ಆನಂದ್ ಸಿಂಗ್ 
ರಾಜ್ಯ

ಬಿಡಿಸಿಸಿ ಬ್ಯಾಂಕ್​ ಅಧ್ಯಕ್ಷ ಸ್ಥಾನಕ್ಕೆ ಆನಂದ್ ಸಿಂಗ್ ದಿಢೀರ್ ರಾಜೀನಾಮೆ

ಪ್ರತಿಷ್ಠಿತ ಬಳ್ಳಾರಿ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್(ಬಿಡಿಸಿಸಿ)​ ಅಧ್ಯಕ್ಷ ಸ್ಥಾನಕ್ಕೆ ಮಾಜಿ ಸಚಿವ ಆನಂದ್ ಸಿಂಗ್ ಅವರು ಶನಿವಾರ ದಿಢೀರ್ ರಾಜೀನಾಮೆ ನೀಡಿದ್ದು, ರಾಜಕೀಯ ವಲಯದಲ್ಲಿ ತೀವ್ರ ಚರ್ಚಗೆ ಗ್ರಾಸವಾಗಿದೆ.

ವಿಜಯನಗರ: ಪ್ರತಿಷ್ಠಿತ ಬಳ್ಳಾರಿ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್(ಬಿಡಿಸಿಸಿ)​ ಅಧ್ಯಕ್ಷ ಸ್ಥಾನಕ್ಕೆ ಮಾಜಿ ಸಚಿವ ಆನಂದ್ ಸಿಂಗ್ ಅವರು ಶನಿವಾರ ದಿಢೀರ್ ರಾಜೀನಾಮೆ ನೀಡಿದ್ದು, ರಾಜಕೀಯ ವಲಯದಲ್ಲಿ ತೀವ್ರ ಚರ್ಚಗೆ ಗ್ರಾಸವಾಗಿದೆ.

ರಾಜೀನಾಮೆಗೆ ವೈಯಕ್ತಿಕ ಕಾರಣ ನೀಡಿರುವ ಆನಂದ್ ಸಿಂಗ್ ಅವರು, ಜುಲೈ 1ರಿಂದಲೇ ಅನ್ವಯ ಆಗುವಂತೆ  ರಾಜೀನಾಮೆ ನೀಡಿದ್ದಾರೆ.

ಗ್ರಾಮೀಣ ಭಾಗದ ರೈತರ ಅನುಕೂಲಕ್ಕೆ ಸ್ಥಾಪಿಸಿರುವ ಬಳ್ಳಾರಿ ಮತ್ತು ವಿಜಯನಗರ ಅವಳಿ ಜಿಲ್ಲೆಯ ಪ್ರತಿಷ್ಠಿತ ಈ ಸಹಕಾರಿ ಬ್ಯಾಂಕ್ 100 ವರ್ಷದ ಇತಿಹಾಸ ಹೊಂದಿದೆ.

ಆನಂದ್ ಸಿಂಗ್ ಅವರು ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ ಬಳಿಕ ವಿಜಯನಗರವನ್ನು ನೂತನ ಜಿಲ್ಲೆಯನ್ನಾಗಿ ಮಾಡುವಲ್ಲಿ ಯಶಸ್ವಿಯಾಗಿದ್ದರು. ಆದರೆ, ವಿಜಯನಗರ ಜಿಲ್ಲೆಯಾಗಿ ರಚನೆಯಾದ ನಂತರ ನಡೆದ ವಿಧಾನಸಭೆ ಚುನಾವಣೆಯಲ್ಲಿ ಆನಂದ್ ಸಿಂಗ್ ತಮ್ಮ ಪುತ್ರ ಸಿದ್ಧಾರ್ಥ್ ಸಿಂಗ್ ಅವರನ್ನು ಬಿಜೆಪಿಯಿಂದ ಕಣಕ್ಕಿಳಿಸಿದ್ದರು. ಸಿದ್ಧಾರ್ಥ್​​​ ಸೋಲು ಕಂಡಿದ್ದಾರೆ. ಇದರಿಂದ ಆನಂದ್ ಸಿಂಗ್​ಗೆ ತೀವ್ರ ಮುಖಭಂಗವಾದಂತಾಗಿದೆ. ಇದರ ಬೆನ್ನಲ್ಲೇ ಇದೀಗ ಆನಂದ್ ಸಿಂಗ್ ಪ್ರತಿಷ್ಠಿತ ಬ್ಯಾಂಕ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದಾವಣಗೆರೆಯಲ್ಲಿ ಕಾಂಗ್ರೆಸ್ ಬೆನ್ನಿಗೆ ಚೂರಿ: ಸುರ್ಜೇವಾಲ ಕೈಸೇರಿದ ರಿಪೋರ್ಟ್; MLC ಅಬ್ದುಲ್ ಜಬ್ಬಾರ್ ರಾಜಿನಾಮೆ!

ದಾವಣಗೆರೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ: ಸಿಎಂ ರಾಜಕೀಯ ಕಾರ್ಯದರ್ಶಿ ನಸೀರ್ ತಲೆದಂಡ, ಜಮೀರ್ ಸಚಿವ ಸ್ಥಾನಕ್ಕೂ ಕುತ್ತು?

ಮಗ ವಿದೇಶದಲ್ಲಿ ಓದುತ್ತಿದ್ದಾನೆ, ಹಲ್ಲೆ ಕೇಸ್ ಕೈಬಿಡಿ: ಪುತ್ರನ ಭವಿಷ್ಯಕ್ಕಾಗಿ ಪ್ರಕರಣ ರದ್ದು ಕೋರಿದ ಅನಂತಕುಮಾರ್ ಹೆಗಡೆ!

ನಮಸ್ತೆ.. ಏನ್ರೀ ರಾಹುಲ್ ಹೇಗಿದ್ದೀರಾ? ; ಸಂಸತ್ ಭವನದ ಬಳಿ ಪ್ರಧಾನಿ ಮೋದಿ-Rahul Gandhi ಅಪರೂಪದ ಮುಖಾಮುಖಿ! Video

ಮಾತುಕತೆಗೂ ಮುನ್ನವೇ ಟೆಹ್ರಾನ್‌ಗೆ ದೊಡ್ಡ ಗೆಲುವು; ಫ್ರೀಜ್ ಮಾಡಲಾದ ಇರಾನ್ ಸ್ವತ್ತುಗಳ ಬಿಡುಗಡೆಗೆ ಅಮೆರಿಕ ಒಪ್ಪಿಗೆ!

SCROLL FOR NEXT