲಿಯೇ ಅತಿ ದೊಡ್ಡದಾದ ಬೆಂಗಳೂರು ಕೇಂದ್ರ ಕಾರಾಗೃಹದ ಸಾಮರ್ಥ್ಯ 4,146 ಆಗಿದೆ. ಆದರೆ, ಆ ಕಾರಾಗೃಹದಲ್ಲಿ 5,261 ಕೈದಿಗಳನ್ನು ಅಲ್ಲಿ ಇರಿಸಲಾಗಿದೆ, ಸಾಮರ್ಥ್ಯಕ್ಕಿಂತಲೂ ಶೇ.26.89 ಹೆಚ್ಚಿನ ಕೈದಿಗಳನ್ನು ಕಾರಾಗೃಹದಲ್ಲಿ ಇರಿಸಲಾಗಿದೆ. 48 ಕೈದಿಗಳನ್ನು ಇರಿಸಬಹುದಾದ ಗದಗ ಜಿಲ್ಲಾ ಕಾರಾಗೃಹದಲ್ಲಿ 124 ಕೈದಿಗಳನ್ನು ಇರಿಸಲಾಗಿದೆ, ಅದೇ ರೀತಿ 40 ಕೈದಿಗಳನ್ನು ಇರಿಸಬಹುದಾದ ಸಾಮರ್ಥ್ಯವಿರುವ ಗೋಕಾಕ ಜೈಲಿನಲ್ಲಿ 83 ಕೈದಿಗಳನ್ನು ಇರಿಸಲಾಗಿದೆ.

ರಾಮನಗರ ಜಿಲ್ಲಾ ಕಾರಾಗೃಹ (ಶೇ.39.91), ಕೋಲಾರ ಜಿಲ್ಲಾ ಕಾರಾಗೃಹ (ಶೇ.68.29), ಮೈಸೂರು ಕೇಂದ್ರ ಕಾರಾಗೃಹ (ಶೇ.48.58), ಮಂಗಳೂರು ಜಿಲ್ಲಾ ಕಾರಾಗೃಹ (ಶೇ.75.71), ಚಿಕ್ಕಮಗಳೂರು ಜಿಲ್ಲಾ ಕಾರಾಗೃಹ (ಶೇ.74.50%), ಕಲಬುರಗಿ ಕೇಂದ್ರೀಯ ಕಾರಾಗೃಹಗಳ (ಶೇ.64.04).ಸೇರಿದಂತೆ ಇತರ ಕೆಲವು ಜೈಲುಗಳಲ್ಲಿ ಹೆಚ್ಚಿನ ಸಾಮರ್ಥ್ಯಕ್ಕಿಂತಲೂ ಹೆಚ್ಚಿನ ಕೈದಿಗಳನ್ನು ಇರಿಸಲಾಗಿದೆ.

ಈ ಹಿನ್ನೆಲೆಯಲ್ಲಿ ಬೆಂಗಳೂರು, ಮಂಗಳೂರು, ವಿಜಯಪುರ ಮತ್ತು ಬೀದರ್‌ನಲ್ಲಿ 1,000 ಸಾಮರ್ಥ್ಯದ ಕಾರಾಗೃಹಗಳ ನಿರ್ಮಾಣವನ್ನು ಕ್ರಮ ಕೈಗೊಳ್ಳಲಾಗಿದೆ, ಜೊತೆಗೆ 8 ಕಾರಾಗೃಹಗಳಲ್ಲಿ ಹೆಚ್ಚುವರಿ ಬ್ಯಾರಕ್‌ಗಳನ್ನು ನಿರ್ಮಿಸಲಾಗುತ್ತಿದೆ, ಇದರಲ್ಲಿ ಇನ್ನೂ 1,345 ಕೈದಿಗಳು ಇರಬಹುದಾಗಿದೆ ಎಂದು ಮಾಹಿತಿ ನೀಡಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ಭ್ರಷ್ಟಾಚಾರ ಪ್ರಕರಣ: ಬಂಧಿತ ಶ್ರೀಲಂಕಾ ಮಾಜಿ ಅಧ್ಯಕ್ಷ ವಿಕ್ರಮಸಿಂಘೆಗೆ ಜಾಮೀನು

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

SCROLL FOR NEXT